ಬೆಂಗಳೂರು: ಕೋವಿಡ್ ತಡೆಯುವ ಉದ್ದೇಶದಿಂದ ಸಾರಿಗೆ ಸೇವೆ, ಆಂಬ್ಯುಲೆನ್ಸ್ ಸೇವೆ ಮತ್ತು ಚಾಲಕರಿಗೆ ಸರಕಾರ ಘೋಷಿಸಿರುವ ಪರಿಹಾರ ಇತ್ಯಾದಿಗಳ ಕುರಿತಂತೆ ಯಾವುದೇ ಸಮಸ್ಯೆಗಳಿಗೆ ಸ್ಪಂದಿಸಲು ಸಾರಿಗೆ ಇಲಾಖೆ ಪ್ರತ್ಯೇಕ ಸಹಾಯವಾಣಿಯನ್ನು ಆರಂಭಿಸಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.
94498 63214 ಈ ಸಂಖ್ಯೆಯ ಸಹಾಯವಾಣಿಗೆ ಕರೆ ಮಾಡಿದರೆ ಶೀಘ್ರವಾಗಿ ಸ್ಪಂಧಿಸಲಾಗುವುದು ಮತ್ತು ಸಾರಿಗೆ ವಿಳಾಸ: ಸಾರಿಗೆ ಆಯುಕ್ತರ ಕಚೇರಿ, 1ನೇ ಮಹಡಿ, ಬಿಎಂಟಿಸಿ ಸಂಕೀರ್ಣ, ಶಾಂತಿನಗರ, ಬೆಂಗಳೂರು-27. ಸಾರ್ವಜನಿಕರು ಸಾರಿಗೆ ಸೇವೆಗೆ ಸಂಬAಧಿಸಿದAತೆ ಯಾವುದೇ ಸಮಸ್ಯೆ ಅಥವಾ ಕುಂದುಕೊರತೆಗಳಿದ್ದಲಿ ಈ ಸಹಾಯವಾಣಿಯನ್ನು ಸಂಪರ್ಕಿಸಿ ಉಪಯೋಗ ಪಡೆದುಕೊಂಡು ಸಮಸ್ಯೆಗಳನ್ನು ತಿಳಿಸಬೇಕು ಎಂದು ಸಾರ್ವಜನಿಕರಿಗೆ ಮನವಿ ಮಾಡಿದರು.
ಸಮಸ್ಯೆಗಳ ಕುರಿತು ಪ್ರತ್ಯೇಕ ಸಾರಿಗೆ ಇಲಾಖೆಯ ಸಹಾಯವಾಣಿ : ಲಕ್ಷ್ಮಣ ಸವದಿ
