ಕೊಣ್ಣೂರ: ಕೋವಿಡ್ 19 ಮಹಾಮಾರಿಯ ಎರಡನೇ ಅಲೆಯು ಗ್ರಾಮೀಣ ಪ್ರದೇಶಕ್ಕೂ ಆವರಿಸಿದ್ದು ತಿಳಿದಿರುವ ವಿಷಯ, ಗ್ರಾಮದಲ್ಲಿ ಮಹಾಮಾರಿ ತನ್ನ ಅಟ್ಟಹಾಸ ಮೆರದಿದ್ದು ಸುಮಾರು ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ ಕೆಲವರು ಗುಣಮುಖರಾಗಿದ್ದಾರೆ. ಮಹಾಮಾರಿಗೆ ಮೂವರು ಗ್ರಾಮಸ್ಥರು ಬಲಿಯಾಗಿದ್ದಾರೆ. ಮೂವರ ಪೈಕಿ ಇಬ್ಬರು ಗ್ರಾಮದ ಧುರಿಣರು ಸಾಮಾಜಿಕ ಕಾರ್ಯಕರ್ತರು ಆಗಿದ್ದರು. ವಾರದ ಅಂತರದಲ್ಲಿ ಮೂರು ಜೀವಗಳು ಕೋವೀಡ್ 19 ಗೆ ತುತ್ತಾಗಿದ್ದು ಗ್ರಾಮಸ್ಥರಲ್ಲಿ ಭಯ ಮನೆಮಾಡಿದೆ.
ಗ್ರಾಮ ಪಂಚಾಯತ ಹಾಗೂ ಟಾಸ್ಕ್ ಫೋರ್ಸ್ ಸಮಿತಿವತಿಯಿಂದ ಈಗಾಗಲೇ ವಿವಿಧ ವ್ಯಾಪಾರಸ್ಥರಿಗೆ, ಅಂಗಡಿ ಮುಂಗಟ್ಟುಗಳನ್ನು ತೆರೆಯಬಾರದೆಂದು ನೋಟಿಸ್ ಜಾರಿಮಾಡಲಾಗಿದೆ. ಗ್ರಾಮಸ್ಥರು ಹಾಗೂ ವ್ಯಾಪಾರಸ್ಥರು ಸ್ವಯಂ ಪ್ರೇರಿತರಾಗಿ ಮಹಾಮಾರಿಯಿಂದ ಜಾಗೃತರಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಪಾಲಿಸುತ್ತಿದ್ದಾರೆ.
ಇನ್ನೂ ಗ್ರಾಮ ಪಂಚಾಯತಿ ಹಾಗೂ ಟಾಸ್ಕ್ ಫೋರ್ಸ್ ಸಮಿತಿ ಆದೇಶದಂತೆ ತರಕಾರಿ ವ್ಯಾಪಾರಸ್ತರು ಬಿದಿ ಬಿದಿ ಒತ್ತುವ ಗಾಡಿ ಮೂಲಕ ವ್ಯಾಪಾರ ಮಾಡುತ್ತಿದ್ದಾರೆ. ಸಾಮಾನ್ಯವಾಗಿ ಹಾಲು ಮತ್ತು ಔಷಧ ಅಂಗಡಿಗಳು, ದವಾಖಾನೆ ಕೋವೀಡ್ 19 ನಿಯಮಾವಳಿಗಳನ್ನು ಪಾಲಿಸುತ್ತಾ ಬಾಗಿಲು ತೆರದಿವೆ.

