ಲಖನೌ: ಕೋವಿಡ್-19 ವೇಳೆ ಕರ್ತವ್ಯ ನಿಷ್ಠೆ ಮೆರೆದು ಪ್ರಾಣ ಕಳೆದುಕೊಂಡ ಪತ್ರಕರ್ತರ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರವನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ.
ಹಿಂದಿ ಪತ್ರಕರ್ತರ ದಿನಾಚರಣೆ ಅಂಗವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾತಂತ್ರ್ಯಪ ಪೂರ್ವ ಹಾಗೂ ನಂತರ ದೇಶ ಕಟ್ಟುವಲ್ಲಿ ಹಿಂದಿ ಪತ್ರಕರ್ತರ ಪಾತ್ರ ಅಪಾರವಾಗಿದೆ ನಮ್ಮ ದೇಶವನ್ನು ಪ್ರಗತಿಯತ್ತ ಮುನ್ನಡೆಸುವ ಎಲ್ಲಾ ಪತ್ರಕರ್ತರಿಗೂ ನನ್ನ ನುಡಿ ನಮನಗಳನ್ನು ಅರ್ಪಿಸಿದರು. ಪತ್ರಕರ್ತರನ್ನು ಪ್ರೋತ್ಸಾಹಿಸಲು ಸರ್ಕಾರ ಸದಾ ಸಿದ್ಧವಾಗಿರುತ್ತದೆ. ಪತ್ರಕರ್ತರ ಕುಟುಂಬದವರು ಸಂಕಷ್ಟಕ್ಕೆ ಸಿಲುಕಿರುವುದರಿಂದ ಪ್ರಾಣ ಕಳೆದುಕೊಂಡ ಪತ್ರಕರ್ತರ ಕುಟುಂಬಕ್ಕೆ ಉತ್ತರಪ್ರದೇಶ ಸರ್ಕಾರದಿಂದ 10 ಲಕ್ಷ ರೂ. ಪರಿಹಾರ ನೀಡಿ, ಪತ್ರಕರ್ತರ ಕುಟುಂಬಕ್ಕೆ ನೆರವು ನೀಡಲು ಮುಂದಾಗಿದ್ದೇವೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದರು.

Leave a Reply

Your email address will not be published. Required fields are marked *

You May Also Like

ಕೊರೊನಾ ಕಾರಣದಿಂದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆ- ಸಿ.ಸಿ.ಪಾಟೀಲ್

ಕೊರೋನಾದ ಪರಿಣಾಮದಿಂದ ಕಂಗಾಲಾದ ನಾವು ನೀವೆಲ್ಲರೂ ಇದೀಗ ಹೊರಗಡೆ ಬಂದಂತಾಗಿದೆ, ಸುಮಾರು ದಿನಗಳಿಂದ ಯಾವುದೇ ಅಭಿವೃದ್ಧಿ ಕಾಮಗಾರಿಗಳ ಪೂಜೆ ಮಾಡದೇ ಇರುವುದಕ್ಕೆ ಕಾರಣ ಈ ಮಹಾಮಾರಿ ಕರೋನ. ಇದರಿಂದ ದೇಶದ ಬೊಕ್ಕಸ, ರಾಜ್ಯದ ಬೊಕ್ಕಸ, ವ್ಯಾಪಾರಸ್ಥರಿಗೆ ಹಿನ್ನೆಡೆ ಮತ್ತು ಉದ್ಯಮಿಗಳಿಗೆ ಭಾರೀ ತೊಂದರೆ ಉಂಟಾಗಿದೆ ಎಂದು ಸಚಿವ ಸಿ.ಸಿ.ಪಾಟೀಲ್ ಹೇಳಿದರು.

ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಮಾರ್ಗಸೂಚಿ ಪಾಲಿಸಿ

ಗದಗ:ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಹಾಗೂ ಸೋಂಕಿತ ಚಿಕಿತ್ಸೆ ನೀಡುವಲ್ಲಿ ಸರ್ಕಾರ ನೀಡಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನ…

ವಿಯೆಟ್ನಾಂನಲ್ಲಿ ಶಿವಲಿಂಗ ಪತ್ತೆ

9ನೇ ಶತಮಾನದ ಶಿವಲಿಂಗಗಳು ವಿಯೆಟ್ನಾಂನಲ್ಲಿ ಪತ್ತೆಯಾಗಿದ್ದು ಈ ಬಗ್ಗೆ ಭಾರತ ವಿದೇಶಾಂಗ ಸಚಿವ ಎಸ್.ಜೈಶಂಕರ್ ಮಾಹಿತಿ ನೀಡಿದ್ದಾರೆ.

ರಾಮನಗರಕ್ಕೂ ಕೊರೋನಾ ಎಂಟ್ರಿ..!

ಈತನಕ ಯಾವುದೇ ಪ್ರಕರಣಗಳು ಕಂಡ ಬರದ ಹಿನ್ನೆಲೆ ಗ್ರೀನ್ ಝೋನ್ ನಲ್ಲಿದ್ದ ರಾಮನಗರದಲ್ಲಿ ಕೂಡ ಇದೀಗ ಕೊರೋನಾ ಖಾತೆ ತೆರೆದಿದೆ.