ನವದೆಹಲಿ: ಕೋವಿಡ್-19 ಸಾಂಕ್ರಾಮಿಕದಿoದ ಪ್ರಾಣ ಕಳೆದುಕೊಂಡವರ ಅವಲಂಬಿತರಿಗೆ ಕುಟುಂಬವನ್ನು ಸಲುಹಲು ಸಂಪಾದನೆ ಮಾಡುತ್ತಿದ್ದ ಸದಸ್ಯನನ್ನು ಕಳೆದುಕೊಂಡ ಕುಟುಂಬಗಳಿಗೆ ಕೇಂದ್ರ ಸರ್ಕಾರ ಪ್ರಯೋಜನಗಳನ್ನು ಪ್ರಕಟಿಸಿದೆ.
ಇಡಿಎಲ್ಐ ಯೋಜನೆಯಡಿ ಕುಟುಂಬಗಳಿಗೆ ಪಿಂಚಣಿ, ವಿಮಾ ಯೋಜನೆ ಅಲ್ಲದೇ, ವಿಮಾನ ಯೋಜನೆಗಳನ್ನು ಹೆಚ್ಚಿಸಲಾಗಿದೆ. ಉದಾರೀಕರಣ ಮಾಡಲಾಗಿದೆ. ಈ ಕುಟುಂಬಗಳು ಎದುರಿಸುತ್ತಿರುವ ಆರ್ಥಿಕ ತೊಂದರೆಗಳನ್ನು ತಗ್ಗಿಸಲು ಈ ಕ್ರಮಗಳು ಸಹಾಯ ಮಾಡುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕುಟುಂಬವು ಘನತೆಯ ಜೀವನವನ್ನು ನಡೆಸಲು ಮತ್ತು ಉತ್ತಮ ಜೀವನ ಮಟ್ಟವನ್ನು ಕಾಪಾಡಿಕೊಳ್ಳಲು ಸಹಾಯ ಮಾಡಲು, ಉದ್ಯೋಗ ಸಂಬAಧಿತ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದ ಇಎಸ್ಐ ಪಿಂಚಣಿ ಯೋಜನೆಯ ಪ್ರಯೋಜನವನ್ನು ಕೋವಿಡ್ನಿಂದ ಸಾವನ್ನಪ್ಪಿದವರಿಗೂ ವಿಸ್ತರಿಸಲಾಗುತ್ತಿದೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ತಿಳಿಸಿದೆ.
ಅಸ್ತಿತ್ವದಲ್ಲಿರುವ ಮಾನದಂಡಗಳ ಪ್ರಕಾರ ಉದ್ಯೋಗಿಯು ಪಡೆಯುತ್ತಿದ್ದ ಸರಾಸರಿ ದೈನಂದಿನ ವೇತನದ ಶೇ.90ಕ್ಕೆ ಸಮಾನವಾದ ಪಿಂಚಣಿ ಸೌಲಭ್ಯವನ್ನು ಮೃತ ವ್ಯಕ್ತಿಗಳ ಅವಲಂಬಿತ ಕುಟುಂಬ ಸದಸ್ಯರು ಪಡೆಯುತ್ತಾರೆ. ಈ ಸೌಲಭ್ಯವು 24.03.2020 ರಿಂದ ಪೂರ್ವಾನ್ವಯವಾಗಿ ಮತ್ತು 24.03.2022 ರವರೆಗೆ ಎಲ್ಲಾ ಪ್ರಕರಣಗಳಿಗೆ ಅನ್ವಯವಾಗುತ್ತದೆ. ಇಡಿಎಲ್ಐ ಯೋಜನೆಯಡಿ ವಿಮಾ ಸೌಲಭ್ಯಗಳನ್ನು ಹೆಚ್ಚಿಸಲಾಗಿದೆ ಮತ್ತು ಉದಾರೀಕರಣ ಮಾಡಲಾಗಿದೆ. ಇದು ಇತರ ಎಲ್ಲಾ ಫಲಾನುಭವಿಗಳೊಂದಿಗೆ, ನಿರ್ದಿಷ್ಟವಾಗಿ ಕೋವಿಡ್ನಿಂದ ಪ್ರಾಣ ಕಳೆದುಕೊಂಡ ನೌಕರರ ಕುಟುಂಬಗಳಿಗೆ ಸಹಾಯ ಮಾಡುತ್ತದೆ. ಗರಿಷ್ಠ ವಿಮಾ ಲಾಭದ ಮೊತ್ತವನ್ನು 6 ಲಕ್ಷ ರೂ. ಗಳಿಂದ 7 ಲಕ್ಷ ರೂ. ಗಳಿಗೆ ಹೆಚ್ಚಿಸಲಾಗಿದೆ 2.5 ಲಕ್ಷ ರೂ. ಕನಿಷ್ಠ ವಿಮಾ ಪ್ರಯೋಜನವನ್ನು ಮರು ಸ್ಥಾಪಿಸಲಾಗಿದೆ ಮತ್ತು 2020 ರ ಫೆಬ್ರವರಿ 15 ರಿಂದ ಪೂರ್ವಾನ್ವಯದೊಂದಿಗೆ ಮುಂದಿನ ಮೂರು ವರ್ಷಗಳವರೆಗೆ ಇದು ಅನ್ವಯವಾಗುತ್ತದೆ. ಗುತ್ತಿಗೆ/ಸಾಂದರ್ಭಿಕ ನೌಕರರ ಕುಟುಂಬಗಳಿಗೆ ಅನುಕೂಲವಾಗುವಂತೆ, ಕೇವಲ ಒಂದು ಸಂಸ್ಥೆಯಲ್ಲಿ ನಿರಂತರ ಉದ್ಯೋಗದಲ್ಲಿರಬೇಕಿದ್ದ ನಿಯಮವನ್ನು ಉದಾರೀಕರಣಗೊಳಿಸಲಾಗಿದ್ದು, ಸಾವಿಗೆ ಮುಂಚಿನ ಕಳೆದ 12 ತಿಂಗಳುಗಳಲ್ಲಿ ಸಂಸ್ಥೆಗಳನ್ನು ಬದಲಿಸಿದ ನೌಕರರ ಕುಟುಂಬಗಳಿಗೂ ಸೌಲಭ್ಯವನ್ನು ಒದಗಿಸಲಾಗಿದೆ ಎಂದು ಪಧಾನಮಂತ್ರಿ ಕಾರ್ಯಾಲಯ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ವಿಯೆಟ್ನಾಂನಲ್ಲಿ ಶಿವಲಿಂಗ ಪತ್ತೆ

