ಗದಗ: ನಮ್ಮ ಜನ ನಮ್ಮ ಕಣ್ಣೆದುರಿಗೆಯೇ ವೆಂಟಿಲೇಟರ್ ಸಮಸ್ಯೆಯಿಂದ ಜೀವ ಕಳೆದುಕೊಳ್ಳವ ಸ್ಥಿತಿ ಬಂದಿರುವುದನ್ನು ಗಮನಿಸಿ ಸಾಲದ ಆಧಾರದ ಮೇಲೆ ಕೊಲ್ಹಾಪುರದ ಡಿ.ವೈ.ಪಾಟೀಲ್ ಟ್ರಸ್ಟ್ 25 ವೆಂಟಿಲೇಟರ್ ಕೊಡಮಾಡುತ್ತಿರುವುದು ಸಂತಸದ ಸಂಗತಿ ಎಂದು ಕಾಂಗ್ರೆಸ್ ಮುಖಂಡ ಹಾಗೂ ಶಾಸಕ ಎಚ್.ಕೆ.ಪಾಟೀಲ್ ಹೇಳಿದರು.
ಅವರು ಈ ಕುರಿತು ಗದಗ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಡಿ.ವೈ,ಪಾಟೀಲ್ ಟ್ರಸ್ಟ್ ನ ಭಂಟಿ ಪಾಟೀಲ ಅವರು ನಮ್ಮ ಮನವಿಗೆ ಸ್ಪಂದಿಸಿ, ಗದಗ ಜಿಲ್ಲೆಗೆ 25 ವೆಂಟಿಲೇಟರ್ ಕಳುಹಿಸಿಕೊಡುವ ಭರವಸೆ ನೀಡಿದ್ದರು. ಇದರಲ್ಲಿ ಈಗಾಗಲೇ 15 ವೆಂಟಿಲೇಟರ್ ತಲುಪಿದ್ದು, ಇನ್ನು ಐದು ವೆಂಟಿಲೇಟರ್ ಸೋಮವಾರದೊಳಗೆ ತಲುಪುವ ಸಾಧ್ಯತೆ ಇದೆ. ಈಗಾಗಲೇ ಬಂದಿರುವ 13 ವೆಂಟಿಲೇಟರ್ ಗಳನ್ನು ಜಿಮ್ಸ್ ಗೆ, 2 ವೆಂಟಿಲೇಟರ್ ಗಳನ್ನು ರೋಣದ ರಾಜೀವ್ ಗಾಂಧಿ ಆಸ್ಪತ್ರೆಗೆ ತಲುಪಿಸಲಾಗುವುದು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಸರ್ಕಾರದ ಅಧಿಕೃತ ಅಂಕಿ ಸಂಖ್ಯೆಗಳ ಪ್ರಕಾರ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಜಿಮ್ಸ್ ಸೇರಿದಂತೆ ಬಹಳಷ್ಟು ಆಸ್ಪತ್ರೆಗಳಲ್ಲಿ ಬೆಡ್ ಖಾಲಿ ಇರುವುದು ಗಮನಿಸುತ್ತಿದ್ದೇವೆ. ಜಿಮ್ಸ್ ನಲ್ಲಿ 10-15 ಬೆಡ್ ಗಳು ಖಾಲಿ ಇವೆ. ಆದರೆ ವೆಂಟಿಲೇಟರ್ ಬೇಡಿಕೆ ಮತ್ತು ಅಗತ್ಯತೆ ಹೆಚ್ಚಿದೆ. ವೆಂಟಿಲೇಟರ್ ಅನಿವಾರ್ಯತೆ ಗಮನಕ್ಕೆ ಬಂದಿದೆ. ಜಿಮ್ಸ್ ನಲ್ಲಿ ಈಗಾಗಲೇ 74 ವೆಂಟಿಲೇಟರ್ ಅಳವಡಿಸಲಾಗಿದ್ದು, ಮೇ.27 ರಂದು 28 ವೆಂಟಿಲೇಟರ್ ಗಾಗಿ ರೋಗಿಗಳು ಹೆಚ್ಚುವರಿಯಾಗಿದ್ದರು. ಮೇ.28 ರಂದು 41 ರೋಗಿಗಳು ವೇಟಿಂಗ್ ಗಾಗಿ ಸರತಿಯಲ್ಲಿದ್ದರು. ಮೇ.29 ರಂದು 40 ಜನ ಹಾಗೂ 30 ರಂದು 42 ಜನ ವೇಟಿಂಗ್ ನಲ್ಲಿದ್ದರು. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ವೆಂಟಿಲೇಟರ್ ಗಾಗಿ ಸರತಿಯಲ್ಲಿ ಕಾಯುವಂತಾಗಿದೆ. ವೆಂಟಿಲೇಟರ್ ಗಾಗಿ ವೇಟಿಂಗ್ ನಲ್ಲಿರುವವರ ಸರತಿ ಬರುವಷ್ಟರಲ್ಲಿ ಅವರ ಜೀವದ ಗತಿ ಏನು? ಈ ಕಾರಣದಿಂದ ನಾನು ವೆಂಟಿಲೇಟರ್ ಗಳ ಬಗ್ಗೆ ಗಂಭೀರ ಪ್ರಯತ್ನ ಮಾಡಿದ್ದೇನೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

