ಬೆಂಗಳೂರು: 1 -5 ನೇ ತರಗತಿಗೆ ಪಾಠ ಮಾಡುವ ಪ್ರಾಥಮಿಕ ಶಾಲೆ ಶಿಕ್ಷಕರು, ಪ್ರೌಢಶಾಲೆ ಸಹ ಶಿಕ್ಷಕ ಗ್ರೇಡ್- 2 ಹುದ್ದೆಗಳಿಗೆ ಬಡ್ತಿ ಪಡೆಯಲು ಅರ್ಹರಲ್ಲ ಎಂದು ಆದೇಶಿಸಲಾಗಿದೆ. ಪ್ರಾಥಮಿಕ ಶಾಲೆ ಶಿಕ್ಷಕರುಗಳಿಗೆ ಪ್ರೌಢಶಾಲಾ ಶಿಕ್ಷಕರ ಹುದ್ದೆಗಳಿಗೆ ನೀಡಿದ್ದಲ್ಲಿ ಅದನ್ನು ರದ್ದುಪಡಿಸುವಂತೆ ಸರ್ಕಾರಕ್ಕೆ ಕರ್ನಾಟಕ ಆಡಳಿತಾತ್ಮಕ ನ್ಯಾಯಾಧೀಕರಣ ಆದೇಶಿಸಿದೆ.
ಕೆಎಟಿ ಹಂಗಾಮಿ ಅಧ್ಯಕ್ಷ ನ್ಯಾಯಮೂರ್ತಿ ಆರ್.ಬಿ. ಬೂದಿಹಾಳ ನೇತೃತ್ವದ ಪೀಠ ಈ ಬಗ್ಗೆ ಆದೇಶ ಹೊರಡಿಸಿದ್ದು, ಇದರಿಂದ ಈಗಾಗಲೇ ಬಡ್ತಿ ಪಡೆದುಕೊಂಡ ಅಂದಾಜು 8000 ಪ್ರಾಥಮಿಕ ಶಾಲೆ ಶಿಕ್ಷಕರಿಗೆ ಹಿಂಬಡ್ತಿ ಆಗುವ ಸಾಧ್ಯತೆ ಇದೆ. 6 -8 ನೇ ತರಗತಿ ಪಾಠ ಮಾಡುವ ಹಿರಿಯ ಪ್ರಾಥಮಿಕ ಶಿಕ್ಷಕರು ಮಾತ್ರ ಬಡ್ತಿಗೆ ಅರ್ಹರು ಎಂದು ಆದೇಶಿಸಿದೆ.