ಗದಗ: ಸರ್ಕಾರಕ್ಕೆ ಎರಡನೇ ಅಲೆಯ ಬಗ್ಗೆಯೇ ಇನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಅಂಥದ್ರಲ್ಲಿ ಮೂರನೇ ಅಲೆಯ ಬಗ್ಗೆ ಏನು ಸಿದ್ಧತೆ ಮಾಡಿಕೊಂಡಿಲ್ಲ. ಹಾವೇರಿ ಜಿಲ್ಲೆಯಲ್ಲಿ 721 ಮಕ್ಕಳಿಗೆ ಪಾಸಿಟಿವ್ ದೃಢಪಟ್ಟಿದೆ. ಆದರೆ ಈವರೆಗೆ ಸರ್ಕಾರದಿಂದ ಮಕ್ಕಳಿಗಾಗಿ ಚಿಕಿತ್ಸೆಯ ಪ್ರೊಟೊಕಾಲ್ ಬಂದಿಲ್ಲ ಎಂದು ಶಾಸಕ ಎಚ್.ಕೆ.ಪಾಟೀಲ್ ಬೇಸರ ವ್ಯಕ್ತಪಡಿಸಿದರು.
ಗದಗನಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಸಾವು ಬಹುದೊಡ್ಡ ಭಾವನಾತ್ಮಕ ವಿಚಾರ. ಕುಟುಂಬದಲ್ಲಿ ಅಥವಾ ಸಮೀಪದವರು ಸಾವನ್ನಪ್ಪಿದಾಗ ಮಾತ್ರ ಸಾವಿನ ನೋವು ಗೊತ್ತಾಗುತ್ತದೆ. ಹೀಗಾಗಿ ಅಂಕಿ ಸಂಖ್ಯೆ ಮೂಲಕ ಸಾವಿನ ವಿಚಾರವನ್ನು ಪರಿಗಣಿಸುವುದು ಸೂಕ್ತ ಅಲ್ಲ. ಇನ್ನು ಲಾಕ್ ಡೌನ್ ವಿಸ್ತರಣೆ ಬಗ್ಗೆ ಮಾದ್ಯಮದವರು ಕೇಳಿಗೆ ಪ್ರಶ್ನೆಗೆ ಲಾಕ್ ಡೌನ್ ಮುಂದುವರಿಕೆ ವಿಚಾರದ ಬಗ್ಗೆ ಸರ್ಕಾರ ನಮ್ಮ ಅಭಿಪ್ರಾಯ ಕೇಳಿದಾಗ ಸೂಕ್ತ ಸಲಹೆ ನೀಡುತ್ತೇವೆ ಎಂದು ಪ್ರತಿಕ್ರಿಯಿಸಿದರು.