ಗದಗ: ಕೊರೊನಾದ ಸಂಕಷ್ಟದ ದಿನಗಳು ಕೇವಲ ಬಡ ಜನರಿಗಷ್ಟೆ ಅಲ್ಲದೇ ಪ್ರತಿಯೊಬ್ಬರಿಗೂ ಒಂದಲ್ಲ ಒಂದು ಕಾರಣದಿಂದ ತೀವ್ರ ಸಂಕಷ್ಟಕ್ಕೀಡು ಮಾಡಿದೆ. ಅದರಲ್ಲೂ ತುತ್ತಿನ ಚೀಲ ತುಂಬಿಕೊಳ್ಳಲು ದಿನದ ದುಡಿಮೆಯನ್ನೇ ನಂಬಿಕೊಂಡಿರುವವರ ಪಾಡಂತೂ ಹೇಳತೀರದು. ಇದೆಲ್ಲದಕ್ಕಿಂತ ಮುಖ್ಯವಾಗಿ ಅದೆಷ್ಟೋ ವೃದ್ಧರು, ವಿಕಲಚೇತನರು, ವಿದವೆಯರು ಮಾಶಾಸನವನ್ನೇ ನಂಬಿ ಬದುಕು ಸಾಗಿಸುತ್ತಿದ್ದಾರೆ. ಅಂತಹವರ ಪಾಡಂತೂ ಹೇಳತೀರದು. ಗದಗ ನಗರದಲ್ಲಿ ವೃದ್ಧೆಯೊಬ್ಬರು ಮಾಶಾಸನ ಪಡೆಯಲು ಎರಡು ಕಿಲೋಮೀಟರ್ ವರೆಗೆ ನಡೆದುಕೊಂಡು ಬಂದ ಘಟನೆ ನಡೆಯಿತು.
ಇಲ್ಲಿನ ಭಜಂತ್ರಿ ನಗರದ ಅಜ್ಜಿ ಯಲ್ಲವ್ವ ಭಜಂತ್ರಿ, ಮಾಶಾಸನ ಪಡೆಯಲು ನಡೆದು ಬಂದ ಅಜ್ಜಿಯ ಮಾತು ಕೇಳಿದರೆ ಕರಳು ಚುರ್ ಎನ್ನುತ್ತೆ. ಅಯ್ಯೋ ವಿಧಿಯೇ ಈ ಕೊರೊನಾದಿಂದ ಈ ಕಣ್ಣುಗಳಿಂದ ಇನ್ನು ಏನೇನು ನೋಡಬೇಕು ಎಂದೆನಿಸದೇ ಇರಲಾರದು. ಈಗಾಗಲೇ ಲಾಕ್ ಡೌನ್ ನಿಂದ ಅಜ್ಜಿ ಆರ್ಥಿಕವಾಗಿ ತೀರಾ ಸಂಕಷ್ಟಕ್ಕೀಡಾಗಿದ್ದಾರೆ. ಈಗಾಗಲೇ ಜಿಲ್ಲೆಯಲ್ಲಿ ವಾಹನ ವ್ಯವಸ್ಥೆ ಇಲ್ಲದ ಕಾರಣ ಅಜ್ಜಿಯೊಬ್ಬರು ಪೋಸ್ಟ್ ಆಫೀಸಿಗೆ ಎರಡು ಕಿ.ಮೀ ನಡೆದುಕೊಂಡೇ ಬಂದಿದ್ದು ಮಾತ್ರ ಇಂಥ ಅದೆಷ್ಟೋ ಜನರ ಸಂಕಷ್ಟ ಒಂದು ಕ್ಷಣ ಕಣ್ಣ ಮುಂದೆ ಕಟ್ಟಿತು.
ನಗರದ ಹಳೇ ಡಿಸಿ ಆಫೀಸ್ ಸರ್ಕಲ್ ಬಳಿ ಪೊಲೀಸರು ಅಜ್ಜಿಯನ್ನು ವಿಚಾರಿಸಿದಾಗ ಈ ವಿಚಾರ ಬೆಳಕಿಗೆ ಬಂದಿತು. ಅಜ್ಜಿ ಹೊರ ಬಂದ ಕಾರಣ ಕೇಳಿದ ಪೊಲೀಸರು, ಪೋಸ್ಟ್ ಆಫೀಸ್ ಬಂದ್ ಇರುವ ಬಗ್ಗೆ ತಿಳಿಸಿದರು. ಪಾಪ ಅಜ್ಜಿ ಬಂದ ದಾರಿಗೆ ಸುಂಕುವಿಲ್ಲ ಎನ್ನವಂತೆ ಮನೆಗೆ ಮರಳಿದರು.
ಪಾಪ ಒಂದೆಡೆ ಅಜ್ಜಿಗೆ ಕಿವಿ ಕೇಳುವುದಿಲ್ಲ, ಮತ್ತೊಂದೆಡೆ ದಿನದೂಡಲು ಕೈ ಬರಿದಾಗಿವೆ. ಮಗದೊಂದೆಡೆ ಲಾಕ್ ಡೌನ್ ಇಂಥ ಅದೆಷ್ಟೋ ಅಜ್ಜ, ಅಜ್ಜಿಯರು, ತಾಯಂದಿರು, ವಿಧವೆಯರು, ವಿಕಲಚೇತನರು ಈ ಸಂಕಷ್ಟ ಎದುರಿಸುತ್ತಿದ್ದಾರೆ. ಇಂಥವರಿಗೆ ಕೊರೊನಾ ಶಾಪವಾಗಿದೆ.

