ಬೆಂಗಳೂರು: ಜೂನ್ 7ರ ವರೆಗೆ ಎಂದಿನಂತೆ ಲಾಕ್ಡೌನ್ ಇರುತ್ತದೆ. ಜೂನ್ 7ರ ನಂತರ ಲಾಕ್ಡೌನ್ ಪ್ರಶ್ನೆ ಉದ್ಭವಿಸಲ್ಲ ಎಂದೆನಿಸುತ್ತದೆ. ಆದರೆ ರಾಜ್ಯದ ಸ್ಥಿತಿಗತಿ ನೋಡಿಕೊಂಡು ಜೂನ್ 5 ರಂದು ಲಾಕ್ ಡೌನ್ ವಿಸ್ತರಣೆಯ ಕುರಿತು ನಿರ್ಧರಿಸಲಾಗುತ್ತದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಅವರು ಈ ಕುರಿತು ನಗರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿ, ಲಾಕ್ ಡೌನ್ ಹಿನ್ನೆಲೆ ರಾಜ್ಯದ ಜನರು ಸಹಕಾರ ನೀಡಬೇಕು. ಜೂನ್ 7ರ ವರೆಗೆ ರಾಜ್ಯದಲ್ಲಿ ಬಿಗಿ ಕ್ರಮ ಮುಂದುವರಿಯುತ್ತದೆ. ಕೊರೊನಾ ನಿಯಂತ್ರಣ ನೋಡಿಕೊಂಡು ಲಾಕ್ಡೌನ್ ಬಗ್ಗೆ ತೀರ್ಮಾನಿಸುತ್ತೇವೆ ಎಂದರು.
2ನೇ ಅಲೆಯಲ್ಲಿ ನಿರೀಕ್ಷೆಗೂ ಮೀರಿ ಕೊವಿಡ್ ಪ್ರಕರಣ ಹೆಚ್ಚಳವಾಗಿದೆ. ಈಗ ಕೊರೊನಾ ಕೇಸ್ ಕಡಿಮೆಯಾಗಿರುವುದು ನೆಮ್ಮದಿ ವಿಚಾರ. ಕೊರೊನಾ ಕಡಿಮೆಯಾಯಿತು ಎಂದು ಸುಮ್ಮನಿರುವಂತಿಲ್ಲ. ಹಳ್ಳಿಗಳಲ್ಲಿ ಹೆಚ್ಚು ಕೊವಿಡ್ ಟೆಸ್ಟ್ ಮಾಡಬೇಕು. ಕೆಲವೊಂದು ಹಳ್ಳಿಗಳಲ್ಲಿ ಒಂದೇ ಒಂದು ಕೇಸ್ ಪತ್ತೆಯಾಗಿಲ್ಲ. ಅಂತಹ ಹಳ್ಳಿಗಳಿಗೆ ಕೊರೊನಾ ಹರಡದಂತೆ ನಿಗಾವಹಿಸಬೇಕು ಎಂದು ಜಿಲ್ಲಾಡಳಿತಗಳ ಜೊತೆ ಸಭೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ ನೀಡಿದರು.

Leave a Reply

Your email address will not be published. Required fields are marked *

You May Also Like

ವಿಶ್ವ ಜಾನಪದ ದಿನ ಆಚರಣೆ: ಜಾನಪದ ಸಂರಕ್ಷಣೆ ಹಾಗೂ ಸಂವರ್ಧನೆ ಅಗತ್ಯ.

ಬೀದರ: ಜಾನಪದ ಜನ ಕೇಂದ್ರಿತ ಮೌಲ್ಯಗಳ ನಿದಿಯಾಗಿದ್ದು ಇದನ್ನು ಬಗೆದಷ್ಟು ದೇಶಿಯತೆ ಅನಾವರಣಗೊಳ್ಳುವುದು ಎಂದು ಕರ್ನಾಟಕ…

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ದುಡಿಯೋಣ ಬಾ ಅಭಿಯಾನ

ಬೇಸಿಗೆ ಅವಧಿಯಲ್ಲಿ ತಾಲೂಕೀನ ಗ್ರಾಮೀಣ ಪ್ರದೇಶದ ಜನರಿಗೆ ಕೆಲಸ ಒದಗಿಸುವ ಉದ್ದೇಶದಿಂದ ಮಹಾತ್ಮಗಾಂಧಿ ರಾಷ್ಟಿಯ ಉದ್ದಯೋಗ ಖಾತರಿ ಯೋಜನೆಯಡಿ ಮಾರ್ಚ 15 ರಿಂದ ಮೂರು ತಿಂಗಳವರೆಗೆ ದುಡಿಯೋಣ ಬಾ ಅಭಿಯಾನ ಹಮ್ಮಿಕೋಳ್ಳಲಾಗಿದೆ.

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ ಸಿದ್ದರಾಮಯ್ಯ

ಜ್ವರ ಕಾನಿಸಿಕೊಂಡ ಹಿನ್ನಲೆಯಲ್ಲಿ ಈಚೆಗೆ ಮಣಿಪಾಲ ಆಸ್ಪತ್ರೆಗೆ ಧಾಖಲಾಗಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್ ಮಾಡಿ ಮನೆಗೆ ಕಳುಹಿಸಿದ್ದಾರೆ.

ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರು!

ವಿಜಯಪುರ : ಭೀಮಾ ತೀರದಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದೆ. ಅಲ್ಲಿ ಮತ್ತೆ ನೆತ್ತರು ಹರಿದಿದೆ.