ರೋಣ: ತಾಲೂಕಿನ ಹಳ್ಳಿಗಳಿಂದ ಬರುವ ಸೋಂಕಿತರಿಗೆ ಕಾಳಜಿ ಪೂರ್ವಕವಾಗಿ ಚಿಕಿತ್ಸೆ ನೀಡಿ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಸೂಚಿಸಿದರು.
ತಾಲೂಕು ಆಸ್ಪತ್ರೆಗೆ ಮಂಗಳವಾರ ಭೇಟಿ ನೀಡಿ ತಾಲೂಕಿನಾದ್ಯಂತ ವೈದ್ಯರ ನಡೆ ಹಳ್ಳಿಯ ಕಡೆ ಯಾವ ರೀತಿ ನಡೆದಿದೆ ಎಂಬುದು ಪರಿಶೀಲಿಸಿ ಮಾತನಾಡಿದರು.
ಪ್ರತಿಯೊಬ್ಬ ಸೋಂಕಿತರಿಗೂ ಯಾವುದೇ ಕುಂದು ಕೊರತೆಯಾಗದಂತೆ ನೋಡಿಕೊಳ್ಳಿ. ಅವರಿಗೆ ಯಾವ ತರಹ ಊಟೋಪಚಾರ ಬೇಕೋ ಅದೇ ತರಹ ತಲುಪಿಸಲು ಪ್ರಯತ್ನ ಮಾಡಿ ಎಂದು ಆದೇಶ ಮಾಡಿದರು.
ಹಳ್ಳಿಗಳಲ್ಲಿ ಸೆರ್ಟಿಫೈಡ್ ಮಾಡಿ ಮನೆಯಲ್ಲಿ ಮತ್ತು ಹೊರಗಡೆ ಇರುವವರ ಬಗ್ಗೆ ಹಾಗೂ ಮನೆಯಲ್ಲಿರುವವರಿಗೆ ಔಷದಿಯನ್ನು ತಲುಪಿಸುವಿರಾ ಎಂದು ಪ್ರಶ್ನಿಸಿದರು. ಗ್ರಾಮೀಣ ಭಾಗದ ಜನರ ಕೋವಿಡ್ ಪರೀಕ್ಷೆಯ ಕಡೆಗೆ ಹೆಚ್ಚಿನ ಗಮನ ನೀಡಿರಿ ಎಂದು ತಾಲೂಕ ಆರೋಗ್ಯಾಧಿಕಾರಿ ಡಾ ಭಜಂತ್ರಿ ಅವರಿಗೆ ಸೂಚಿಸಿದರು.
ಟಿಎಚ್ ಒ ಭಜಂತ್ರಿ ಮಾತನಾಡಿ, ಸರ್ ಗ್ರಾಮೀಣ ಭಾಗದಲ್ಲಿ ಸಾರ್ವಜನಿಕರು ಸಹಕಾರ ನೀಡುತ್ತಿದ್ದಾರೆ. ಈಗಾಗಲೇ ಒಂದು ಹಳ್ಳಿಯಲ್ಲಿ ನೂರು ಜನ ಕೆಲ ಗ್ರಾಮಗಳಲ್ಲಿ 25 ರಿಂದ 30 ಜನರ ಪರೀಕ್ಷೆಗೊಳಗಾಗಿದ್ದರೆ ಎಂದು ತಿಳಿಸಿದರು.
ನಂತರ ಆಕ್ಷಿಜನ್ ರೂಮ್ ಪರಿಶೀಲಿಸಿ ಸಾಧ್ಯವಾದರೆ ಇನ್ನೂ ಹೆಚ್ಚಿನ ಆಕ್ಷಿಜನ್ ಅಳವಡಿಸಿಕೊಳ್ಳಲು ಮುಂದಾಗಿ. ಅದಕ್ಕೆ ಬೇಕಾಗಿರುವ ವ್ಯವಸ್ಥೆ ಮಾಡಿಸೋಣ. ಪ್ರತಿ ದಿನದ ಅಪಡೇಟ್ ನಮಗೆ ತಲುಪುವಂತೆ ಮಾಡಿ ಎಂದರು.
ಜಿಲ್ಲಾ‌ ವರಿಷ್ಠಾಧಿಕಾರಿ ಯತೀಶ್ ಎನ್, ತಹಸೀಲ್ದಾರ್ ಜೆ.ಬಿ.ಜಕ್ಕನಗೌಡ, ಹೊಳೆ ಆಲೂರ ಕಂದಾಯ ನಿರೀಕ್ಷಕ ರವಿ ಬಾರಕೇರ, ಸಿಡಿಪಿಒ ಬಿ.ಎಂ.ಮಾಳೇಕೊಪ್ಪ, ಭೀಮಸೇನ್ ಜೋಶಿ ಆಸ್ಪತ್ರೆಯ ವೈದ್ಯಾಧಿಕಾರಿ ಎಚ್.ಎಲ್.ಗಿರಡ್ಡಿ, ಸಿಪಿಐ ಸುನೀಲ್ ಸವದಿ, ಪಿಎಸ್ ಐ ವಿನೋದ ಪೂಜಾರಿ ಮುಂತಾದವರಿದ್ದರು.

