ಹುಬ್ಬಳ್ಳಿ: ರಾಜ್ಯದಲ್ಲಿ ಜೂನ್ 7 ರವರೆಗೆ ಲಾಕ್ ಡೌನ್ ಜಾರಿಯಲ್ಲಿದೆ. ಅಲ್ಲಿಯವರೆಗೆ ಲಾಕ್ ಡೌನ್ ಬಗ್ಗೆ ವಿಚಾರ ಬೇಡಾ. ಅಲ್ಲದೇ ಕೇಂದ್ರ ಸರ್ಕಾರ ಜೂನ್ 30 ರವರೆಗೆ ಲಾಕ್ ಡೌನ್ ಘೋಷಣೆ ಮಾಡಲಾಗುವುದು ಎಂದು ಹೇಳಿಲ್ಲಾ. ಅದು ಕಂಟೈನ್ಮೆಂಟ್ ಜೋನ್ ಸಂಖ್ಯೆಗಳನ್ನು ಹೆಚ್ಚಿಸಲು ಸೂಚಿಸಿರುವುದು. ಹಾಗಾಗಿ ಲಾಕ್ ಡೌನ್ ಬಗ್ಗೆ ಸಿಎಂ ಚರ್ಚಿಸಿ ಘೋಷಣೆ ಮಾಡುವರು ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ಅವರು ಹುಬ್ಬಳ್ಳಿಯಲ್ಲಿ ಮಾದ್ಯಮದವರೊಂದಿಗೆ ಮಾತನಾಡಿ, ಜಲ ಜೀವನ ಯೋಜನೆ ಅಡಿಯಲ್ಲಿ ಧಾರವಾಡ ಜಿಲ್ಲೆಯ 388 ಗ್ರಾಮಗಳಿಗೆ ಮುಂದಿನ ಮೂರು ವರ್ಷಗಳಲ್ಲಿ, ಕುಡಿಯುವ ನೀರು ಒದಗಿಸಲಾಗುತ್ತದೆ ಎಂದು ಹೇಳಿದರು.
ಮೊನ್ನೆ ನಡೆದ ಕ್ಯಾಬಿನೆಟ್ ಸಭೆಯಲ್ಲಿ, ಜಿಲ್ಲೆಗೆ 1032 ಕೋಟಿಯಲ್ಲಿ ಜಲ ಜೀವನ ಯೋಜನೆ ರೂಪಿಸಲಾಗಿದ್ದು, ಇದಕ್ಕೆ ಕೇಂದ್ರ ಸರ್ಕಾರ 403 ಕೋಟಿ ನೀಡಿದರೇ, 602 ಕೋಟಿ ರಾಜ್ಯ ಸರ್ಕಾರ ನೀಡಿದೆ, 423 ಕೋಟಿ ನಬಾರ್ಡ್ ರಿಂದ ಸಾಲ ತೆಗೆದುಕೊಳ್ಳಲಾಗುತ್ತಿದೆ ಎಂದರು.

ಇನ್ನು ಅಣ್ಣಿಗೇರಿಯನ್ನು ಹೊಸ ತಾಲೂಕು ಮಾಡಿದ ನಂತರ ಅಲ್ಲಿಯೂ ಕುಡಿಯುವ ನೀರಿಗಾಗಿ 54 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ ಎಂದರು.

Leave a Reply

Your email address will not be published. Required fields are marked *

You May Also Like

ಮೇ.22 ರಂದು ವಿಶೇಷ ರೈಲು ಸೇವೆ: ಸಚಿವ ಸುರೇಶ್ ಅಂಗಡಿ

ಬೆಳಗಾವಿ: ಮೇ.22 ರಂದು ರಾಜ್ಯದಲ್ಲಿ 2 ವಿಶೇಷ ರೈಲುಗಳ ಸಂಚಾರ ಆರಂಭಿಸಲಾಗುವುದು ಎಂದು ರೈಲ್ವೆ ಖಾತೆ…

ಪತ್ರಕರ್ತ ಅಬ್ದುಲ್ ಅಜೀಜ್ ಗೆ ವಿಶೇಷ ಪ್ರಶಸ್ತಿ

ವರದಿ: ವಿಠಲ ಕೆಳೂತ್ ಮಸ್ಕಿ: ಪಟ್ಟಣದ ಹಿರಿಯ ಪತ್ರಕರ್ತ ಅಬ್ದುಲ್ ಅಜೀಜ್ ಅವರು ಕರ್ನಾಟಕ ಕಾರ್ಯನಿರತ…

ಗದಗ ಜಿಲ್ಲೆಯ 9 ಕಂಟೇನ್‍ಮೆಂಟ್ ಪ್ರದೇಶಗಳ ನಿರ್ಭಂಧ ತೆರವು

ಜಿಲ್ಲೆಯ ಕೊವಿಡ್-19 ಸೋಂಕು ನಿಯಂತ್ರಣಕ್ಕಾಗಿ ಸೋಂಕಿನ ಸಕಾರಾತ್ಮಕ ಪ್ರಕರಣಗಳು ವರದಿಯಾದ ಕೆಳಕಂಡ 9 ಪ್ರದೇಶಗಳನ್ನು ನಿರ್ಬಂಧಿತ ಪ್ರದೇಶಗಳೆಂದು ಘೋಷಿಸಲಾಗಿತ್ತು. ಇದೀಗ 9 ಪ್ರದೇಶಗಳ ನಿರ್ಭಂಧವನ್ನು ಜಿಲ್ಲಾಡಳಿತ ತೆರವುಗೊಳಿಸಲಾಗಿದೆ.

ನರೆಗಲ್ ಗಾರ್ಡನ್ ಕಥೆ: ಲಕ್ಷ ಖರ್ಚು ಮಾಡಿದರು ಅಭಿವೃದ್ಧಿಗೆ ಅಧಿಕಾರಿಗಳ ನಿರ್ಲಕ್ಷ್ಯ..?

ಗದಗ: ಜಿಲ್ಲೆಯ ನರೇಗಲ್ ಪಟ್ಟಣದ 17ನೇ ವಾರ್ಡ್‌ನಲ್ಲಿ ಶ್ರೀ ಅನ್ನದಾನೇಶ್ವರ ಕಾಲೆಜು ಪಕ್ಕದಲ್ಲಿ ನಾಲ್ಕು ವರ್ಷಗಳ…