ಗದಗ: ಜೂನ್ ಒಂದರವರೆಗೂ ಇದ್ದ ಲಾಕ್ ಡೌನ್ 7 ನೇ ತಾರೀಖಿನವರೆಗೂ ಮುಂದುವರಿಸಲಾಗುವುದು. ಕೆಲ ಸಡಿಲಿಕೆಯೊಂದಿಗೆ ಗದಗ ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರಿಕೆಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ಹೇಳಿದರು.

ಅವರು ಜಿಲ್ಲಾಡಳಿತ ಭವನದಲ್ಲಿ ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಜೂ.1 ಹಾಗೂ 2ನೇ ತಾರೀಖ್ ಈ ಎರಡು ದಿನಗಳ ಕಾಲ ದಿನಸಿ ಖರೀದಿಗೆ ಅವಕಾಶ ನೀಡಲಾಗಿದೆ. ಈ ಅವಧಿಯಲ್ಲಿ ಬೆಳಿಗ್ಗೆ 6 ರಿಂದ 10 ಗಂಟೆವರೆಗೆ ಮಾತ್ರ ಅವಕಾಶ ವಿದ್ದು, ಉಳಿದ ದಿನಗಳಲ್ಲಿ ಹೋಂ ಡಿಲೆವರಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದರು.

ಹಾಲು ಮೊಸರು ಖರೀದಿಗೆ ಪ್ರತಿದಿನ ಬೆಳಿಗ್ಗೆ 6 ರಿಂದ 8 ರವರೆಗೆ ಮಾತ್ರ ಅವಕಾಶವಿದೆ. ತರಕಾರಿ ಮಾರಾಟಕ್ಕೆ ತಳ್ಳುಗಾಡಿಯಲ್ಲಿ ಮಾತ್ರ ಅವಕಾಶ ನೀಡಲಾಗಿದೆ. ಬ್ಯಾಂಕ್ ಹಾಗೂ ಅಂಚೆ ಕಚೇರಿಗಳಿಗೆ ಕೋವಿಡ್ ನಿಯಮಾವಳಿ ಪಾಲಿಸಿ ಬೆಳಿಗ್ಗೆ 10 ರಿಂದ 1 ಗಂಟೆಯವರೆಗೆ ಮಾತ್ರ ಸಮಯ ನಿಗದಿಪಡಿಸಲಾಗಿದೆ.

ಮಾಂಸದಂಗಡಿಗೆ ನಾಳೆ ಮತ್ತು ನಾಡಿದ್ದು ಮಾತ್ರ ಬೆಳಿಗ್ಗೆ 6 ರಿಂದ 10 ಗಂಟೆವರೆಗೆ ಮಾತ್ರ ಅವಕಾಶವಿದ್ದು, ಕೃಷಿ ಸಂಬಂಧಿತ ವಸ್ತುಗಳ ಖರೀದಿಗೆ ಬೆಳಿಗ್ಗೆ 6 ರಿಂದ 12 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ಎಲ್ಲಾ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಹೋಟೆಲ್ ಗಳು ಆರಂಭಕ್ಕೆ ಅವಕಾಶವಿಲ್ಲ. ಹಾಗೂ ಜಿಲ್ಲೆಯ ಎಲ್ಲಾ ವೈನ್ ಶಾಪ್ ಮತ್ತು ಬಾರ್, ರೆಸ್ಟೋರೆಂಟ್ ಗಳ ತೆರವಿಗೆ ಅನುಮತಿಯಿಲ್ಲ. ಇನ್ನು ಈಗಾಗಲೇ ಅನುಮತಿ ಪಡೆದ ಮದುವೆಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿ ಲಾಕ್ ಡೌನ್ ಮುಂದುವರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಅವರು ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ. ನನ್ನನ್ನು ಕೇಳಿದರೆ ನನ್ನ ಅಭಿಪ್ರಾಯ ತಿಳಿಸುವೆ. ನಮ್ಮೆಲ್ಲರ ಗಮನ ಈಗ ಕೊರೊನಾ ನಿಯಂತ್ರಣಕ್ಕೆ ತರುವುದು ಮಾತ್ರ ಎಂದು ಹೇಳಿದರು.

ಇದೇ ವೇಳೆ ಗದಗ ಜಿಲ್ಲೆಯಲ್ಲಿ ಬ್ಲಾಕ್ ಫಂಗಸ್ ಪತ್ತೆ ವಿಚಾರಕ್ಕೆ ಪ್ರತಿಕ್ರಿಯಿಸಿ ಜಿಲ್ಲೆಯಲ್ಲಿ ಇದುವರೆಗೂ 11 ಬ್ಲಾಕ್ ಫಂಗಸ್ ಪ್ರಕರಣ ಖಾತ್ರಿಯಾಗಿವೆ. ಎಲ್ಲರಿಗೂ ಜಿಮ್ಸ್ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಬ್ಲಾಕ್ ಫಂಗಸ್ ಚಿಕಿತ್ಸೆಗೆ ಔಷಧಿ ಕೊರತೆಯಿದೆ, ಅದನ್ನು ನೀಗಿಸಲಾಗುತ್ತದೆ ಎಂದರು.

