ಮುಂಡರಗಿ: ಕೊರೊನಾದ ಈ ಸಂಕಷ್ಟದಲ್ಲಿ ಜನಸಾಮಾನ್ಯರ ಬದುಕು ತೀರಾ ಸಂಕಷ್ಟಕ್ಕೀಡಾಗಿದೆ. ಇಂತಹ ಸಂದರ್ಭದಲ್ಲಿ ಜನರ ನೆರವಿಗೆ ಧಾವಿಸುವ ಮೂಲಕ ಗ್ರಾಮ ಪಂಚಾಯತಿ ಸದಸ್ಯನೊಬ್ಬ ಸೇವಾ ಕಾರ್ಯಕ್ಕೆ ಅಣಿಯಾಗಿದ್ದಾರೆ. ಹೌದು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕಲಕೇರಿ ಗ್ರಾಮ ಪಂಚಾಯತಿ ಸದಸ್ಯ ಜಹೀರುದ್ದೀನ್ ಮುಲ್ಲಾ, ಗ್ರಾಮದಲ್ಲಿ ಉಚಿತ ತುರ್ತು ಸೇವಾ ವಾಹನದ ವ್ಯವಸ್ಥೆಯನ್ನು ಮಾಡಿದ್ದಾರೆ. ಜೊತೆಗೆ ಕೊರೊನಾ ಜಾಗೃತಿಗೂ ಅಣಿಯಾಗಿದ್ದಾರೆ.ತುರ್ತು ವಾಹನ ಸೇವೆಗೆ ಮಾಜಿ ಸಚಿವ ಎಸ್.ಎಸ್.ಪಾಟೀಲ್ ಕಲಕೇರಿಯಲ್ಲಿ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಕೊರೊನಾದ ಈ ಸಂದಿಗ್ಧತೆಯಲ್ಲಿ ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದರು.
ಈ ವೇಳೆ ಮಾತನಾಡಿದ ಗ್ರಾಮ ಪಂಚಾಯತಿ ಸದಸ್ಯ ಜಹೀರುದ್ಧೀನ್ ಮಾತನಾಡಿ, ಉಳ್ಳವರು ಕೈಲಾದಷ್ಟ ಜನರಿಗಾಗಿ ಸೇವೆಗೆ ಮುಂದಾದರೆ ಬಡ ಜನರ ಸಂಕಷ್ಟಕ್ಕೆ ಸ್ಪಂದಿಸಿದ ಸಂತಸ ಉಂಟಾಗುತ್ತದೆ ಎಂದರು. ಇದೇ ವೇಳೆ ಕೊರೊನಾ ವಾರಿಯರ್ಸ್ ಆಗಿ ಕಾರ್ಯ ನಿರ್ವಹಿಸುವವರ ಕಾರ್ಯವನ್ನು ಶ್ಲಾಘಿಸಿದರು.
ಏನೇ ಆಗಲಿ ಜನಪ್ರತಿನಿಧಿಗಳು ಗೆದ್ದ ಮೇಲೆ ಬದಲಾಗ್ತಾರೆ ಅಂತಾರೆ. ಆದರೆ ಗೆದ್ದ ಮೇಲೂ ಇಂಥ ಸೇವಾ ಕಾರ್ಯ ಮಾಡಲು ಮುಂದಾಗಿರುವ ಜಹೀರ್ ಕಾರ್ಯ ಪ್ರಶಂಸನೀಯ.

Leave a Reply

Your email address will not be published. Required fields are marked *

You May Also Like

ಜನಾರ್ದನ ರೆಡ್ಡಿ ಪತ್ನಿ ಲಕ್ಷ್ಮೀ ಅರುಣಾಗೆ ಬಿಗ್ ರಿಲೀಫ್

ಮೆಸ​ರ್ಸ್ ಅಸೋಸಿಯೇಟೆಡ್ ಮೈನಿಂಗ್ ಕಂಪನಿ ಬಳ್ಳಾರಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಸಿದ ಪ್ರಕರಣದಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ಪತ್ನಿ ಲಕ್ಷ್ಮೀ ಅರುಣಾ ಅವರ ಹೆಸರು ಕೈಬಿಟ್ಟು ನಗರದ ಸಿಬಿಐ ವಿಶೇಷ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಪುರಸ್ಕರಿಸಿದೆ.

ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ ನಿಯಮಕ್ಕೆ ಆಕ್ಷೇಪಣೆ

ಶಿಕ್ಷಕರ ವರ್ಗಾವಣಾ ಕಾಯ್ದೆಯನ್ನು ಸಂಪೂರ್ಣ ಶಿಕ್ಷಕ ಸ್ನೇಹಿ ವರ್ಗಾವಣಾ ಕಾಯ್ದೆಯಾಗಿ ರೂಪಗೊಳ್ಳಬೇಕಾದರೆ ಕೆಲವು ಅಂಶಗಳನ್ನು ಅಳವಡಿಸಿಕೊಂಡು ಅಂತಿಮ ನಿಯಮಗಳನ್ನು ಹಾಗೂ ಮಾರ್ಗಸೂಚಿಗಳನ್ನು ಪ್ರಕಟಿಸಬೇಕೆಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಈ ಕುರಿತು ಇಂದು ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದೆ.

ಶಿಕ್ಷಕರಿಗೆ ರಜೆ ನೀಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಮಾಜಿ ಸಿಎಂ!

ಬೆಂಗಳೂರು : ರಾಜ್ಯ ಸರ್ಕಾರ, ಶಿಕ್ಷಕರಿಗೆ ಮಧ್ಯಂತರ ರಜೆ ನೀಡಿದ್ದಕ್ಕೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.