ಬೆಂಗಳೂರು: ಕೊರೊನಾದಿಂದ ಅನಾಥರಾದ ಮಕ್ಕಳಿಗೆ ಮಾಸಿಕ ಮೂರುವರೆ ಸಾವಿರ ಸಹಾಯ ಧನ ನೀಡುವುದಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.
ಕೊರೊನಾ ಸೋಂಕಿನಿಂದ ತಂದೆ-ತಾಯಿ ಇಬ್ಬರೂ ಮೃತಪಟ್ಟ ಅನಾಥ ಮಕ್ಕಳಿಗೆ ಈ ಸಹಾಯ ಧನ ತಲುಪಲಿದೆ. ಈ ಅನಾಥವಾದ ಮಕ್ಕಳನ್ನು ನೋಡಿಕೊಳ್ಳುವ ಸಂಬಂಧಿಕರು ಇರದಿದ್ದಲ್ಲಿ ನೋಂದಾಯಿತ ಪಾಲನಾ ಸಂಸ್ಥೆಗಳಿಗೆ ದಾಖಲಿಸಲಾಗುವುದು. ಇಂತಹ ಸಂದರ್ಭದಲ್ಲಿ ಈ ಸಹಾಯಧನ ಪಾಲನಾ ಸಂಸ್ಥೆಗಳಿಗೆ ತಲುಪಲಿದೆ ಎಂದು ಸಿಎಂ ಹೇಳಿದ್ದಾರೆ.