ಕೊಣ್ಣೂರ: ಕೋವಿಡ್ 19 ಮಹಾಮಾರಿಯ ಎರಡನೇ ಅಲೆಯು ಗ್ರಾಮೀಣ ಪ್ರದೇಶಕ್ಕೂ ಆವರಿಸಿದ್ದು ತಿಳಿದಿರುವ ವಿಷಯ, ಗ್ರಾಮದಲ್ಲಿ ಮಹಾಮಾರಿ ತನ್ನ ಅಟ್ಟಹಾಸ ಮೆರದಿದ್ದು ಸುಮಾರು ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ ಕೆಲವರು ಗುಣಮುಖರಾಗಿದ್ದಾರೆ. ಮಹಾಮಾರಿಗೆ ಮೂವರು ಗ್ರಾಮಸ್ಥರು ಬಲಿಯಾಗಿದ್ದಾರೆ. ಮೂವರ ಪೈಕಿ ಇಬ್ಬರು ಗ್ರಾಮದ ಧುರಿಣರು ಸಾಮಾಜಿಕ ಕಾರ್ಯಕರ್ತರು ಆಗಿದ್ದರು. ವಾರದ ಅಂತರದಲ್ಲಿ ಮೂರು ಜೀವಗಳು ಕೋವೀಡ್ 19 ಗೆ ತುತ್ತಾಗಿದ್ದು ಗ್ರಾಮಸ್ಥರಲ್ಲಿ ಭಯ ಮನೆಮಾಡಿದೆ.
ಗ್ರಾಮ ಪಂಚಾಯತ ಹಾಗೂ ಟಾಸ್ಕ್ ಫೋರ್ಸ್ ಸಮಿತಿವತಿಯಿಂದ ಈಗಾಗಲೇ ವಿವಿಧ ವ್ಯಾಪಾರಸ್ಥರಿಗೆ, ಅಂಗಡಿ ಮುಂಗಟ್ಟುಗಳನ್ನು ತೆರೆಯಬಾರದೆಂದು ನೋಟಿಸ್ ಜಾರಿಮಾಡಲಾಗಿದೆ. ಗ್ರಾಮಸ್ಥರು ಹಾಗೂ ವ್ಯಾಪಾರಸ್ಥರು ಸ್ವಯಂ ಪ್ರೇರಿತರಾಗಿ ಮಹಾಮಾರಿಯಿಂದ ಜಾಗೃತರಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಪಾಲಿಸುತ್ತಿದ್ದಾರೆ.
ಇನ್ನೂ ಗ್ರಾಮ ಪಂಚಾಯತಿ ಹಾಗೂ ಟಾಸ್ಕ್ ಫೋರ್ಸ್ ಸಮಿತಿ ಆದೇಶದಂತೆ ತರಕಾರಿ ವ್ಯಾಪಾರಸ್ತರು ಬಿದಿ ಬಿದಿ ಒತ್ತುವ ಗಾಡಿ ಮೂಲಕ ವ್ಯಾಪಾರ ಮಾಡುತ್ತಿದ್ದಾರೆ. ಸಾಮಾನ್ಯವಾಗಿ ಹಾಲು ಮತ್ತು ಔಷಧ ಅಂಗಡಿಗಳು, ದವಾಖಾನೆ ಕೋವೀಡ್ 19 ನಿಯಮಾವಳಿಗಳನ್ನು ಪಾಲಿಸುತ್ತಾ ಬಾಗಿಲು ತೆರದಿವೆ.

ಜನರು ಭಯ ಪಡುವುದಕ್ಕಿಂತ ಮುಂಜಾಗೃತಾ ಕ್ರಮಗಳನ್ನು ಪಾಲಿಸುವುದು ಅವಶ್ಯಕವಾಗಿದೆ. ತಮ್ಮಷ್ಟಕ್ಕೆ ತಾವೆ ಜಾಗೃತರಾಗುವುದು ಅವಶ್ಯವಾಗಿದೆ. ಮಹಾಮಾರಿಯು ಗಾಳಿಯ ವೇಗದಲ್ಲಿ ಹಳ್ಳಿ ಪಟ್ಟಣ ಅನ್ನದೆ ಹರಡುತ್ತಿದೆ. ಪ್ರತಿಯೊಬ್ಬ ವ್ಯಕ್ತಿಯು ಈಗಾಗಲೆ ಹೆಳಿರುವ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಾ ಬಿಸಿ ನೀರು ಬಿಸಿ, ಊಟ, ಕಷಾಯ ಉಪಯೋಗಿಸುತ್ತಾ ಮನೆಯಲ್ಲಿ ಇರುವದು ಉತ್ತಮವಾದ ಕೆಲಸ.


