ಹುಬ್ಬಳ್ಳಿ: ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಯತ್ನ ನಡೆದಿಲ್ಲ. ಈ ವರೆಗೆ ರಾಜ್ಯ, ನಾಯಕರ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಮುಂದಿನ ಎರಡು ವರ್ಷ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿರುವ ಖಚಿತ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ಅವರು ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಕೋರೋನಾ ಎರಡನೇ ಅಲೆಯಿಂದ ಜನರು ಸಂಕಷ್ಟದಲ್ಲಿದ್ದಾರೆ. ಈ ವೇಳೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ ರಾಜಕೀಯ ಮಾಡುವುದು ಸರಿಯಲ್ಲ. ನಮ್ಮ ಸರ್ಕಾರ ಕೋರೋನಾ ನಿಯಂತ್ರಣಕ್ಕೆ ನಿರಂತರವಾಗಿ ಕೆಲಸ ಮಾಡುತ್ತಿದ್ದು, ಇದಕ್ಕೆ ಸಲಹೆ ಸೂಚನೆಗಳನ್ನು ನೀಡಬೇಕು, ಅದನ್ನು ಬಿಟ್ಟು ದಿನಪೂರ್ತಿ ಟೀಕೆ ಮಾಡುವುದು ಸರಿಯಲ್ಲ. ಹೀಗಾಗಿಯೇ ಕಾಂಗ್ರೆಸ್ ಅವನತಿಗೆ ಕಾರಣ ಎಂದು ವ್ಯಂಗ್ಯವಾಡಿದರು.
ಇನ್ನು ಕಾಂಗ್ರೆಸ್ 100 ಕೋಟಿ ಸರ್ಕಾರಕ್ಕೆ ನೀಡುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ನವರ ತಮ್ಮ ಸ್ವಂತ ಹಣವನ್ನು ಕೊಟ್ಟಿಲ್ಲ. ಸುಮ್ಮನೆ ಪ್ರಚಾರಕ್ಕೆ ಇಲ್ಲಸಲ್ಲದನ್ನು ಮಾಡುವುದು ಸರಿಯಲ್ಲ. ಈ ಸಂದಿಗ್ಧ ಸಮಯದಲ್ಲಿ ಒಂದು ಒಳ್ಳೆಯ ಪ್ರತಿಪ್ರಕ್ಷವಾಗಿ ಕೆಲಸ ಮಾಡುವುದು ಉತ್ತಮ ಎಂದರು.

Leave a Reply

Your email address will not be published. Required fields are marked *

You May Also Like

ಕೊರೊನಾ ಭಯ : ಇಂದು ವಿಕಾಸಸೌಧಕ್ಕೆ ರಜೆ!

ಬೆಂಗಳೂರು: ವಿಕಾಸಸೌಧದಲ್ಲಿ ಕೊರೊನಾ ಆತಂಕ ಮನೆ ಮಾಡಿರುವುದರಿಂದಾಗಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳಿಗೆ ಶುಕ್ರವಾರ ಕಚೇರಿ…

ಕೊಪ್ಪಳ ಮೂಲದ ಮಸ್ಕಿ ಕೆನರಾ ಬ್ಯಾಂಕ್ ಉದ್ಯೋಗಿಗೂ ಕೊರೊನಾ..!

ಮಸ್ಕಿ: ಪಟ್ಟಣದ ಬ್ಯಾಂಕಿನ ಉದ್ಯೋಗಿಗೆ ಕೊರೊನಾ ಪಾಸಿಟಿವ್ ದೃಡ ಪಟ್ಟಿರುವ ಹಿನ್ನಲ್ಲೆಯಲ್ಲಿ ಬ್ಯಾಂಕ್ ವನ್ನು ಸಿಲ್…

ಗಜೇಂದ್ರಗಡದಲ್ಲಿ ಉಪ ಖಜಾನೆ ಕಚೇರಿ ಆರಂಭ

ಸರ್ಕಾರದ ಹಣಕಾಸಿನ ವ್ಯವಹಾರವನ್ನು ಸರಳಗೊಳಿಸುವ ನಿಟ್ಟಿನಲ್ಲಿ ಗಜೇಂದ್ರಗಡ ತಾಲೂಕಿನಲ್ಲಿ ಉಪ ಖಜಾನೆ ಕಚೇರಿ ಆರಂಭಿಸುವ ಮೂಲಕ ತಾಲೂಕಾ ಕೇಂದ್ರಕ್ಕೆ ಮತ್ತೊಂದು ಇಲಾಖೆ ಸೇರ್ಪಡೆಯಾಗಿದೆ. ಈ ನಿಟ್ಟಿನಲ್ಲಿ ತಾಲೂಕಾ ಕೇಂದ್ರದ ಎಲ್ಲ ಇಲಾಖೆಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮ ಅಧ್ಯಕ್ಷ, ಶಾಸಕ ಕಳಕಪ್ಪ ಬಂಡಿ ಹೇಳಿದರು.

ಹೋಮಿಯೋಪತಿಯಲ್ಲೂ ಕೊರೊನಾ ಔಷಧಿ ತಯಾರಿಸಿ: ಸಚಿವ ಡಾ.ಕೆ.ಸುಧಾಕರ್

ನಮ್ಮಲ್ಲಿ ಸಂಶೋಧನೆಗಳು ಕಡಿಮೆಯಾಗಿವೆ. ಎಲ್ಲವನ್ನೂ ಬೇರೆ ದೇಶಗಳಿಂದ ತರಿಸಿಕೊಳ್ಳುವಂತಾಗಿದೆ. ಕೊರೊನಾ ನಿಯಂತ್ರಣಕ್ಕೆ ತರಲು ಆರ್ಸೆನಿಕ್ ಆಲ್ಬಂ ಎಂಬ ಹೋಮಿಯೋಪತಿ ಔಷಧಿ ಬಳಕೆಯಲ್ಲಿದೆ. ಆದರೆ ಕೊರೊನಾ ನಿವಾರಣೆಗೆ ಬೇರೆ ಸಂಸ್ಥೆಗಳು ಔಷಧಿ ತಯಾರಿಸುತ್ತಿರುವಂತೆ ಹೋಮಿಯೋಪತಿಯಲ್ಲೂ ಔಷಧಿ ಕಂಡು ಹಿಡಿಯಬೇಕು ಎಂದು ಸಚಿವ ಸುಧಾಕರ್‌ ತಿಳಿಸಿದ್ದಾರೆ.