Leave a Reply

Your email address will not be published. Required fields are marked *

You May Also Like

11 ಎಕರೆ ಹೊಲದಾನ್ ಗೋವಿನ ಜೋಳ ಬೆಂಕಿಗೆ ಆಹುತಿ!

ಆಕಸ್ಮಿಕ ಬೆಂಕಿಗೆ ಮೆಕ್ಕೆಜೋಳ ಸುಟ್ಟು ಭಸ್ಮಗೊಂಡ ಘಟನೆ ಗದಗ ಜಿಲ್ಲೆಯ ನಾಗಾವಿ ತಾಂಡಾದಲ್ಲಿ ನಡೆದಿದೆ. ಇದರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಮೆಕ್ಕೆಜೋಳ ನಾಶವಾಗಿದೆ. ಲಕ್ಷ್ಮಣ್ ಪವಾರ್ ಎಂಬುವರಿಗೆ ಸೇರಿದ 11 ಎಕರೆ ಜಮೀನಿನಲ್ಲಿ ಬೆಳೆದಿದ್ದ ಅಂದಾಜು 2.5 ಲಕ್ಷ ರೂ. ಮೌಲ್ಯದ ಬೆಳೆ ನಾಶವಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಶಾಮಕ ದಳದ ಸಿಬ್ಬಂದಿ, ಬೆಂಕಿ ನಂದಿಸಿದಿಸಲು ಪ್ರಯತ್ನಿಸಿದರು.

ಇಂದು ರಾಜ್ಯದಲ್ಲಿ 75 ಕೊರೋನಾ ಪಾಸಿಟಿವ್!: ಯಾವ ಜಿಲ್ಲೆಯಲ್ಲಿ ಎಷ್ಟು..?

ಇಂದು ರಾಜ್ಯದಲ್ಲಿ 75 ಕೊರೋನಾ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕು ತಗುಲಿದವರ ಸಂಖ್ಯೆ 2493 ಆಗಿದೆ.

ಹೀಗೆ ಮುಂದುವರೆದರೆ ಸೋಂಕಿತರ ಸಂಖ್ಯೆ ಆಗಷ್ಟ್ ನಲ್ಲಿ ಎಷ್ಟಾಗಲಿದೆ ಗೊತ್ತಾ?

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದು ಹೀಗೆ ಮುಂದುವರೆದರೆ ಆಗಸ್ಟ್ 15ರ ವೇಳೆಗೆ ಸೋಂಕಿತರ ಸಂಖ್ಯೆ 25 ಸಾವಿರಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಕೋವಿಡ್-19 ವಾರ್ ರೂಂ ಮುಖ್ಯಸ್ಥ ಮುನೀಶ್ ಮೌದ್ಗಿಲ್ ಅಂದಾಜಿಸಿದ್ದಾರೆ.

ಶಿಘ್ರವೇ ನೇಕಾರರಿಗೆ ಸಹಾಯಧನ ನೀಡಿ

ನೇಕಾರರಿಗೆ ಸಹಾಯಧನ ನೀಡಬೇಕು ಎಂದು ಆಗ್ರಹಿಸಿ ಗುರುವಾರ ವಿಶ್ವ ಬಂಧು ವಿದ್ಯುತ್ ಮಗ್ಗಗಳ ನೇಕಾರರ ಸಂಘದ ಕಾರ್ಯಕರ್ತು ಪ್ರತಿಭಟನೆ ನಡೆಸಿದರು. ಉಪ ನಿರ್ದೇಶಕರ ಕಚೇರಿ ಎದುರು ಸರ್ಕಾರದ ವಿರುದ್ಧ ಪ್ರತಿಭಟಿಸಿ ಉಪ ನಿರ್ದೇಶಕರಿಗೆ ಮನವಿ ಸಲ್ಲಿಸಿದರು.