ಬೆಂಗಳೂರು: ಸಹಕಾರ ಬ್ಯಾಂಕ್ ಗಳ ಮೂಲಕ ಈ ವರ್ಷ20,810 ಕೋಟಿ ರೂ. ಬೆಳೆ ಸಾಲ ನೀಡುವ ಗುರಿ ನೀಡಲಾಗಿದೆ ಎಂದು ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಗುರಿ ತಲುಪಲು ರಾಜ್ಯದ 212 ಡಿಸಿಸಿ ಬ್ಯಾಂಕ್ ಗಳಿಗೆ ತಿಳಿಸಲಾಗಿದೆ. 303 ಲಕ್ಷ ರೈತರನ್ನು ತಲುಪಲು ಹೇಳಿದ್ದೇವೆ ಎಂದರು.
2020-21 ನೇ ಸಾಲಿನಲ್ಲಿ 15400ಕೋಟಿ ರೂ. ಗುರಿ ನೀಡಲಾಗಿತ್ತು.17901 ಕೋಟಿ ರೂ. ತಲುಪಲಾಗಿದೆ. ಇದರಲ್ಲಿ ಅಲ್ಪವಾಧಿ, ಮಧ್ಯಮಾವಧಿ, ದೀರ್ಘಾವಧಿ ಸಾಲಗಳು ಸೇರಿವೆ ಎಂದು ಹೇಳಿದರು.ನಾವು ಕೊಟ್ಟಿದ್ದ ಟಾರ್ಗೆಟ್ ಹೆಚ್ಚಿನ ಮಟ್ಟದಲ್ಲೇ ರೀಚ್ ಆಗಿದ್ದಾರೆ. ಲಾಕ್‌ಡೌನ್ ಮುಗಿದ ಬಳಿಕ ಎಲ್ಲಾ ಡಿಸಿಸಿ ಬ್ಯಾಂಕ್‌ಗಳಿಗೆ ಭೇಟಿ ಕೊಡುವುದಾಗಿ ಅವರು ಹೇಳಿದರು.
ಕಳೆದ ವರ್ಷ ಐದಾರು ಡಿಸಿಸಿ ಬ್ಯಾಂಕ್‌ಗಳು ಸ್ವಲ್ಪ ಗುರಿ ತಲುಪಿಲ್ಲ. ಅವರಿಗೆ ಈ ವರ್ಷ ಗುರಿ ತಲುಪಲೇಬೇಕು ಎಂದು ನಿರ್ದೇಶನ ನೀಡಲಾಗಿದೆ ಎಂದು ಅವರು ಹೇಳಿದರು. ಮೈಸೂರು ಜಿಲ್ಲೆಯಲ್ಲಿ ಸಾವಿನ ವಿಚಾರ ಮುಚ್ಚಿಟ್ಟಿದ್ದಾರೆ ಎಂಬ ಶಾಸಕ ಸಾ.ರಾ. ಮಹೇಶ್ ಆರೋಪ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಆ ಬಗ್ಗೆ ನಂಗೆ ಗೊತ್ತಿಲ್ಲ. ಮಾಹಿತಿ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದರು. ನಮ್ಮ ಟಾರ್ಗೆಟ್ ಕೋರೊನಾ ಮುಕ್ತ ಮಾಡೋದು. ಆ ಬಗ್ಗೆ ಎಲ್ಲರನ್ನೂ ಕೂರಿಸಿಕೊಂಡು ತಿಳಿಸಿದ್ದೇನೆ.

