ಹುಬ್ಬಳ್ಳಿ: ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಯತ್ನ ನಡೆದಿಲ್ಲ. ಈ ವರೆಗೆ ರಾಜ್ಯ, ನಾಯಕರ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಮುಂದಿನ ಎರಡು ವರ್ಷ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿರುವ ಖಚಿತ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ಅವರು ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಕೋರೋನಾ ಎರಡನೇ ಅಲೆಯಿಂದ ಜನರು ಸಂಕಷ್ಟದಲ್ಲಿದ್ದಾರೆ. ಈ ವೇಳೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ ರಾಜಕೀಯ ಮಾಡುವುದು ಸರಿಯಲ್ಲ. ನಮ್ಮ ಸರ್ಕಾರ ಕೋರೋನಾ ನಿಯಂತ್ರಣಕ್ಕೆ ನಿರಂತರವಾಗಿ ಕೆಲಸ ಮಾಡುತ್ತಿದ್ದು, ಇದಕ್ಕೆ ಸಲಹೆ ಸೂಚನೆಗಳನ್ನು ನೀಡಬೇಕು, ಅದನ್ನು ಬಿಟ್ಟು ದಿನಪೂರ್ತಿ ಟೀಕೆ ಮಾಡುವುದು ಸರಿಯಲ್ಲ. ಹೀಗಾಗಿಯೇ ಕಾಂಗ್ರೆಸ್ ಅವನತಿಗೆ ಕಾರಣ ಎಂದು ವ್ಯಂಗ್ಯವಾಡಿದರು.
ಇನ್ನು ಕಾಂಗ್ರೆಸ್ 100 ಕೋಟಿ ಸರ್ಕಾರಕ್ಕೆ ನೀಡುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ನವರ ತಮ್ಮ ಸ್ವಂತ ಹಣವನ್ನು ಕೊಟ್ಟಿಲ್ಲ. ಸುಮ್ಮನೆ ಪ್ರಚಾರಕ್ಕೆ ಇಲ್ಲಸಲ್ಲದನ್ನು ಮಾಡುವುದು ಸರಿಯಲ್ಲ. ಈ ಸಂದಿಗ್ಧ ಸಮಯದಲ್ಲಿ ಒಂದು ಒಳ್ಳೆಯ ಪ್ರತಿಪ್ರಕ್ಷವಾಗಿ ಕೆಲಸ ಮಾಡುವುದು ಉತ್ತಮ ಎಂದರು.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯ ಜನರಿಗೆ ಕೊಂಚ ನೆಮ್ಮದಿ

ಜಿಲ್ಲೆಯ 3 ಜನ ಕೊವಿಡ್-19 ಸೋಂಕಿತರು 42 ವರ್ಷದ ಪುರುಷ ಪಿ-370, 24 ವರ್ಷದ ಪುರುಷ ಪಿ-396 ಹಾಗೂ 75 ವರ್ಷದ ಪಿ-514 ಸಂಪೂರ್ಣ ಗುಣಮುಖರಾಗಿ ನಿಗದಿತ ಆಯುಷ್ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ ಎಂದು ಜಿಮ್ಸ್ ನಿರ್ದೇಶಕ ಡಾ.ಪಿ.ಎಸ್.ಭೂಸರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನದಿ ಹಿನ್ನಿರಿನಿಂದ ನುಸುಳುತ್ತಿದ್ದಾರೆ ಜನ

ಗಡಿಯಿಂದ ರಾಜ್ಯಕ್ಕೆ ಪ್ರವೇಶ ನಿರ್ಬಂಧಿಸಿರುವ ಹಿನ್ನೆಲೆ ಕಬಿನಿ ಹಿನ್ನೀರಿನ ಮೂಲಕ ಕೇರಳದಿಂದ ಜನರು ಕರ್ನಾಟಕಕ್ಕೆ ಬರುತ್ತಿದ್ದಾರೆ. ಕೇರಳಾಗೆ ಕೂಲಿಗಾಗಿ ತೆರಳಿದ್ದ ಕಾರ್ಮಿಕರು ಕಾಲ್ನಡಿಗೆಯಲ್ಲಿ ಕೇರಳದಿಂದ ಕರ್ನಾಟಕ ಬರುತ್ತಿದ್ದಾರೆ.

ದಿ. ಮಲ್ಲನಗೌಡ ಫ ಪಾಟೀಲ ಅವರ ದ್ವೀತಿಯ ಪುಣ್ಯಸ್ಮರಣೆಯಲ್ಲಿ ಪೂಜ್ಯ ಕಲ್ಲಯ್ಯಜ್ಜನವರ ತುಲಾಭಾರ

ಪುಣ್ಯಾಶ್ರಮದ ಗುರುಬಂಧುಗಳಾದ ಸಾಸರವಾಡ ಗ್ರಾಮದ ಮಲ್ಲನಗೌಡ ಪಾಟೀಲರು ಉತ್ತಮ ಸಂಗೀತ ಕಲಾವಿದರಾಗಿದ್ದರು. ಜೊತೆಗೆ ಸಾತ್ವಿಕ ಗುಣವುಳ್ಳವರಾಗಿದ್ದರು. ಅವರು ಸರಳತೆ ಹಾಗೂ ಆದರ್ಶಪ್ರಾಯ ವ್ಯಕ್ತಿತ್ವ ಉಳ್ಳವರಾಗಿದ್ದರು. ಅವರ ಪುಣ್ಯಸ್ಮರಣೆಯ ನಿಮಿತ್ಯವಾಗಿ ವಿವಿಧ ಕ್ಷೇತ್ರದ ಸಾಧಕರನ್ನು ಗುರುತಿಸಿ ಪ್ರಶಸ್ತಿ ಪ್ರದಾನ ಮಾಡುತ್ತಿರುವುದು ಶ್ಲಾಘನೀಯ ಎಂದು ವೀರೇಶ್ವರ ಪುಣ್ಯಾಶ್ರಮದ ಪೀಠಾಧೀಪತಿ ಪೂಜ್ಯ ಕಲ್ಲಯ್ಯಜ್ಜನವರು ಹೇಳಿದರು.

ಸಂವಾದ ನಡೆಸಿದ ಶಾಸಕ ನಡಹಳ್ಳಿ..! ಅನುದಿನವೂ ಇಷ್ಟಪಟ್ಟು ಓದಿ ಭವಿಷ್ಯ ಕಟ್ಟಿಕೊಳ್ಳಿ ಗುಲಾಬಚಂದ ಜಾಧವ;

ಉತ್ತರಪ್ರಭ ಆಲಮಟ್ಟಿ: ದಿನದ 24 ಗಂಟೆಯಲ್ಲಿ ಎಷ್ಟು ಕಾಲ ಓದ್ತಿರಾ, ಟಿವಿ ನೋಡ್ತಿರಾ, ಹರಟೆ ಹೋಡ್ತಿರಾ,…