ನರಗುಂದ: (ಕೊಣ್ಣೂರ) ಅತೀವೃಷ್ಟಿ ಮಹಾಪುರದಿಂದ ತತ್ತರಿಸಿದ ರೈತರಿಗೆ ಕೋವೀಡ್ 19 ಮಹಾಮಾರಿಯು ಶಾಪವಾಗಿ ಪರೀಣಮಿಸಿರುವದರಿಂದ ರೈತರ ಜನಜೀವನ ಚಿಂತಾಜನಕವಾಗಿದೆ. ಅದರಲ್ಲೂ ವಿಷೇಶವಾಗಿ ತಾಲೂಕಿನ ಕೊಣ್ಣೂರ, ಶಿರೋಳ, ವಾಸನ, ಹಿರೇಕೊಪ್ಪ, ಚಿಕ್ಕನರಗುಂದ ರೈತರು ಮಲಪ್ರಭಾ ನದಿದಡದಲ್ಲಿರುವದರಿಂದ ತೋಟಗಾರಿಕೆ ಬೆಳೆಯ ಮೇಲೆ ಹೆಚ್ಚು ಅವಲಂಭಿತರಾಗಿದ್ದಾರೆ. ಇಲ್ಲಿನ ಪೇರಲ ಹಣ್ಣು ಹೆಚ್ಚು ಪ್ರಾಮುಖ್ಯೆತೆ ಪಡೆದಿದ್ದು, ಕಳೆದ ಒಂದುವರೆ ವರ್ಷದಿಂದ ಪ್ರಾಕೃತಿಕವಾಗಿ ನಷ್ಟ ಅನುಭವಿಸಿದ ರೈತರಿಗೆ ಕೋವೀಡ್ ಮಹಾಮಾರಿ ಬರೆಯಾಗಿದೆ.
ರೈತರ ಸಂಕಷ್ಟವನ್ನು ಗಮನದಲ್ಲಿಟ್ಟುಕೋಂಡು ರಾಜ್ಯ ಸರಕಾರ ಹಣ್ಣು ಬೆಳೆಗಾರರಿಗೆ ಪರಿಹಾರ ಘೋಷಿಸಿದ್ದು ತಾಲೂಕಿನ ಎಫ್.ಐ.ಡಿ ನೋಂದಣಿಯಾದ ಕೊಣ್ಣೂರ, ಶಿರೋಳ, ವಾಸನ, ಹಿರೇಕೊಪ್ಪ, ಚಿಕ್ಕನರಗುಂದ ಒಳಗೊಂಡತೆ 383 ರೈತರಿಗೆ ಹೆಕ್ಟೇರಗೆ (2.1/2 ಎಕರೆ) ಜಮೀನಿಗೆ 10000, ರೂಪಾಯಿಗಳನ್ನು ನಿಡುತ್ತಿದೆ.
ಈ ಹಿಂದೆ ಜಿ.ಪಿ.ಎಸ್ ತಂತ್ರಾಂಶದ ಮೂಲಕ ಮಾಹಿತಿ ಸಂಗ್ರಹಿಸಿದ್ದು ಮೇ.24 ರ ಸರಕಾರದ ಆದೇಶದಂತೆ ತಾಲೂಕಿನ ಕೊಣ್ಣೂರ, ಶಿರೋಳ, ವಾಸನ, ಹಿರೇಕೊಪ್ಪ, ಚಿಕ್ಕನರಗುಂದ ಎಫ.ಐ.ಡಿ ನೋಂದಣೆಯಾದ 383 ಹಣ್ಣು ಬೆಳೆಯುವ ರೈತರು ಹಾಗೂ ಎರಡು ಹೂ ಬೆಳೆಯುವ ರೈತರ ಪಟ್ಟಿ ತಯಾರಿಸಿದ್ದು ಪ್ರತಿ ಹೆಕ್ಟೇರ್ ಗೆ 10000 ರೂಪಾಯಿಗಳನ್ನು ಕೊಡಲಾಗುತ್ತಿದೆ. ರೈತರ ಆಧಾರ ಕಾರ್ಡ ಜೋಡನೆ ಇರುವ ಬ್ಯಾಂಕ್ ಖಾತೆಗೆ ನೇರವಾಗಿ ಹಣ ವರ್ಗಾಯಿಸಲಾಗುವುದು ಎಂದು ತಾಲೂಕಾ ತೋಟಗಾರಿಕೆ ಇಲಾಖೆ ಅಧಿಕಾರಿ ಆನಂದ ರಾ ನರಸನ್ನವರ ತಿಳಿಸಿದರು.