Leave a Reply

Your email address will not be published. Required fields are marked *

You May Also Like

ಕಸಾಪ ವತಿಯಿಂದ ಕವಿ-ಬರಹಗಾರರ ಪ್ರೋತ್ಸಾಹ ವೇದಿಕೆ

ತಾಲ್ಲೂಕ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನೂತನ ತಾಲ್ಲೂಕಿಗೆ ಒಳಪಡುವ ಕವಿಗಳನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ, ಬರಹಗಾರರ ಸೃಜನಶೀಲತೆಯನ್ನು ಹೆಚ್ಚಿಸಲು ತಾಲ್ಲೂಕ ಮಟ್ಟದ ಕವನ ಸಂಕಲನವನ್ನು ಪ್ರಕಟಿಸಲು ನಿರ್ಧರಿಸಲಾಗಿದೆ ಎಂದು ಕಸಾಪ ತಾಲ್ಲೂಕು ಅಧ್ಯಕ್ಷ ಘನಮಠದಯ್ಯಸ್ವಾಮಿ ಸಾಲಿಮಠ ತಿಳಿಸಿದ್ದಾರೆ.

ಎಸ್.ಎಸ್‌.ಎಲ್.ಸಿ ಪರೀಕ್ಷೆ: ವಿದ್ಯಾರ್ಥಿಗಳು ಇಚ್ಛಿಸಿದ ಕೇಂದ್ರದಲ್ಲಿ ಪರೀಕ್ಷೆಗೆ ಅವಕಾಶ

ಬೆಂಗಳೂರು: ವಿದ್ಯಾರ್ಥಿಗಳು ತಾವು ಇಚ್ಛಿಸಿರುವ ಕೇಂದ್ರಗಳಲ್ಲಿಯೇ ಪರೀಕ್ಷೆಗಳನ್ನು ಬರೆಯಬಹುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ…

ಲಾಕ್ ಡೌನ್ : ಸೀಜ್ ಆದ ವಾಹನ ಮಾಲಿಕರಿಗೆ ಸಿಹಿ ಸುದ್ದಿ

ಈಗಾಗಲೇ ದೇಶಾದ್ಯಂತ ಮಾ.24 ರಿಂದಲೇ ಲಾಕ್ ಡೌನ್ ಆರಂಭವಾಗಿದೆ. ಪೊಲೀಸರು ವಶಪಡಿಸಿಕೊಂಡ ವಾಹನಗಳನ್ನು ಮೇ.1 ರಂದು ಮಾಲಿಕರಿಗೆ ಮರಳಿ ನೀಡುವ ಬಗ್ಗೆ ನಿರ್ಧರಿಸಲಾಗಿದೆ.

ಹೊಳೆ ಆಲೂರು: ಮಲಪ್ರಭ ನದಿ ದಡದಲ್ಲಿ ಮೊಸಳೆ ಶವ ಪತ್ತೆ

ಇಲ್ಲಿನ ಮಲಪ್ರಭ ನದಿಯಲ್ಲಿ ಮೊಸಳೆ ಮೃತದೇಹ ಪತ್ತೆಯಾಗಿದೆ. ಕಳೆದ ಎರಡು ದಿನಗಳ ಹಿಂದೆ ಗದಗ ಜಿಲ್ಲೆ ಹೊಳೆಯಾಲೂರು ಗ್ರಾಮದಲ್ಲಿ ಮೊಸಳೆ ಪತ್ತೆಯಾಗಿತ್ತು. ಇದರಿಂದ ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿತ್ತು. ಇನ್ನು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಕೂಡ ಭೇಟಿ ನೀಡಿದ್ದರು. ನದಿ ದಡಕ್ಕೆ ಹೋಗದಂತೆ ಗ್ರಾಮ ಪಂಚಾಯತಿ ವತಿಯಿಂದ ಡಂಗುರ ಸಾರಲಾಗಿತ್ತು. ಆದರೆ ಇಂದು ಅದೇ ಸ್ಥಳದಲ್ಲಿ ಮೊಸಳೆಯ ಮೃತದೇಹ ಪತ್ತೆಯಾಗಿದ್ದು, ಬುಧುವಾರ ಇಲ್ಲಿ ಕಾಣಿಸಿಕೊಂಡ ಮೊಸಳೆ ಸಾವನ್ನಪ್ಪಿದಾಗಿರಬಹುದು ಎನ್ನಲಾಗಿದೆ.