-ಡಾ. ರಾಜಶೇಖರ ವಾರದ, ಸ್ಥಳೀಯ ವೈದ್ಯ

Leave a Reply

Your email address will not be published. Required fields are marked *

You May Also Like

ಶಾರ್ಟ್ ಸರ್ಕ್ಯೂಟ್ ನಿಂದ ಜನರಲ್ ಸ್ಟೋರ್ ಗೆ ಬೆಂಕಿ!

ಗದಗ: ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಜನರಲ್ ಸ್ಟೋರ್ ಒಂದು ಹೊತ್ತಿ ಉರಿದ ಘಟನೆ ಗದಗ ನಗರದ ಕೆ.ಸಿ.ರಾಣಿ ರಸ್ತೆಯಲ್ಲಿರುವ ಚೇತನ ಕ್ಯಾಂಟಿನ್ ಸರ್ಕಲ್ ಬಳಿ ನಡೆದಿದೆ. ಬಸವರಾಜ್ ನಾಡಗೌಡ್ರ ಎಂಬವವರಿಗೆ ಸೇರಿದ ಜನರಲ್ ಸ್ಟೋರ್ ಇದಾಗಿದೆ ಎಂದು ಹೇಳಲಾಗ್ತಿದ್ದು, ಜನರಲ್ ಸ್ಟೋರ್ ಬೆಂಕಿಗೆ ಆಹುತಿಯಾಗಿದೆ. ಸ್ಟೋರ್ ನಲ್ಲಿದ್ದ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಹಾನಿಯಾಗಿವೆ.

ರಾಷ್ಟ್ರೀಯ ಶಕ್ತಿ ಸಂರಕ್ಷಣಾ ದಿನ

 ಉತ್ತರಪ್ರಭ ಗದಗ: ತೋಂಟದಾರ್ಯ  ಇಂಜೀನಿಯರಿಂಗ್ ಕಾಲೇಜಿನ  ಇಲೇಕ್ಟ್ರೀಕಲ್ & ಇಲೇಕ್ಟ್ರಾನಿಕ್ಸ್ ವಿಭಾಗ ಮತ್ತು ಕಾಲೇಜಿನ ಇಂಟರಪುನರಶಿಪ್…

ಅಸುಂಡಿ ಬಾಲಕಿ ಕೊಲೆ ಪ್ರಕರಣ:24 ಗಂಟೆಯಾದರು ಇನ್ನೂ ಪತ್ತೆಯಾಗದ ಹಂತಕರು

ಗದಗ: ತಾಲೂಕಿನ ಅಸುಂಡಿ ಗ್ರಾಮದಲ್ಲಿ 9ನೇ ತರಗತಿಯ ವಿದ್ಯಾರ್ಥಿನಿಯ ಶವ ಬುಧವಾರ ಸಂಜೆ ಕೊಳೆತ ಸ್ಥಿತಿಯಲ್ಲಿ ಪತ್ತೆ ಯಾಗಿತ್ತು. ಸ್ಥಳಕ್ಕೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ, ಡಿವೈಎಸ್ಪಿ, ಸಿಪಿಐ ಗದಗ ಗ್ರಾಮೀಣ ಪೊಲೀಸರು ಬೇಟಿ ನೀಡಿ ಶವವನ್ನು ಪರಿಶೀಲಿಸಿ ಪ್ರಕರಣ ದಾಖಲಿಸಿ 24 ಗಂಟೆ ಕಳೆದರು ಇನ್ನೂ ಅರೋಪಿಗಳ ಪತ್ತೆಯಾಗಿಲ್ಲ.

ವಿಜ್ಞಾನ ವ್ಯವಸ್ಥೆಯನ್ನು ಬದಲಿಸುವ ಶಕ್ತಿ ಮಹಿಳೆಯಲ್ಲಿದೆ : ತಹಶೀಲ್ದಾರ ಭ್ರಮರಾಂಭ

ಮಹಿಳೆಯರಿಗೆ ಎಲ್ಲಾಕ್ಷೇತ್ರದಲ್ಲಿ ಸಮಾನ ಅವಕಾಶ ನೀಡಿ ಅವಳನ್ನು ಸಂಪೂರ್ಣವಾಗಿ ತೊಡಗಿಸಿದ್ದೇ ಆದರೆ ದೇಶದ ಅರ್ಥ ವ್ಯವಸ್ಥೆಯ ಜತೆಗೆ ವಿಜ್ಞಾನ ವ್ಯವಸ್ಥೆಯನ್ನು ಬದಲಿಸುವ ಶಕ್ತಿ ಅವಳಲ್ಲಿದೆ ಎಂದು ತಹಶೀಲ್ದಾರ ಭ್ರಮರಾಂಭ ಗುಬ್ಬಿಶೆಟ್ಟಿ ಹೇಳಿದರು.