ರೋಣ: ಪಟ್ಟಣದಾದ್ಯಂತ ಕಠಿಣ ಲಾಕ್ ದೌನ್ ಹಿನ್ನೆಲೆ ಘೋಷಣೆಯಾಗಿದ್ದು, ಸತತವಾಗಿ ಮೂರನೇ ದಿನಕ್ಕೆ ಕಾಲಿಟ್ಟಿದೆ. ಕಠಿಣ ಕ್ರಮಕ್ಕೆ ಜನರು ಸಹಕಾರ ನೀಡಿದ ಪರಿಣಾಮ ನಗರದ ಪ್ರಮುಖ ರಸ್ತೆಗಳು ಬಿಕೋ ಎನ್ನುತ್ತಿದ್ದವು. ಅನಗತ್ಯವಾಗಿ ಯಾರೊಬ್ಬರೂ ಹೊರಬರದೆ ಇರುವುದು ಆಶ್ಚರ್ಯಕರ ಸಂಗತಿಯಾಗಿದೆ.
ಕೃಷಿ ಪ್ರಧಾನ ಕುಟುಂಬಗಳೇ ಹೆಚ್ಚಿದ್ದರೂ ಕೂಡ ಅನಾವಶ್ಯಕವಾಗಿ ಹೊರಬರುವ ಜನರು ಸಂಪೂರ್ಣ ಎಚ್ಛೆತ್ತು ಮನೆಯಲ್ಲಿಯೇ ಕುಳಿತಿರುವುದು ಪೊಲೀಸರು ಹಾಗೂ ಸರ್ಕಾರದ ಪ್ರಹತ್ನಕ್ಕೆ ಸಹಕಾರ ನೀಡಿದಂತಾಗಿದೆ ಎಂದು ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಸಂತೋಷ್ ಪಾಟೀಲ ಹೇಳಿದರು.
ನಗರದಲ್ಲಿ ಅಷ್ಟೇ ಅಲ್ಲದೇ ಗ್ರಾಮೀಣ ಪ್ರದೇಶದಲ್ಲಿಯೂ ಕೊರೋನ ಮುಕ್ತ ಗ್ರಾಮಗಳನ್ನಾಗಿ ಮಾಡುವಲ್ಲಿ ಟಾಸ್ಕ್ ಪೋರ್ಸ್ ಸಮಿತಿ ಶ್ರಮ ಪಡಬೇಕು ಎನ್ನುವುದು ಪ್ರಜ್ಞಾವಂತರ ಅಭಿಪ್ರಾಯ.