ಹುಬ್ಬಳ್ಳಿ: ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಯತ್ನ ನಡೆದಿಲ್ಲ. ಈ ವರೆಗೆ ರಾಜ್ಯ, ನಾಯಕರ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಮುಂದಿನ ಎರಡು ವರ್ಷ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿರುವ ಖಚಿತ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ಅವರು ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಕೋರೋನಾ ಎರಡನೇ ಅಲೆಯಿಂದ ಜನರು ಸಂಕಷ್ಟದಲ್ಲಿದ್ದಾರೆ. ಈ ವೇಳೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ ರಾಜಕೀಯ ಮಾಡುವುದು ಸರಿಯಲ್ಲ. ನಮ್ಮ ಸರ್ಕಾರ ಕೋರೋನಾ ನಿಯಂತ್ರಣಕ್ಕೆ ನಿರಂತರವಾಗಿ ಕೆಲಸ ಮಾಡುತ್ತಿದ್ದು, ಇದಕ್ಕೆ ಸಲಹೆ ಸೂಚನೆಗಳನ್ನು ನೀಡಬೇಕು, ಅದನ್ನು ಬಿಟ್ಟು ದಿನಪೂರ್ತಿ ಟೀಕೆ ಮಾಡುವುದು ಸರಿಯಲ್ಲ. ಹೀಗಾಗಿಯೇ ಕಾಂಗ್ರೆಸ್ ಅವನತಿಗೆ ಕಾರಣ ಎಂದು ವ್ಯಂಗ್ಯವಾಡಿದರು.
ಇನ್ನು ಕಾಂಗ್ರೆಸ್ 100 ಕೋಟಿ ಸರ್ಕಾರಕ್ಕೆ ನೀಡುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ನವರ ತಮ್ಮ ಸ್ವಂತ ಹಣವನ್ನು ಕೊಟ್ಟಿಲ್ಲ. ಸುಮ್ಮನೆ ಪ್ರಚಾರಕ್ಕೆ ಇಲ್ಲಸಲ್ಲದನ್ನು ಮಾಡುವುದು ಸರಿಯಲ್ಲ. ಈ ಸಂದಿಗ್ಧ ಸಮಯದಲ್ಲಿ ಒಂದು ಒಳ್ಳೆಯ ಪ್ರತಿಪ್ರಕ್ಷವಾಗಿ ಕೆಲಸ ಮಾಡುವುದು ಉತ್ತಮ ಎಂದರು.

Leave a Reply

Your email address will not be published. Required fields are marked *

You May Also Like

ಟೈರ್ ಗೆ ಬೆಂಕಿ ಹಚ್ಚಲು ಪೊಲೀಸರ ವಿರೋಧ: ಕರವೇ ಕಾರ್ಯಕರ್ತರ ಆಕ್ರೊಶ

ಕರ್ನಾಟಕ ಬಂದ್ ಹಿನ್ನಲೆ, ಮುಳಗುಂದ ನಾಕಾ ಬಳಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಟೈರ್ ಗೆ ಬೆಂಕಿ ಹಚ್ಚಲು ಪ್ರತಿಭಟನಾಕಾರರು ಮುಂದಾದರು.

ಪೊಲೀಸ್ ಸಬ್ ಇನ್ಸ್ಪೆಕ್ಟರ್ 545 ಹುದ್ದೆಗಳಿಗೆ ಅರ್ಜಿ ಅಹ್ವಾನ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಅಡಿಯಲ್ಲಿ ಖಾಲಿ ಇರುವ 545 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸಿವಿಲ್ ಹುದ್ದೆಗೆ ಕರ್ನಾಟಕ ರಾಜ್ಯ ಪೊಲೀಸ್ (ಕೆಪಿಎಸ್) ಅರ್ಜಿ ಆಹ್ವಾನಿಸಿದೆ.