Leave a Reply

Your email address will not be published. Required fields are marked *

You May Also Like

ಸಂಗೊಳ್ಳಿ ರಾಯಣ್ಣ ಪುತ್ಥಳಿ ತೆರುವುಗೊಳಿಸುವಲ್ಲಿ ಸಚಿವ ಸಿ.ಸಿ.ಪಾಟೀಲ್ ಕೈವಾಡ ಆರೋಪ

ಸ್ವಾತಂತ್ರ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಪುತ್ಥಳಿ ತೆರವುಗೊಳಿಸಲು ಪೊಲೀಸ್ ಇಲಾಖೆ ಬಳಸಿಕೊಂಡು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ತಮ್ಮ ಅಧಿಕಾರ ದರ್ಪ ತೋರಿದ್ದಾರೆ ಎಂದು ರೈತ ಸಂಘದ ತಾಲೂಕಾಧ್ಯಕ್ಷ ಮುತ್ತು ಕುರಿ ಆರೋಪಿಸಿದರು.

ವಿಧಾನಪರಿಷತ್ ಚುನಾವಣೆಯಲ್ಲಿ ನೋಟಾ ಆಯ್ಕೆ ಹಿಂಪಡೆದ ಆಯೋಗ!

ಬೆಂಗಳೂರು : ವಿಧಾನಪರಿಷತ್ ಚುನಾವಣೆಯಲ್ಲಿ ನೋಟಾ ಆಯ್ಕೆ ಇರುವುದಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

ಗದಗ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್: ಫಿಲ್ಡಿಗಿಳಿದ ಡಿವೈಎಸ್ಪಿ

ಗದಗ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್: ಫಿಲ್ಡಿಗಿಳಿದ ಡಿವೈಎಸ್ಪಿ ಗದಗ: ಕೊರೊನಾ ನಿಯಂತ್ರಣ ಹಿನ್ನೆಲೆ ಐದು‌ ದಿನಗಳ ಕಾಲ ಗದಗ ಜಿಲ್ಲೆಯಲ್ಲಿ ಕಠೀಣ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆ ಶುಕ್ರವಾರ ವಿನಾಕಾರಣ ರಸ್ತೆಗಿಳಿದವರ ಬೈಕ್ ಸೀಜ್ ಮಾಡಲಾಯಿತು. ಸ್ವತ: ಡಿವೈಎಸ್ಪಿ ಫಿಲ್ಡಿಗಿಳಿದು ಬೈಕ್ ಸವಾರರಿಗೆ ತರಾಟೆಗೆ ತೆಗೆದುಕೊಂಡ ದೃಷ್ಯಗಳು ಕಂಡು ಬಂದವು. ರಿಪೋರ್ಟರ್ ಎಂದು ಸುಳ್ಳು ಹೇಳಿದ ವ್ಯಕ್ತಿ, ನಕಲಿ‌ ಪತ್ರಕರ್ತ ಎಂದು ತಿಳಿದ ತಕ್ಷಣ ಬೈಕ್ ವಶಕ್ಕೆ ಪಡೆಯಲಾಯಿತು.

ಕೆಲವೆ ಕ್ಷಣದಲ್ಲಿ ಗದಗ ಬೇಟಗೆರಿ ನಗರಸಭೆ ಚುನಾವಣೆ ಮತ ಎಣಿಕೆ – 2021

ಉತ್ತರಪ್ರಭ ಗದಗ: ಇಂದು ಗದಗ-ಬೇಟಗೆರಿ ನಗರಸಭೆ ಚುನಾವಣಾ – 2021ರ ಮತ ಏಣಿಕೆ ನಗರದ ಗುರುಬಸವ…