ರೋಣ: ತಾಲೂಕಿನ ಹಳ್ಳಿಗಳಿಂದ ಬರುವ ಸೋಂಕಿತರಿಗೆ ಕಾಳಜಿ ಪೂರ್ವಕವಾಗಿ ಚಿಕಿತ್ಸೆ ನೀಡಿ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಸೂಚಿಸಿದರು.
ತಾಲೂಕು ಆಸ್ಪತ್ರೆಗೆ ಮಂಗಳವಾರ ಭೇಟಿ ನೀಡಿ ತಾಲೂಕಿನಾದ್ಯಂತ ವೈದ್ಯರ ನಡೆ ಹಳ್ಳಿಯ ಕಡೆ ಯಾವ ರೀತಿ ನಡೆದಿದೆ ಎಂಬುದು ಪರಿಶೀಲಿಸಿ ಮಾತನಾಡಿದರು.
ಪ್ರತಿಯೊಬ್ಬ ಸೋಂಕಿತರಿಗೂ ಯಾವುದೇ ಕುಂದು ಕೊರತೆಯಾಗದಂತೆ ನೋಡಿಕೊಳ್ಳಿ. ಅವರಿಗೆ ಯಾವ ತರಹ ಊಟೋಪಚಾರ ಬೇಕೋ ಅದೇ ತರಹ ತಲುಪಿಸಲು ಪ್ರಯತ್ನ ಮಾಡಿ ಎಂದು ಆದೇಶ ಮಾಡಿದರು.
ಹಳ್ಳಿಗಳಲ್ಲಿ ಸೆರ್ಟಿಫೈಡ್ ಮಾಡಿ ಮನೆಯಲ್ಲಿ ಮತ್ತು ಹೊರಗಡೆ ಇರುವವರ ಬಗ್ಗೆ ಹಾಗೂ ಮನೆಯಲ್ಲಿರುವವರಿಗೆ ಔಷದಿಯನ್ನು ತಲುಪಿಸುವಿರಾ ಎಂದು ಪ್ರಶ್ನಿಸಿದರು. ಗ್ರಾಮೀಣ ಭಾಗದ ಜನರ ಕೋವಿಡ್ ಪರೀಕ್ಷೆಯ ಕಡೆಗೆ ಹೆಚ್ಚಿನ ಗಮನ ನೀಡಿರಿ ಎಂದು ತಾಲೂಕ ಆರೋಗ್ಯಾಧಿಕಾರಿ ಡಾ ಭಜಂತ್ರಿ ಅವರಿಗೆ ಸೂಚಿಸಿದರು.
ಟಿಎಚ್ ಒ ಭಜಂತ್ರಿ ಮಾತನಾಡಿ, ಸರ್ ಗ್ರಾಮೀಣ ಭಾಗದಲ್ಲಿ ಸಾರ್ವಜನಿಕರು ಸಹಕಾರ ನೀಡುತ್ತಿದ್ದಾರೆ. ಈಗಾಗಲೇ ಒಂದು ಹಳ್ಳಿಯಲ್ಲಿ ನೂರು ಜನ ಕೆಲ ಗ್ರಾಮಗಳಲ್ಲಿ 25 ರಿಂದ 30 ಜನರ ಪರೀಕ್ಷೆಗೊಳಗಾಗಿದ್ದರೆ ಎಂದು ತಿಳಿಸಿದರು.
ನಂತರ ಆಕ್ಷಿಜನ್ ರೂಮ್ ಪರಿಶೀಲಿಸಿ ಸಾಧ್ಯವಾದರೆ ಇನ್ನೂ ಹೆಚ್ಚಿನ ಆಕ್ಷಿಜನ್ ಅಳವಡಿಸಿಕೊಳ್ಳಲು ಮುಂದಾಗಿ. ಅದಕ್ಕೆ ಬೇಕಾಗಿರುವ ವ್ಯವಸ್ಥೆ ಮಾಡಿಸೋಣ. ಪ್ರತಿ ದಿನದ ಅಪಡೇಟ್ ನಮಗೆ ತಲುಪುವಂತೆ ಮಾಡಿ ಎಂದರು.
ಜಿಲ್ಲಾ‌ ವರಿಷ್ಠಾಧಿಕಾರಿ ಯತೀಶ್ ಎನ್, ತಹಸೀಲ್ದಾರ್ ಜೆ.ಬಿ.ಜಕ್ಕನಗೌಡ, ಹೊಳೆ ಆಲೂರ ಕಂದಾಯ ನಿರೀಕ್ಷಕ ರವಿ ಬಾರಕೇರ, ಸಿಡಿಪಿಒ ಬಿ.ಎಂ.ಮಾಳೇಕೊಪ್ಪ, ಭೀಮಸೇನ್ ಜೋಶಿ ಆಸ್ಪತ್ರೆಯ ವೈದ್ಯಾಧಿಕಾರಿ ಎಚ್.ಎಲ್.ಗಿರಡ್ಡಿ, ಸಿಪಿಐ ಸುನೀಲ್ ಸವದಿ, ಪಿಎಸ್ ಐ ವಿನೋದ ಪೂಜಾರಿ ಮುಂತಾದವರಿದ್ದರು.

Leave a Reply

Your email address will not be published. Required fields are marked *

You May Also Like

ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಗೆ ಕೊರೊನಾ ಪಾಸಿಟಿವ್..!

ಗಂಗಾವತಿ : ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಯಲ್ಲಿ ಸೋಂಕು ಇರುವುದು ಖಚಿತವಾಗಿದೆ. ಈ ಘಟನೆ ಕಾರಟಗಿಯಲ್ಲಿ…

ಗದಗ ಜಿಲ್ಲೆಯಲ್ಲಿಂದು 6 ಕಂಟೇನ್ ಮೆಂಟ್ ಪ್ರದೇಶ ನಿರ್ಭಂಧ ತೆರವು

ಗದಗ: ಜಿಲ್ಲೆಯ ಗದಗ ತಾಲ್ಲೂಕಿನ ಅಸುಂಡಿ ಗ್ರಾಮದ ವಾರ್ಡ ನಂ. 2ರ ಸಿದ್ದಲಿಂಗನಗೌಡಾ ಪಾಟೀಲ ಬಡಾವಣೆ…

ರಾಜ್ಯದಲ್ಲಿಂದು 271 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 271 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 6516 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 464. ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 3440 ಕೇಸ್ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 2995 ಸಕ್ರೀಯ ಪ್ರಕರಣಗಳಿವೆ.

ಉತ್ತರದ ಜನ ಮತ್ತೆ ನೆರೆಗೆ ತತ್ತರ!: ರಸ್ತೆಯ ಬದಿಯಲ್ಲೆ ಲಖಮಾಪುರ ಜನರ ವಾಸ

ಅಪಾಯ ಮಟ್ಟ ಮೀರಿ ಹರಿಯುತ್ತಿರುವ ಮಲಪ್ರಭಾ ನದಿಯಿಂದಾಗಿ ಗದಗ ಜಿಲ್ಲೆಯ 16 ಹಳ್ಳಿಗಳು ಪ್ರವಾಹದ ಭೀತಿ ಎದುರಿಸುವಂತಾಗಿದೆ. ನರಗುಂದ ಹಾಗೂ ರೋಣ ತಾಲೂಕಿನ ಹಲವು ಹಳ್ಳಿಗಳ ಜನರಲ್ಲೀಗ ಪ್ರವಾಹ ಆತಂಕ ಸೃಷ್ಟಿಯಾಗಿದೆ.