ಬೆಂಗಳೂರು: ಕೊರೋನಾ ಸಾಂಕ್ರಾಮಿಕವನ್ನು ನಿಭಾಯಿಸುವಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯತಿಗಳ ತಳ ಮಟ್ಟದ ಸಿಬ್ಬಂದಿಗಳು, ಶಿಕ್ಷಕರು, ಆರೋಗ್ಯ ಇಲಾಖೆ, ಪೊಲೀಸ್, ಕಂದಾಯ, ಸಾರಿಗೆ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳ ಸಿಬ್ಬಂದಿಗಳು, ಪಶುವೈದ್ಯರು ಮುಂತಾದವರು ನೇರವಾಗಿ ಜನರ ಜೊತೆ ಇದ್ದು ಕೆಲಸ ಮಾಡುತ್ತಿದ್ದಾರೆ. ಇವರುಗಳಿಗೆ ವಿಶೇಷ ರಕ್ಷಣೆ ನೀಡಬೇಕಾದದ್ದು ಸರ್ಕಾರದ ಜವಾಬ್ಧಾರಿ ಎಂದು ಮಾಜಿ ಸಿಎಂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಈ ಕುರಿತು ಸಿಎಂ ಬಿಎಸ್ವೈ ಅವರಿಗೆ ಪತ್ರ ಬರೆದು, ಕೊರೋನಾ ವಾರಿಯರ್ಸ್ ಗಳ ಬಾಕಿ ಉಳಿಸಿಕೊಂಡಿರುವ ವೇತನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ.
ಸರ್ಕಾರ ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಿರುವ ಮತ್ತು ಕರ್ತವ್ಯದ ವೇಳೆ ಮರಣ ಹೊಂದಿರುವ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರ ಕುಟುಂಬದವರಿಗೆ ಕೂಡಲೇ ಪರಿಹಾರ ನೀಡಬೇಕು. ಆದರೆ ಸರ್ಕಾರ ಇನ್ನೂ ಸಹ ಹಲವು ಇಲಾಖೆಗಳ ಸಿಬ್ಬಂದಿಗಳನ್ನು ಕೊರೋನ ವಾರಿಯರ್ಸ್ ಎಂದು ಘೋಷಣೆ ಮಾಡಿಲ್ಲ. ಈಗಾಗಲೇ ಕೊರೋನಾ ವಾರಿಯರ್ಸ್ ಎಂದು ಘೋಷಿಸಿರುವವರಿಗೆ ಕಳೆದ ಎರಡು ಮೂರು ತಿಂಗಳಿಂದ ಸಂಬಳವನ್ನೂ ನೀಡಿಲ್ಲ. ಜೊತೆಗೆ ಜನರ, ರೋಗಿಗಳ ಸಂಪರ್ಕದಲ್ಲಿರುವ ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ, ಸರ್ಕಾರದ ತಳ ಮಟ್ಟದ ಸಿಬ್ಬಂದಿಗಳಿಗೆ ಕೊರೋನಾದಿಂದ ರಕ್ಷಣೆ ಪಡೆಯಲು ನೀಡಬೇಕಾದ ಮಾಸ್ಕ್, ಸ್ಯಾನಿಟೈಸರ್, ಕೈಗವಸು ಮುಂತಾದ ಮೂಲಭೂತವಾದ ಸಾಮಗ್ರಿಗಳನ್ನೂ ನೀಡಿಲ್ಲ. ಕೊರೋನಾ ವಾರಿಯರ್ಸ್ ಎಂದು ಘೋಷಣೆ ಮಾಡಲಾದವರಲ್ಲಿ ಕೆಲವರು ಮರಣ ಹೊಂದಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರಲ್ಲಿ ಸುಮಾರು ಜನ ಕೊರೋನಾಕ್ಕೆ ತುತ್ತಾಗಿ ಮರಣ ಹೊಂದಿದ್ದಾರೆ. ಆದರೆ ಅವರಲ್ಲಿ ಪರಿಹಾರ ಸಿಕ್ಕಿರುವುದು ಕೇವಲ ಮೂರು ಜನರ ಕುಟುಂಬಗಳಿಗೆ ಮಾತ್ರ. ಎಲ್ಲ ಇಲಾಖೆಗಳಲ್ಲೂ ಇದೇ ರೀತಿಯ ಪರಿಸ್ಥಿತಿ ಇದೆ. ಜೀವವನ್ನು ಪಣಕ್ಕೊಡ್ಡಿ ಕೆಲಸ ಮಾಡುತ್ತಿರುವ ಇವರೆಲ್ಲರನ್ನು ಸರ್ಕಾರ ನಡೆಸಿಕೊಳ್ಳುತ್ತಿರುವ ರೀತಿ ಅತ್ಯಂತ ಅಮಾನವೀಯವಾಗಿದೆ. ದೇಶದ ರಾಜ್ಯಗಳಲ್ಲೆ ಆರ್ಥಿಕ ಸ್ಥಿತಿಯಲ್ಲಿ ಮೊದಲೆರಡು ಸ್ಥಾನಗಳಲ್ಲೇ ಇರುವ ಕರ್ನಾಟಕದಲ್ಲಿ ಕನಿಷ್ಠ ಮಾಸ್ಕು, ಸ್ಯಾನಿಟೈಸರ್ ನೀಡುವಷ್ಟು ಹೃದಯವಂತಿಕೆ, ಕರ್ತವ್ಯ ಪ್ರಜ್ಞೆ, ಉದಾರತೆಗಳನ್ನು ಆಡಳಿತ ನಡೆಸುವ ಸರ್ಕಾರ ಕಳೆದುಕೊಂಡಿರುವುದು ಅತ್ಯಂತ ಬೇಜವಾಬ್ಧಾರಿಯುತವಾದ ಹಾಗೂ ಅವಮಾನಕರವಾದ ಸಂಗತಿ. ಆದ್ದರಿಂದ ಕೂಡಲೇ ಅವರ ಬೇಡಿಕೆಗಳನ್ನು ಪರಿಗಣಿಸಿ ಈಡೇರಿಸಬೇಕೆಂದು ಆಗ್ರಹಿಸುತ್ತೇನೆ. ಜನರ ಜೊತೆ ನೇರ ಸಂಪರ್ಕದಲ್ಲಿದ್ದುಕೊAಡು ಕೆಲಸ ಮಾಡುವ ಪಶು ವೈದ್ಯರು ಸೇರಿದಂತೆ ಇತರೆ ಎಲ್ಲರನ್ನು ಕೊರೋನ ವಾರಿಯರ್ಸ್ ಎಂದು ಅಧಿಸೂಚನೆ ಹೊರಡಿಸಿ ಅಗತ್ಯ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಡಾ. ಶಾಂತಕುಮಾರ ಭಜಂತ್ರಿ ಅವರಿಗೆ ರಾಜ್ಯಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ ಪ್ರದಾನ

