ರೋಣ: ತಾಲೂಕಿನ ಹಳ್ಳಿಗಳಿಂದ ಬರುವ ಸೋಂಕಿತರಿಗೆ ಕಾಳಜಿ ಪೂರ್ವಕವಾಗಿ ಚಿಕಿತ್ಸೆ ನೀಡಿ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಸೂಚಿಸಿದರು.
ತಾಲೂಕು ಆಸ್ಪತ್ರೆಗೆ ಮಂಗಳವಾರ ಭೇಟಿ ನೀಡಿ ತಾಲೂಕಿನಾದ್ಯಂತ ವೈದ್ಯರ ನಡೆ ಹಳ್ಳಿಯ ಕಡೆ ಯಾವ ರೀತಿ ನಡೆದಿದೆ ಎಂಬುದು ಪರಿಶೀಲಿಸಿ ಮಾತನಾಡಿದರು.
ಪ್ರತಿಯೊಬ್ಬ ಸೋಂಕಿತರಿಗೂ ಯಾವುದೇ ಕುಂದು ಕೊರತೆಯಾಗದಂತೆ ನೋಡಿಕೊಳ್ಳಿ. ಅವರಿಗೆ ಯಾವ ತರಹ ಊಟೋಪಚಾರ ಬೇಕೋ ಅದೇ ತರಹ ತಲುಪಿಸಲು ಪ್ರಯತ್ನ ಮಾಡಿ ಎಂದು ಆದೇಶ ಮಾಡಿದರು.
ಹಳ್ಳಿಗಳಲ್ಲಿ ಸೆರ್ಟಿಫೈಡ್ ಮಾಡಿ ಮನೆಯಲ್ಲಿ ಮತ್ತು ಹೊರಗಡೆ ಇರುವವರ ಬಗ್ಗೆ ಹಾಗೂ ಮನೆಯಲ್ಲಿರುವವರಿಗೆ ಔಷದಿಯನ್ನು ತಲುಪಿಸುವಿರಾ ಎಂದು ಪ್ರಶ್ನಿಸಿದರು. ಗ್ರಾಮೀಣ ಭಾಗದ ಜನರ ಕೋವಿಡ್ ಪರೀಕ್ಷೆಯ ಕಡೆಗೆ ಹೆಚ್ಚಿನ ಗಮನ ನೀಡಿರಿ ಎಂದು ತಾಲೂಕ ಆರೋಗ್ಯಾಧಿಕಾರಿ ಡಾ ಭಜಂತ್ರಿ ಅವರಿಗೆ ಸೂಚಿಸಿದರು.
ಟಿಎಚ್ ಒ ಭಜಂತ್ರಿ ಮಾತನಾಡಿ, ಸರ್ ಗ್ರಾಮೀಣ ಭಾಗದಲ್ಲಿ ಸಾರ್ವಜನಿಕರು ಸಹಕಾರ ನೀಡುತ್ತಿದ್ದಾರೆ. ಈಗಾಗಲೇ ಒಂದು ಹಳ್ಳಿಯಲ್ಲಿ ನೂರು ಜನ ಕೆಲ ಗ್ರಾಮಗಳಲ್ಲಿ 25 ರಿಂದ 30 ಜನರ ಪರೀಕ್ಷೆಗೊಳಗಾಗಿದ್ದರೆ ಎಂದು ತಿಳಿಸಿದರು.
ನಂತರ ಆಕ್ಷಿಜನ್ ರೂಮ್ ಪರಿಶೀಲಿಸಿ ಸಾಧ್ಯವಾದರೆ ಇನ್ನೂ ಹೆಚ್ಚಿನ ಆಕ್ಷಿಜನ್ ಅಳವಡಿಸಿಕೊಳ್ಳಲು ಮುಂದಾಗಿ. ಅದಕ್ಕೆ ಬೇಕಾಗಿರುವ ವ್ಯವಸ್ಥೆ ಮಾಡಿಸೋಣ. ಪ್ರತಿ ದಿನದ ಅಪಡೇಟ್ ನಮಗೆ ತಲುಪುವಂತೆ ಮಾಡಿ ಎಂದರು.
ಜಿಲ್ಲಾ‌ ವರಿಷ್ಠಾಧಿಕಾರಿ ಯತೀಶ್ ಎನ್, ತಹಸೀಲ್ದಾರ್ ಜೆ.ಬಿ.ಜಕ್ಕನಗೌಡ, ಹೊಳೆ ಆಲೂರ ಕಂದಾಯ ನಿರೀಕ್ಷಕ ರವಿ ಬಾರಕೇರ, ಸಿಡಿಪಿಒ ಬಿ.ಎಂ.ಮಾಳೇಕೊಪ್ಪ, ಭೀಮಸೇನ್ ಜೋಶಿ ಆಸ್ಪತ್ರೆಯ ವೈದ್ಯಾಧಿಕಾರಿ ಎಚ್.ಎಲ್.ಗಿರಡ್ಡಿ, ಸಿಪಿಐ ಸುನೀಲ್ ಸವದಿ, ಪಿಎಸ್ ಐ ವಿನೋದ ಪೂಜಾರಿ ಮುಂತಾದವರಿದ್ದರು.

Leave a Reply

Your email address will not be published. Required fields are marked *

You May Also Like

ತಪ್ಪುಗಳನ್ನು ಸಮರ್ಥಿಸಿಕೊಳ್ಳುತ್ತಿರುವ ಕಾಂಗ್ರೆಸ್ : ಬಿಜೆಪಿ ಟೀಕೆ

ಕಾಂಗ್ರೆಸ್ ಪಕ್ಷ ತಮ್ಮ ತಪ್ಪುಗಳನ್ನು ಸಮರ್ಥಿಸುವುದೇ ತನ್ನ ಸಿದ್ದಾಂತ ಎಂದುಕೊಂಡಿದೆ ಎಂದು ಬಿಜೆಪಿ ತಮ್ಮ ಟ್ವೀಟರ್ ನಲ್ಲಿ ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಟೀಕಿಸಿದೆ.

ಗದಗ ಜಿಲ್ಲೆಯಲ್ಲಿ ನಾಳೆ ರಾತ್ರಿ ಯಿಂದ ನಿಷೇದಾಜ್ಞೆ‌ ಜಾರಿ

ಗದಗ: ಜಿಲ್ಲೆಯಾದ್ಯಂತ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಂಭವಿಸಬಹುದಾದ ಅನಾಹುತಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು…

ಶಾಲೆ ತೆರೆಯಬಾರದು ಎನ್ನುವುದಕ್ಕೆ ಸಿದ್ದರಾಮಯ್ಯ ಕೊಟ್ಟ ಉತ್ತರವೇನು ಗೊತ್ತಾ?

ಬೆಂಗಳೂರು : ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗದಗ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ

ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 2020-21ನೇ ಸಾಲಿನಲ್ಲಿ ಜಿಲ್ಲೆಯ ಶಾಲಾ ಹಾಗೂ ಕಾಲೇಜಿನಲ್ಲಿ ನಾನಾ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮುಸ್ಲಿಂ, ಕ್ರ‍್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಎಸ್.ಎಸ್.ಪಿ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಕರೆಯಲಾಗಿದೆ.