ಗದಗ: ಸರ್ಕಾರಕ್ಕೆ ಎರಡನೇ ಅಲೆಯ ಬಗ್ಗೆಯೇ ಇನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಅಂಥದ್ರಲ್ಲಿ ಮೂರನೇ ಅಲೆಯ ಬಗ್ಗೆ ಏನು ಸಿದ್ಧತೆ ಮಾಡಿಕೊಂಡಿಲ್ಲ. ಹಾವೇರಿ ಜಿಲ್ಲೆಯಲ್ಲಿ 721 ಮಕ್ಕಳಿಗೆ ಪಾಸಿಟಿವ್ ದೃಢಪಟ್ಟಿದೆ. ಆದರೆ ಈವರೆಗೆ ಸರ್ಕಾರದಿಂದ ಮಕ್ಕಳಿಗಾಗಿ ಚಿಕಿತ್ಸೆಯ ಪ್ರೊಟೊಕಾಲ್ ಬಂದಿಲ್ಲ ಎಂದು ಶಾಸಕ ಎಚ್.ಕೆ.ಪಾಟೀಲ್ ಬೇಸರ ವ್ಯಕ್ತಪಡಿಸಿದರು.
ಗದಗನಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಸಾವು ಬಹುದೊಡ್ಡ ಭಾವನಾತ್ಮಕ ವಿಚಾರ. ಕುಟುಂಬದಲ್ಲಿ ಅಥವಾ ಸಮೀಪದವರು ಸಾವನ್ನಪ್ಪಿದಾಗ ಮಾತ್ರ ಸಾವಿನ ನೋವು ಗೊತ್ತಾಗುತ್ತದೆ. ಹೀಗಾಗಿ ಅಂಕಿ ಸಂಖ್ಯೆ ಮೂಲಕ ಸಾವಿನ ವಿಚಾರವನ್ನು ಪರಿಗಣಿಸುವುದು ಸೂಕ್ತ ಅಲ್ಲ. ಇನ್ನು ಲಾಕ್ ಡೌನ್ ವಿಸ್ತರಣೆ ಬಗ್ಗೆ ಮಾದ್ಯಮದವರು ಕೇಳಿಗೆ ಪ್ರಶ್ನೆಗೆ ಲಾಕ್ ಡೌನ್ ಮುಂದುವರಿಕೆ ವಿಚಾರದ ಬಗ್ಗೆ ಸರ್ಕಾರ ನಮ್ಮ ಅಭಿಪ್ರಾಯ ಕೇಳಿದಾಗ ಸೂಕ್ತ ಸಲಹೆ ನೀಡುತ್ತೇವೆ ಎಂದು ಪ್ರತಿಕ್ರಿಯಿಸಿದರು.

Leave a Reply

Your email address will not be published. Required fields are marked *

You May Also Like

ತಾಲೂಕು ಕೇಂದ್ರಗಳಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ

ಗದಗ ಜಿಲ್ಲೆಯ ತಾಲೂಕಾ ಕೇಂದ್ರಗಳಿಗೆ ಲೋಕಾಯುಕ್ತ ಅಧಿಕಾರಿಗಳು ಪ್ರತಿ ತಿಂಗಳು ಭೇಟಿ ನೀಡುವ ಕಾರ್ಯಕ್ರಮ ನಿಗದಿಪಡಿಸಲಾಗಿದೆ.

ಬಿಎಂಟಿಸಿ ಪಾಸ್ ದರ ಇಳಿಕೆ: ಇನ್ಮುಂದೆ ಟಿಕೇಟ್ ಬದಲಾಗಿ ಪಾಸ್, ಯಾವುದಕ್ಕೆ ಎಷ್ಟು?

ಕೊನೆಗೂ ಪ್ರಯಾಣಿಕರ ಮನವಿಗೆ ಸ್ಪಂದಿಸಿದ ಬಿಎಂಟಿಸಿ ಪಾಸ್ ದರವನ್ನು ಇಳಿಕೆಗೆ ಮುಂದಾಗಿದೆ. ನಾಳೆಯಿಂದಲೇ ಹೊಸ ದರ ಅನ್ವಯವಾಗಲಿದೆ. ಹೀಗಾಗಿ ನಿತ್ಯ ಸಿಲಿಕಾನ್ ಸಿಟಿಯಲ್ಲಿ ಬಿಎಂಟಿಸಿ ಬಸ್ ಗಳನ್ನೆ ನೆಚ್ಚಿಕೊಂಡಿದ್ದ ಲಕ್ಷಾಂತರ ಜನರಿಗೆ ಇಂದು ಬಿಎಂಟಿಸಿ ಸಿಹಿ ಸುದ್ದಿ ನಿಡಿದೆ.

ಮಾನಸಿಕ ಒತ್ತಡದ ನಿವಾರಣೆಗೆ ದೈಹಿಕ ಚಟುವಟಿಕೆ ಅಗತ್ಯ

ಆರೋಗ್ಯ ಸಂಪತ್ತಿಗಿಂತ ಮಿಗಿಲಾದ ಸಂಪತ್ತು ಇನ್ನೊಂದಿಲ್ಲ. ಆರೋಗ್ಯವೇ ಭಾಗ್ಯ. ದೈಹಿಕ ಹಾಗೂ ಮಾನಸಿಕ ಆರೋಗ್ಯ ಸಮಸ್ಥಿತಿಯಲ್ಲಿದ್ದರೆ ಜೀವನದಲ್ಲಿ ಸಾಧನೆ ಮಾಡಲು ಸಹಕಾರಿಯಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಬಿ. ಸಂಕನೂರ ತಿಳಿಸಿದರು.

ಗದಗ ಜಿಲ್ಲೆಯಲ್ಲಿ ಮುಂದುವರಿದ ಕೊರೊನಾ ಆರ್ಭಟ

ಗದಗ:ಭಾನುವಾರದವರೆಗೆ ಜಿಲ್ಲೆಯಲ್ಲಿ ಸೋಂಕಿನ ಪರೀಕ್ಷೆಗಾಗಿ 7,05,325 ಮಾದರಿ ಸಂಗ್ರಹಿಸಿದ್ದು, 6,78,688 ನಕಾರಾತ್ಮಕವಾಗಿವೆ. ಶನಿವಾರದ 117 ಪ್ರಕರಣ…