ಸುದ್ದಿಗೋಷ್ಟಿಯಲ್ಲಿ ವಿಪ ಸದಸ್ಯ ಎಸ್.ವಿ.ಸಂಕನೂರ್, ಜಿಲ್ಲಾಧಿಕಾರಿ ಸುಂದರೇಶ್ ಬಾಬು, ಎಸ್ಪಿ ಯತೀಶ್ ಎನ್, ಜಿಪಂ ಸಿಇಓ ಭರತ್ ಎಸ್ ಸೇರಿದಂತೆ ಇತರರು ಇದ್ದರು.

Leave a Reply

Your email address will not be published. Required fields are marked *

You May Also Like

ನಾಪತ್ತೆಯಾಗಿದ್ದ ಸೋಂಕಿತ ವ್ಯಕ್ತಿ ಪತ್ತೆಯಾಗಿದ್ದು ಎಲ್ಲಿ ಗೊತ್ತಾ?

ಕೋಲಾರ : ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6ಕ್ಕೇರಿದೆ. ಸೋಂಕಿತ ಕೋರ್ಟ್ ಉದ್ಯೋಗಿಯ ಟ್ರಾವಲ್ ಹಿಸ್ಟರಿ ಮೂರು…

ಮುಳುಗದ ರವಿ‌ ಬೆಳಗು

ಪತ್ರಕರ್ತ, ಕವಿ, ಕತೆಗಾರ, ಅನುವಾದಕ, ವಿವಾದಾತ್ಮಕ ಬರಹಗಾರ ರವಿ ಬೆಳಗೆರೆ ನಿರೀಕ್ಷಿತವಾಗಿ ದೈಹಿಕವಾಗಿ ಹೋಗಿದ್ದಾರೆ. ಕುಡಿತ, ಸಿಗರೇಟ್, ರಸಿಕತೆ ರವಿಯನ್ನು ಬಲಿ ತೆಗೆದುಕೊಂಡಿದೆ. ಯಾವತ್ತಾದರೂ ಒಂದು ದಿನ ಸಾಯೋದೇ, ಹ್ಯಾಗ ಬದುಕಿದರೆ ಏನು? ಎಂಬ ಉಡಾಫೆಯೂ ಇತ್ತಲ್ಲ! ಆದರೆ ರವಿ very very colourful ಕನಸುಗಾರ. ಬದುಕಿನ ರಹಸ್ಯಗಳನ್ನು ಬಿಚ್ಚಿಟ್ಟ ಎದೆಗಾರ. ತುಂಬಾ ಕಾಡಿ ಕನಲಿದ ಹುಟ್ಟಿನ ರಹಸ್ಯ ಬಿಚ್ಚಿಟ್ಟು ನಿರಾಳವಾದ ಹೊತ್ತಲ್ಲಿ ಜೀವ ಬಿಟ್ಟ ಜಾದೂಗಾರ.

ಸಿಎಂ ಯಡಿಯೂರಪ್ಪ ಪ್ರಧಾನಿ ಮೋದಿ ಅವರಿಗೆ ನೀಡಿದ ಸಲಹೆ ಏನು?

ಗ್ರೀನ್ ಝೋನ್‌ಗಳಲ್ಲಿಯೂ ಕೊರೊನಾ ಪ್ರಕರಣಗಳು ಕಂಡು ಬರುತ್ತಿದ್ದು, ಮೂರನೇ ಹಂತದ ಲಾಕ್‌ಡೌನ್‌ನಲ್ಲಿ ವಿಧಿಸಲಾಗಿರುವ ನಿಯಮಗಳೇ ಮೇ 17ರ ನಂತರವೂ ಮುಂದುವರಿಯಲಿ ಎಂದು ಸಿಎಂ ಯಡಿಯೂರಪ್ಪ ಅವರು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

ಸದಾಶಿವ ಯೋಗ ವರದಿ ವಿಚಾರ ಕಟೀಲ್ ಹೇಳಿಕೆ ಹಿಂಪಡೆಯಲು ಒತ್ತಾಯ

ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸರಕಾರ ಬದ್ದವಾಗಿದೆ ಎಂದು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲ್ ಹೇಳಿರುವ ಹೇಳಿಕೆಯನ್ನು ಹಿಂದೆ ಪಡಿಯಬೇಕು ಇಲ್ಲವಾದರೆ ಉಗ್ರವಾದ ಹೋರಾಟ ಮಾಡಲಾಗುವುದು ಎಂದು ಬಂಜಾರ ಸಮಾಜದ ಯುವ ಮುಖಂಡ ರಮೇಶ ಲಮಾಣಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ.