ಹುಬ್ಬಳ್ಳಿ: ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಯತ್ನ ನಡೆದಿಲ್ಲ. ಈ ವರೆಗೆ ರಾಜ್ಯ, ನಾಯಕರ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಮುಂದಿನ ಎರಡು ವರ್ಷ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿರುವ ಖಚಿತ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ಅವರು ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಕೋರೋನಾ ಎರಡನೇ ಅಲೆಯಿಂದ ಜನರು ಸಂಕಷ್ಟದಲ್ಲಿದ್ದಾರೆ. ಈ ವೇಳೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ ರಾಜಕೀಯ ಮಾಡುವುದು ಸರಿಯಲ್ಲ. ನಮ್ಮ ಸರ್ಕಾರ ಕೋರೋನಾ ನಿಯಂತ್ರಣಕ್ಕೆ ನಿರಂತರವಾಗಿ ಕೆಲಸ ಮಾಡುತ್ತಿದ್ದು, ಇದಕ್ಕೆ ಸಲಹೆ ಸೂಚನೆಗಳನ್ನು ನೀಡಬೇಕು, ಅದನ್ನು ಬಿಟ್ಟು ದಿನಪೂರ್ತಿ ಟೀಕೆ ಮಾಡುವುದು ಸರಿಯಲ್ಲ. ಹೀಗಾಗಿಯೇ ಕಾಂಗ್ರೆಸ್ ಅವನತಿಗೆ ಕಾರಣ ಎಂದು ವ್ಯಂಗ್ಯವಾಡಿದರು.
ಇನ್ನು ಕಾಂಗ್ರೆಸ್ 100 ಕೋಟಿ ಸರ್ಕಾರಕ್ಕೆ ನೀಡುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ನವರ ತಮ್ಮ ಸ್ವಂತ ಹಣವನ್ನು ಕೊಟ್ಟಿಲ್ಲ. ಸುಮ್ಮನೆ ಪ್ರಚಾರಕ್ಕೆ ಇಲ್ಲಸಲ್ಲದನ್ನು ಮಾಡುವುದು ಸರಿಯಲ್ಲ. ಈ ಸಂದಿಗ್ಧ ಸಮಯದಲ್ಲಿ ಒಂದು ಒಳ್ಳೆಯ ಪ್ರತಿಪ್ರಕ್ಷವಾಗಿ ಕೆಲಸ ಮಾಡುವುದು ಉತ್ತಮ ಎಂದರು.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿಂದು 116 ಕೊರೊನಾ ಪಾಸಿಟಿವ್!

ಜಿಲ್ಲೆಯಲ್ಲಿಂದು 116 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3894 ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಗುಣಮುಖರಾಗಿ ಇಂದು 121 ಜನರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈ ಮೂಲಕ ಒಟ್ಟು ಬಿಡುಗಡೆ ಹೊಂದಿದವರ ಸಂಖ್ಯೆ 2756.

ಕ್ರಿಕೆಟ್ ಬೆಟ್ಟಿಂಗ್ ನಲ್ಲಿಯೇ ಭಾಗಿಯಾದ ಪೊಲೀಸ್!

ಚಿಂತಾಮಣಿ : ಅಪರಾಧ ಪ್ರಕರಣಗಳು ನಡೆಯದಂತೆ ನೋಡಿಕೊಳ್ಳಬೇಕಾದ ಪೊಲೀಸಪ್ಪನೇ ಇಲ್ಲಿ ಐಪಿಎಲ್ ಬೆಟ್ಟಿಂಗ್ ಆಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ – ತಾಲೂಕಾಡಳಿತದಿಂದ ಅಹವಾಲು ಸ್ವೀಕಾರ
ಗೋಳು ತೋಡಿಕೊಂಡ ಗೊಳಸಂಗಿ ಜನ.!

ಉತ್ತರಪ್ರಭ ಸುದ್ದಿಗೊಳಸಂಗಿ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ನಿಮಿತ್ತ ಗೊಳಸಂಗಿ ಗ್ರಾಮದ ವಿಠ್ಠಲ-ರುಕ್ಮಿಣಿ ಮಂದಿರದಲ್ಲಿ…

ಕೊರ್ಲಹಳ್ಳಿ ಬಳಿ ಧರೆಗುರುಳಿದ ಮರ, ಮನೆಗಳು

ಗದಗ: ಜಿಲ್ಲೆಯ ಮುಂಡರಗಿ ತಾಲೂಕಿನ ಹಲವೆಡೆ ಭಾರಿ ಪ್ರಮಾಣದ ಮಳೆ ಮಿಶ್ರಿತ ಗಾಳಿ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.