ಜನರು ಭಯ ಪಡುವುದಕ್ಕಿಂತ ಮುಂಜಾಗೃತಾ ಕ್ರಮಗಳನ್ನು ಪಾಲಿಸುವುದು ಅವಶ್ಯಕವಾಗಿದೆ. ತಮ್ಮಷ್ಟಕ್ಕೆ ತಾವೆ ಜಾಗೃತರಾಗುವುದು ಅವಶ್ಯವಾಗಿದೆ. ಮಹಾಮಾರಿಯು ಗಾಳಿಯ ವೇಗದಲ್ಲಿ ಹಳ್ಳಿ ಪಟ್ಟಣ ಅನ್ನದೆ ಹರಡುತ್ತಿದೆ. ಪ್ರತಿಯೊಬ್ಬ ವ್ಯಕ್ತಿಯು ಈಗಾಗಲೆ ಹೆಳಿರುವ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಾ ಬಿಸಿ ನೀರು ಬಿಸಿ, ಊಟ, ಕಷಾಯ ಉಪಯೋಗಿಸುತ್ತಾ ಮನೆಯಲ್ಲಿ ಇರುವದು ಉತ್ತಮವಾದ ಕೆಲಸ.


-ಡಾ. ರಾಜಶೇಖರ ವಾರದ, ಸ್ಥಳೀಯ ವೈದ್ಯ

Leave a Reply

Your email address will not be published. Required fields are marked *

You May Also Like

ಕೋರೊನಾ ಸೋಂಕು ನಿಯಂತ್ರಣ, ಚಿಕಿತ್ಸೆ, ಲಸಿಕಾಕರಣ ಸಭೆಯಲ್ಲಿ ಹೆಳಿದ್ದೆನು?

ಗದಗ: ಸರ್ಕಾರ ತಿಳಿಸಿದ ಆಧ್ಯತಾ ಗುಂಪುಗಳ ಅರ್ಹ ಫಲಾನುಭವಿಗಳಿಗೆ ಆದ್ಯತೆಯನುಸಾರ ಮೊದಲು ಲಸಿಕೆ ನೀಡುವಂತೆ ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಸೂಚಿಸಿದರು. ಅವರು ಜಿಲ್ಲಾಡಳಿತ ಭವನದ ಜಿ.ಪಂ ವಿಡಿಯೋ ಸಭಾಂಗಣದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳಿಗಳೊಂದಿಗೆ ಶುಕ್ರವಾರ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗದಗ ಜಿಲ್ಲೆಯ 15 ಕಂಟೇನ್ಮೆಂಟ್ ಪ್ರದೇಶಗಳ ನಿರ್ಬಂಧ ತೆರವು

ಗದಗ: ಜಿಲ್ಲೆಯ ಕೊವಿಡ್-19 ಸೋಂಕು ನಿಯಂತ್ರಣಕ್ಕಾಗಿ ಸೋಂಕಿನ ಸಕಾರಾತ್ಮಕ ಪ್ರಕರಣಗಳು ವರದಿಯಾದ ಕೆಳಕಂಡ 15 ಪ್ರದೇಶಗಳನ್ನು ನಿರ್ಬಂಧಿತ ಪ್ರದೇಶಗಳೆಂದು ಘೋಷಿಸಲಾಗಿತ್ತು.

ಗದಗ ಬೆಟಗೇರಿ ನಗರಸಭೆ ಸಾರ್ವತ್ರಿಕ ಚುನಾವಣೆ-2021 ಮತಗಟ್ಟೆಗಳ ಬದಲಾವಣೆ ಮಾಡಿದ ಮಾಹಿತಿ

ಗದಗ ಬೆಟಗೇರಿ ನಗರಸಭೆ ಸಾರ್ವತ್ರಿಕ ಚುನಾವಣೆ ನೇದ್ದಕ್ಕೆ ಸಂಬOಧಿಸಿದ ಬೆಟಗೇರಿಯಲ್ಲಿನ ಈ ಕೆಳಗಿನ ಮತಗಟ್ಟೆಗಳನ್ನು ಬದಲಾವಣೆ…

ಬಣ್ಣದ ಮನೆ ಆರ್ಟ ಅಡ್ಡಾದಲ್ಲಿ ಇಂದು “ಜಾನಪದ ಗಾನ ಭಜಾನಾ”

ಗದಗ. ನಗರದ ಬಣ್ಣದ ಮನೆ ಆರ್ಟ್ ಅಡ್ಡಾದ ಸಾಂಸ್ಕೃತಿಕ ಭವನದಲ್ಲಿ ಇಂದು ಸಂಜೆ 7-00ಘಂಟೆಗೆ ಗೀಯ…