ಉತ್ತರಪ್ರಭ ಸುದ್ದಿಗದಗ: ಡಾ. ಪಂಡಿತ್ ಪುಟ್ಟರಾಜ ಕವಿ ಗವಾಯಿಗಳವರ 108ನೇ ಜಯಂತ್ಯೋತ್ಸವ ಪ್ರಯುಕ್ತ ರಾಜ್ಯಮಟ್ಟದ ಪ್ರಶಸ್ತಿ…

ಪೋಲಿಸ್ ದಾಳಿ : ಕಲ್ಲುಗಣಿ ಸ್ಪೋಟಕ ವಸ್ತುಗಳು ವಶಕ್ಕೆ, ಓರ್ವನ ಬಂಧನ

ಮುಳಗುಂದ ಸಮೀಪದ ಶೀತಾಲಹರಿ ಗ್ರಾಮದ ಹೊರವಲಯದ ಶೆಡ್ಡವೊಂದರ ಮೇಲೆ ಗದಗ ಗ್ರಾಮೀಣ ಸಿಪಿಐ ರವಿಕುಮಾರ ಕಪ್ಪತನವರ ನೇತೃತ್ವದ ತಂಡ ದಾಳಿ ನಡೆಸಿ ಅಪಾರ ಪ್ರಮಾಣದ ಸ್ಪೋಟಕ ವಸ್ತುಗಳು ಸೇರಿದಂತೆ ಓರ್ವ ವ್ಯಕ್ತಿಯನ್ನ ವಶಕ್ಕೆ ಪಡೆದಿರುವ ಘಟನೆ ಗುರುವಾರ ನಡೆದಿದೆ.

ಸಿಎಂಗೆ ಕೊರೊನಾ ಪಾಸಿಟಿವ್ ದೃಢ!

ಸಿಎಂ ಬಿ.ಎಸ್​. ಯಡಿಯೂರಪ್ಪ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.

ಶಿರಹಟ್ಟಿ ತಾಲೂಕಿನಲ್ಲಿ ಗಣರಾಜ್ಯೋತ್ಸವ ಆಚರಣೆ ಬಗ್ಗೆ ತಹಶೀಲ್ದಾರ ನೀಡಿದ ಮಾಹಿತಿ

ಶಿರಹಟ್ಟಿ: ಪ್ರಸ್ತುತ ವರ್ಷದಲ್ಲಿ ಕೊರೊನಾ ನಿಯಮಾನುಸಾರ ಸರಳವಾಗಿ ಗಣರಾಜ್ಯೋತ್ಸವ ಆಚರಣೆ ಮಾಡಲಾಗುತ್ತದೆ ಎಂದು ತಹಶೀಲ್ದಾರ ಯಲ್ಲಪ್ಪ…