ನರಗುಂದ: (ಕೊಣ್ಣೂರ) ಅತೀವೃಷ್ಟಿ ಮಹಾಪುರದಿಂದ ತತ್ತರಿಸಿದ ರೈತರಿಗೆ ಕೋವೀಡ್ 19 ಮಹಾಮಾರಿಯು ಶಾಪವಾಗಿ ಪರೀಣಮಿಸಿರುವದರಿಂದ ರೈತರ ಜನಜೀವನ ಚಿಂತಾಜನಕವಾಗಿದೆ. ಅದರಲ್ಲೂ ವಿಷೇಶವಾಗಿ ತಾಲೂಕಿನ ಕೊಣ್ಣೂರ, ಶಿರೋಳ, ವಾಸನ, ಹಿರೇಕೊಪ್ಪ, ಚಿಕ್ಕನರಗುಂದ ರೈತರು ಮಲಪ್ರಭಾ ನದಿದಡದಲ್ಲಿರುವದರಿಂದ ತೋಟಗಾರಿಕೆ ಬೆಳೆಯ ಮೇಲೆ ಹೆಚ್ಚು ಅವಲಂಭಿತರಾಗಿದ್ದಾರೆ. ಇಲ್ಲಿನ ಪೇರಲ ಹಣ್ಣು ಹೆಚ್ಚು ಪ್ರಾಮುಖ್ಯೆತೆ ಪಡೆದಿದ್ದು, ಕಳೆದ ಒಂದುವರೆ ವರ್ಷದಿಂದ ಪ್ರಾಕೃತಿಕವಾಗಿ ನಷ್ಟ ಅನುಭವಿಸಿದ ರೈತರಿಗೆ ಕೋವೀಡ್ ಮಹಾಮಾರಿ ಬರೆಯಾಗಿದೆ.
ರೈತರ ಸಂಕಷ್ಟವನ್ನು ಗಮನದಲ್ಲಿಟ್ಟುಕೋಂಡು ರಾಜ್ಯ ಸರಕಾರ ಹಣ್ಣು ಬೆಳೆಗಾರರಿಗೆ ಪರಿಹಾರ ಘೋಷಿಸಿದ್ದು ತಾಲೂಕಿನ ಎಫ್.ಐ.ಡಿ ನೋಂದಣಿಯಾದ ಕೊಣ್ಣೂರ, ಶಿರೋಳ, ವಾಸನ, ಹಿರೇಕೊಪ್ಪ, ಚಿಕ್ಕನರಗುಂದ ಒಳಗೊಂಡತೆ 383 ರೈತರಿಗೆ ಹೆಕ್ಟೇರಗೆ (2.1/2 ಎಕರೆ) ಜಮೀನಿಗೆ 10000, ರೂಪಾಯಿಗಳನ್ನು ನಿಡುತ್ತಿದೆ.
ಈ ಹಿಂದೆ ಜಿ.ಪಿ.ಎಸ್ ತಂತ್ರಾಂಶದ ಮೂಲಕ ಮಾಹಿತಿ ಸಂಗ್ರಹಿಸಿದ್ದು ಮೇ.24 ರ ಸರಕಾರದ ಆದೇಶದಂತೆ ತಾಲೂಕಿನ ಕೊಣ್ಣೂರ, ಶಿರೋಳ, ವಾಸನ, ಹಿರೇಕೊಪ್ಪ, ಚಿಕ್ಕನರಗುಂದ ಎಫ.ಐ.ಡಿ ನೋಂದಣೆಯಾದ 383 ಹಣ್ಣು ಬೆಳೆಯುವ ರೈತರು ಹಾಗೂ ಎರಡು ಹೂ ಬೆಳೆಯುವ ರೈತರ ಪಟ್ಟಿ ತಯಾರಿಸಿದ್ದು ಪ್ರತಿ ಹೆಕ್ಟೇರ್ ಗೆ 10000 ರೂಪಾಯಿಗಳನ್ನು ಕೊಡಲಾಗುತ್ತಿದೆ. ರೈತರ ಆಧಾರ ಕಾರ್ಡ ಜೋಡನೆ ಇರುವ ಬ್ಯಾಂಕ್ ಖಾತೆಗೆ ನೇರವಾಗಿ ಹಣ ವರ್ಗಾಯಿಸಲಾಗುವುದು ಎಂದು ತಾಲೂಕಾ ತೋಟಗಾರಿಕೆ ಇಲಾಖೆ ಅಧಿಕಾರಿ ಆನಂದ ರಾ ನರಸನ್ನವರ ತಿಳಿಸಿದರು.

Leave a Reply

Your email address will not be published. Required fields are marked *

You May Also Like

ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ – ತಾಲೂಕಾಡಳಿತದಿಂದ ಅಹವಾಲು ಸ್ವೀಕಾರ
ಗೋಳು ತೋಡಿಕೊಂಡ ಗೊಳಸಂಗಿ ಜನ.!

ಉತ್ತರಪ್ರಭ ಸುದ್ದಿಗೊಳಸಂಗಿ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ನಿಮಿತ್ತ ಗೊಳಸಂಗಿ ಗ್ರಾಮದ ವಿಠ್ಠಲ-ರುಕ್ಮಿಣಿ ಮಂದಿರದಲ್ಲಿ…

ಉತ್ತರಪ್ರಭ ಫಲಶೃತಿ: ಏನರಾ ಆಗ್ಲಿ ಧೂಳಿಗೆ ತೆರಿಗೆ ಕಟ್ಟೊ ಕಾಟ ತಪ್ಪಿದ್ರ ಸಾಕು..!

ಮನೆ, ಜಾಗೆ, ನೀರು, ಕಟ್ಟಡ ಹೀಗಿಲ್ಲ ತೆರಿಗೆ ಕಟ್ಟುವುದನ್ನು ನಾವು ನೋಡಿದ್ದೇವೆ, ಕೇಳಿದ್ದೇವೆ. ಅಷ್ಟೆ ಏಕೆ ಸ್ವತಃ ಕಟ್ಟಿದ್ದೇವೆ. ಆದರೆ ಇದ್ಯಾವುದಿದು ಧೂಳಿಗೆ ಕರ ಕಟ್ಟುವುದು ಅಂದ್ಕೊಂಡ್ರಾ?

FG Rs.5,000 ಪರಿಹಾರ ನಿಧಿ ಹೆಸರಲ್ಲಿ ನಕಲಿ ಸಂದೇಶ ವೈರಲ್

ಆನ್ ಲೈನ್ ನಲ್ಲಿ ಹಣ ವಂಚನೆ, ನಕಲಿ ಐಡಿ ಬಳಸಿ ವಂಚನೆ ಇತ್ಯಾದಿ ಸುದ್ದಿಗಳಿಗೇನು ಬರವಿಲ್ಲ. ಆದರೆ, ಕೆಲವರು ಸರ್ಕಾರದ ಪರವಾಗಿ ಜನಾಭಿಪ್ರಾಯ ರೂಪಿಸಲು ಇಂತಹ ಸುಳ್ಳು ಸುದ್ದಿಗಳನ್ನು ಹರಡುತ್ತಾರೆ.

ಪದ್ಮಶ್ರೀ ಇಬ್ರಾಹಿಂ ಸುತಾರ್ ಇನ್ನಿಲ್ಲ

ಮಹಾಲಿಂಗಪುರ:ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣದಲ್ಲಿ ಹೃದಯಾಘಾತದಿಂದ ಪದ್ಮಶ್ರೀ ಪುರಸ್ಕೃತ, ಸೂಫಿ ಸಂತ, ತತ್ವಪದ…