ಗದಗ: ಕೋಳಿಗೆ ಭೇದಿ, ಆಸ್ಪತ್ರೆಗೆ ಕರೆದುಕೊಂಡು ಹೋಗ್ತಿದ್ದೇನೆ. ಹೀಗಂತ ಕಾರಣ ನೀಡಿದ ವ್ಯಕ್ತಿ ಮಾತಿಗೆ ಪೊಲೀಸರೆ ಸುಸ್ತಾದರು. ಲಾಕ್ ಡೌನ್ ಹಿನ್ನೆಲೆ ಅನಾವಶ್ಯಕ ಓಡಾಟಕ್ಕೆ ಬ್ರೇಕ್ ಬಿದ್ದಿದೆ. ಹೀಗಾಗಿ ಗದಗನಲ್ಲಿ ವ್ಯಕ್ತಿಯೊಬ್ಬ ಕೋಳಿ ನೆಪ ಹೇಳಿದ ಫನ್ನಿ ಘಟನೆ ನಡೆದಿದೆ. ನಗರದ ಟಾಂಗಾ ಕೂಟ್ ಬಳಿ ವ್ಯಕ್ತಿಯೊಬ್ಬನನ್ನ ತಡೆದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಆದರೆ ಆ ವ್ಯಕ್ತಿ ಚೀಲದಲ್ಲಿರೋ ಕೋಳಿ ಹೊರತೆಗೆದು, ಕೋಳಿಗೆ ಬೇಧಿ ಶುರುವಾಗಿದೆ. ಡಾಕ್ಟರ್ ಹತ್ರಾ ತೋರಿಸೋಕೆ ಹೋಗ್ತಿದ್ದೀನಿ ಎನ್ನುವ ಕಾರಣ ಕೇಳಿ ಪೊಲೀಸರು ಬಿದ್ದು ಬಿದ್ದು ನಕ್ಕರು. ಪೊಲೀಸರು ಕೆಲ ಹೊತ್ತು ವಿಚಾರಣೆ ನಡೆಸಿ ನಂತರ ಕೋಳಿ ನೆಪ ಹೇಳಿದ ವ್ಯಕ್ತಿಯನ್ನು ಮನೆಗೆ ಪಾಪಾಸ್ ಕಳುಹಿಸಿದರು.

Leave a Reply

Your email address will not be published. Required fields are marked *

You May Also Like

ಬೆಳಧಡಿ: ಪ್ರಧಾನ ಮಂತ್ರಿ ಜೀವನಜ್ಯೋತಿ ಚೆಕ್ ವಿತರಣೆ

ಮುಳಗುಂದ: ಸಮೀಪದ ಬೆಳಧಡಿ ಗ್ರಾಮದ ಅಂಚೆ ಕಚೇರಿಯಲ್ಲಿ ಮಂಗಳವಾರ ಗದಗ ಅಂಚೆ ವರಿಷ್ಠಾಧಿಕಾರಿ ಚಿದಾನಂದ ಪದ್ಮಸಾಲಿ ಅವರು ಪ್ರಧಾನ ಮಂತ್ರಿ ಜೀವನ ಜ್ಯೋತಿ ಯೋಜನೆಯಡಿ ಸಂಗಮೇಶ ಅರಕೇರಿಮಠ ಅವರಿಗೆ 2 ಲಕ್ಷ ರೂ ಮೊತ್ತದ ಚೆಕ್ ವಿತರಿಸಿದರು.

ನಗರ ಸಭೆ ಚುನಾವಣೆ: 30ನೇ ವಾರ್ಡ ಕಾಂಗ್ರೇಸ್ ಪಾಲಿಗೆ

ಗದಗ ಬೇಟಗೇರಿ:ನಗರ ಸಭೆ 30ನೇ ವಾರ್ಡನ ಮತ  ಎಣಿಕೆ ಮುಕ್ತಾಯ , 30ನೇ  ವಾರ್ಡನಲ್ಲಿ ಕಾಂಗ್ರೇಸಗೆ…

ಶಿಕ್ಷಕ ಶಾಂತಕುಮಾರ ಭಜಂತ್ರಿಗೆ ಭಾರತ ಸೇವಾ ರತ್ನ ಪ್ರಶಸ್ತಿ ಪ್ರಧಾನ

ಗದಗ: ತಾಲೂಕಿನ ಲಿಂಗಧಾಳ ಸರಕಾರಿ ಪ್ರೌಢಶಾಲೆಯ ಕನ್ನಡ ಭಾಷಾ ಶಿಕ್ಷಕರು ಹಾಗೂ ಕನ್ನಡ ಜಾನಪದ ಪರಿಷತ್…

ಸಾಹಿತ್ಯ ಪರಿಷತ್ತು ಡಿಜಟಲಿಕರಣವಾಗಬೇಕು : ಚನ್ನೆಗೌಡ

ಕನ್ನಡ ಸಾಹಿತ್ಯ ಪರಿಷತ್ತು ಒಂದು ಸಂಸ್ಥೆಯಾಗಿ ಬೆಳೆಯಬೇಕಾಗಿದೆ. ಕಸಾಪ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ಚುಣಾಯಿತನಾದರೆ ಸಾಹಿತ್ಯ ಪರಿಷತ್ತನ್ನು ಸಾರ್ವಜನಿಕರಿಗೆ ವಿಶ್ವವಿದ್ಯಾಲಯದಂತೆ ಬೆಳಕು ಚೆಲ್ಲುವ ಕೆಲಸವನ್ನು ಸಾಹಿತ್ಯ ಪರಿಷತ್ತಿನ ಮೂಲಕ ಮಾಡುವೆ ಎಂದು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ವಿ.ಸಿ. ಚನ್ನೇಗೌಡ ಹೇಳಿದರು.