ಹುಬ್ಬಳ್ಳಿ: ಸಿಎಂ ಯಡಿಯೂರಪ್ಪ ಸಮರ್ಥರಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಈಗ ಖಾಲಿ‌ ಇಲ್ಲ. ಯಡಿಯೂರಪ್ಪ ನವರು ಒಳ್ಳೆಯ ಕೆಲಸ‌ ಮಾಡುತ್ತಿದ್ದಾರೆ. ವಯಸ್ಸಿನ ಕಾರಣ ಹೇಳಿ‌ ಅವರನ್ನು ಕೆಳಗಿಳಿಸುವುದು ಸೂಕ್ತವಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಪ್ರತಿಕ್ರಿಯಿಸಿದರು.
ಅವರು ಈ ಕುರಿತು ಹುಬ್ಬಳ್ಳಿಯಲ್ಲಿ ಮಾದ್ಯಮದವರೊಂದಿಗೆ ಮಾತನಾಡಿ, ಸಮರ್ಥರು ಇದ್ದಾರೋ‌ ಇಲ್ಲೊ ಅನ್ನೊದಕ್ಕಿಂತ, ಇದ್ದವರು ಸಮರ್ಥರಿದ್ದಾರೋ ಇಲ್ಲವೊ, ಅವರನ್ನು ಮುಂದುವರೆಸಬೇಕೋ, ಬೇಡವೋ ಎನ್ನುವ ಪ್ರಶ್ನೆಯಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

ಕಾಂಗ್ರೆಸ್ ನಲ್ಲಿ ಸಮರ್ಥರ ಸಂಖ್ಯೆ ಜಾಸ್ತಿ‌ ಇದೆ. ಅದಕ್ಕೆ ಅವರು ಬಡಿದಾಡುತ್ತಿದ್ದಾರೆ. ಅವರು ಬಡಿದಾಡುತ್ತಲೇ ಇರಲಿ ಎಂದು ವ್ಯಂಗ್ಯವಾಡಿದರು.
ನಮ್ಮ ಆದ್ಯತೆ, ಏನೇ ಇದ್ದರು ಕೊರೊನಾ ನಿಯಂತ್ರಿಸುವುದು.
ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ನಾನು ಕೇಂದ್ರ ಸಚಿವನಾಗಿರುವುದರಿಂದ ರಾಜ್ಯದ ಹಲವಾರು ಜನ ಭೇಟಿಯಾಗ್ತಾರೆ. ಕೇಂದ್ರದಿಂದ ಆಗಬೇಕಿರುವ ಕೆಲಸದ ಬಗ್ಗೆ ಕೇಳಿಕೊಂಡು ಬರ್ತಾರೆ ಎಂದರು.

Leave a Reply

Your email address will not be published. Required fields are marked *

You May Also Like

ವಿವಿಧ ರಂಗಗಳಲ್ಲಿ ಮಹಿಳೆಯರ ಪಾತ್ರ ವಿಶಿಷ್ಟ : ಮೂಲಿಮನಿ

ಎಲ್ಲಾ ರಂಗದಲ್ಲಿ ಮಹಿಳೆಯರ ಪಾತ್ರ ವಿಶಿಷ್ಠವಾದದು, ಹಾಗೂ ಮಹಿಳೆಯರು ಪುರುಷರಿಗೆ ಸಮಾನವಾಗಿ ಕಾರ್ಯ ನಿರ್ವಹಿಸುತ್ತಿರುವುದು ಶ್ರೇಷ್ಠತೆಯನ್ನುತೊರಿಸುತ್ತದೆಎಂದು ಎಂಜನೀಯರಿಂಗ್‌ ಕಾಲೇಜನ ಸಹಾಯಕ ಉಪನ್ಯಾಸಕ ಪ್ರಶಾಂತ ಮೂಲಿಮನಿ ಹೇಳಿದರು.

ನಿವೃತ್ತ ಪ್ರಾಚಾರ್ಯ ಡಿ.ಡಿ. ಕಡೇಮನಿ ನಿಧನ

ಗದಗ: ಹುಲಕೋಟಿ ಸಹಕಾರಿ ಶಿಕ್ಷಣ ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಚಾರ್ಯರು ಮತ್ತು ನೆಲ್ಸನ್…

ಸೇವಾ ಸಿಂಧುಗಾಗಿ ಸರತಿಯಲ್ಲಿ ಚಪ್ಪಲಿ ಇಟ್ಟು ಕಾದು ಕುಳಿತ ಕಾರ್ಮಿಕರು

ಬಿಸಿಲಿನ ತಾಪ ಹೆಚ್ಚಿದ ಹಿನ್ನೆಲೆಯಲ್ಲಿ ಜನರು ಸಾಲಿನಲ್ಲಿ ನಿಲ್ಲಲಾಗದೆ ತಮ್ಮ ಚಪ್ಪಲಿಗಳನ್ನು ಗುರುತಿಗಾಗಿ ಇಡುತ್ತಿರುವುದು ಹಾಗೂ ಭಾಷಾ ಸಮಸ್ಯೆ ಯಿಂದ ಸೇವಾ ಸಿಂಧು ಅರ್ಜಿ ಸಲ್ಲಿಸಲು ಕಾರ್ಮಿಕರು ಸುಸ್ತಾಗುತ್ತಿದ್ದಾರೆ.

ರಾಜ್ಯದ ಉದ್ದಗಲಕ್ಕೂ ಶುರುವಾದ ಬಂದ್ ಬಿಸಿ!

ಬೆಂಗಳೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತ ವಿರೋಧಿ ನೀತಿ ತಾಳುತ್ತಿವೆ ಎಂದು ಆರೋಪಿಸಿ…