9ನೇ ಶತಮಾನದ ಶಿವಲಿಂಗಗಳು ವಿಯೆಟ್ನಾಂನಲ್ಲಿ ಪತ್ತೆಯಾಗಿದ್ದು ಈ ಬಗ್ಗೆ ಭಾರತ ವಿದೇಶಾಂಗ ಸಚಿವ ಎಸ್.ಜೈಶಂಕರ್ ಮಾಹಿತಿ ನೀಡಿದ್ದಾರೆ.

ಕಂಟೈನ್ಮೆಂಟ್ ಬಿಟ್ಟು ಉಳಿದೆಡೆ ವಹಿವಾಟಿಗೆ ಅವಕಾಶ ನೀಡಬೇಕು

ನವದೆಹಲಿ: ದೇಶದಾದ್ಯಂತ ಸದ್ಯ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಮಹಾಮಾರಿ ಕೊರೊನಾ ವಿರುದ್ಧ ಹೋರಾಡಲು ಎಲ್ಲ ರೀತಿಯ…

ಇಟಲಿ ದಾಟಿ ಮುಂದೆ ಹೋದ ಭಾರತ!!

ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ.ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ…

ಇ-ರ‌್ಯಾಲಿ ಪರಿಣಾಮ: 25 ಬಿಜೆಪಿ ಲೀಡರ್ಸ್ ಪಾಸಿಟಿವ್

ಪಾಟ್ನಾ: ಬಿಜೆಪಿಯ ಪಾಟ್ನಾ ಕೇಂದ್ರ ಕಚೇರಿಯಲ್ಲಿ ಆತಂಕ ಶುರುವಾಗಿದೆ. ರಾಜ್ಯ ಸಂಘಟನಾ ಕಾರ್ಯದರ್ಶಿ ನಾಗೇಂದ್ರನಾಥ್, ಪ್ರಧಾನ ಕಾರ್ಯದರ್ಶಿ ದೇವೇಶ್ಕುಮಾರ್ ಮತ್ತು ರಾಜ್ಯ ಬಿಜೆಪಿ ಉಪಾಧ್ಯಕ್ಷ