Leave a Reply

Your email address will not be published. Required fields are marked *

You May Also Like

ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ನಿಗದಿ: ಎರಡು ಹಂತದಲ್ಲಿ ಚುನಾವಣೆ

ರಾಜ್ಯದಲ್ಲಿ ಈಗಾಗಲೇ ಹಳ್ಳಿ ಫೈಟ್ ಗೆ ದಿನಾಂಕ ಯಾವಾಗ ಎನ್ನುವ ಕುತೂಹಲ ಬಹುತೇಕರಲ್ಲಿತ್ತು. ಆದರೆ ಇಂದು ಕೊನೆಗೂ ಚುನಾವಣಾ ಆಯೋಗ ಮೂಹುರ್ತ ಫಿಕ್ಸ್ ಮಾಡಿದ್ದು, ಚುನಾವಣೆ ದಿನಾಂಕಕ್ಕೆ ಎದುರು ನೋಡುತ್ತಿದ್ದವರ ಸಂತಸಕ್ಕೆ ಕಾರಣವಾಗಿದೆ

ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ : ರಾಜ್ಯಕ್ಕೆ 5ನೇ ರ್ಯಾಂಕ್ ಪಡೆದ ಮೇಘನ್.ಎಚ್.ಕೆ

ಎಚ್.ಕೆ.ಮೇಘನ್: ನೀಟ್ ಪರೀಕ್ಷೆಯಲ್ಲಿ 5ನೇ ರ್ಯಾಂಕ್​ ಬಂದಿರುವುದು ಸಂತಸವನ್ನು ತಂದಿದೆ. ದೆಹಲಿಯ ಏಮ್ಸ್‌ನಲ್ಲಿ ಎಂಬಿಬಿಎಸ್ ಕೋರ್ಸ್‌ಗೆ ಸೇರಬೇಕು ಎಂದುಕೊಂಡಿದ್ದೇನೆ. ವೈದ್ಯನಾಗಬೇಕೆಂಬ ಕನಸು ಇಟ್ಟುಕೊಂಡಿದ್ದ ಹಿನ್ನೆಲೆಯಲ್ಲಿ ಪ್ರೌಢಶಾಲೆಗೆ ಬಂದ ತಕ್ಷಣವೇ ನೀಟ್ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದೆ. ಕರೊನಾ ರಜೆ ಸಿಕ್ಕ ಕಾರಣ ಓದಲು ಮತ್ತಷ್ಟು ಅವಕಾಶ ಸಿಕ್ಕಂತಾಯಿತು. ಈ ಸಾಧನೆಗೆ ಎಲ್ಲ ಪ್ರೋತ್ಸಾಹ ನೀಡಿದ ನನ್ನ ಪಾಲಕರಿಗೆ ಹಾಗೂ ಉಪನ್ಯಾಸಕರಿಗೆ ಧನ್ಯವಾದಗಳು ಎಂದು ಹೇಳಿ

ಶಿರಹಟ್ಟಿಯಲ್ಲಿ ಕಟ್ಟಿಗೆ ಅಡ್ಡೆಗಳ ದರ್ಬಾರಿಗೆ ಅನುಮತಿ ಕೊಟ್ಟವರು ಯಾರು..?

ನಿನ್ನೆಯಷ್ಟೆ ಕಟ್ಟಿಗೆ ಅಡ್ಡೆಗಳಿಂದ ಕೊರೊನಾ ಆತಂಕ ಎನ್ನುವ ಶಿರ್ಷಿಕೆಯಡಿ ವಿಶೇಷ ವರದಿಯನ್ನು ಉತ್ತರಪ್ರಭ ಪ್ರಕಟಿಸಿತ್ತು. ಆದರೆ ಇದರ ಆಳಕ್ಕಿಳಿದಾಗ ಗೊತ್ತಾಗಿದ್ದು, ಶಿರಹಟ್ಟಿಯಲ್ಲಿನ ಕಟ್ಟಿಗೆ ಅಡ್ಡೆಗಳಿಗೆ ಅನುಮತಿ ನೀಡಿದವರು ಯಾರು? ಎನ್ನುವ ಪ್ರಶ್ನೆ.