You May Also Like

ಕ್ಷೇತ್ರದ ಅಭಿವೃದ್ಧಿಗಾಗಿ ಕಾಂಗ್ರೆಸ್ ಗೆಲುವಿಗೆ ಶ್ರಮಿಸಿ

80 ವರ್ಷ ಮೇಲ್ಪಟ್ಟ ಮತದಾರರ ಮತದಾನ ಜಾಗ್ರತಿಯಲ್ಲಿ: ಅಭಯ ಪಾಟೀಲ ಅಭಿಮತ ಉತ್ತರಪ್ರಭ ಸುದ್ದಿ ರೋಣ:…

ಗದಗ ಜಿಲ್ಲೆಯಲ್ಲಿ ಕೊರೊನಾಗೆ ಮತ್ತೊಂದು ಬಲಿ: ಸಾವಿನ ಸಂಖ್ಯೆ 4 ಕ್ಕೆ ಏರಿಕೆ..!

ಗದಗ : ಜಿಲ್ಲೆಯಲ್ಲಿ ಕೊರೋನಾಗೆ ಇಂದು ಮತ್ತೊಂದು ಬಲಿಯಾಗಿದ್ದು ಈ ಮೂಲಕ ಸಾವಿನ ಸಂಖ್ಯೆ 4…

ರೈತ ಕಷ್ಟಗಳನ್ನು ಮೆಟ್ಟಿ ನಿಲ್ಲಬೇಕು : ಕವಿತಾ ಮಿಶ್ರಾ

ಕೃಷಿ ಕ್ಷೇತ್ರ ನಶಿಸಿ ಹೊಗುತ್ತಿದೆ. ಇಂದು ರೈತರು ತಲೆ ಮೇಲೆ ಸಾಲ ಹೊತ್ತು ಬದುಕು ಎದುರಿಸುವುದು ಕಷ್ಟಸಾಧ್ಯವಾಗಿದೆ. ಇದರಿಂದಾಗಿ ಆರ್ಥಿಕ ಸಂಕಷ್ಟ ಎದುರಿಸಲಾಗದೇ ಆತ್ಮಹತ್ಯೆಯ ಹಾದಿ ಹಿಡಿಯುತ್ತಿದ್ದಾರೆ ಎಂದು ಕೃಷಿಕ ಮಹಿಳೆ ಕವಿತಾ ಮಿಶ್ರಾ ಹೇಳಿದರು.

ಅಂದು ವಿಶ್ವ ಕಪ್ ತಂದು ಕೊಟ್ಟ ತಂಡದಲ್ಲಿ ಕ್ರಿಕೆಟಿಗ ಯಶ್ ಪಾಲ್ ಇನ್ನಿಲ್ಲ!

ನವದೆಹಲಿ: 1983 ರಲ್ಲಿ ಭಾರತ ತಂಡ ವಿಶ್ವ ಕಪ್ ತನ್ನ ಮುಡಿಗೇರಿಸಿಕೊಂಡಿತ್ತು. ಇದು ಭಾರತದ ಕ್ರೀಕೆಟ್ ಇತಿಹಾಸದಲ್ಲಿ ಮಹತ್ವದ ವರ್ಷವಾಗಿತ್ತು. ಕ್ರೀಕೆಟ್ ಇತಿಹಾಸದಲ್ಲಿ ಭಾರತಕ್ಕೊಂದು ಮೈಲುಗಲ್ಲಾದ 1983 ರ ವಿಶ್ವಕಪ್ ಪಡೆದ ತಂಡದ ಸದಸ್ಯರೊಬ್ಬರು ನಿಧನ ಹೊಂದಿದ್ದಾರೆ. ಹೌದು, ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ಯಶ್ ಪಾಲ್ ಶರ್ಮಾ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ.