ಕರೋನಾ ಚಿಕಿತ್ಸಾ ವೆಚ್ಚ ಹಿನ್ನೆಲೆ, ಸಾರ್ವಜನಿಕ ವಲಯದ ಬ್ಯಾಂಕ್ಗಳು (ಪಿಎಸ್ಬಿ) ಅಸುರಕ್ಷಿತ ಸಾಲ ನೀಡಲು ನಿರ್ಧರಿಸಿವೆ.
ಕೋವಿಡ್ ಎರಡನೇ ಅಲೆ ದೇಶಾದ್ಯಂತ ಹೆಚ್ಚು ವ್ಯಾಪಿಸಿ ಸಂದಿಗ್ಧ ಪರಿಸ್ಥಿತಿ ಉಂಟು ಮಾಡಿದ್ದು, ಇದರಿಂದ ಅಸುರಕ್ಷಿತ ಸಾಲ ನೀಡುಲು ನಿರ್ಧಾರ ಮಾಡಲಾಗಿದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇಂಡಿಯನ್ ಬ್ಯಾಂಕುಗಳ ಸಂಘ (ಐಬಿಎ) ಜಂಟಿಯಾಗಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿವೆ.

ಇಂಡಿಯನ್ ಬ್ಯಾಂಕುಗಳ ಸಂಘ (ಐಬಿಎ) ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಪ್ರಕಟಣೆ ಪ್ರಕಾರ, ಸಂಬಳ ಪಡೆಯುವವರು, ಸಂಬಳ ಪಡೆಯದವರು, ಪಿಂಚಣಿದಾರರು ಸೇರಿದಂತೆ ವ್ಯಕ್ತಿಗಳು ಕೋವಿಡ್ ಚಿಕಿತ್ಸೆಗಾಗಿ (Covid-19 Treatment) ಅಸುರಕ್ಷಿತ ವೈಯಕ್ತಿಕ ಸಾಲಗಳನ್ನು ₹ 25,000 ದಿಂದ 5 ಲಕ್ಷದವರೆಗೆ ಪಡೆಯಬಹುದು . ಮರುಪಾವತಿ ಅವಧಿ 5 ವರ್ಷಗಳು ಮತ್ತು ಎಸ್‌ಬಿಐ ವಾರ್ಷಿಕ 8.5% ಬಡ್ಡಿ ವಿಧಿಸುತ್ತದೆ. ಇತರ ಬ್ಯಾಂಕುಗಳು ತಮ್ಮ ಬಡ್ಡಿದರವನ್ನು ನಿರ್ಧರಿಸಲು ಮುಕ್ತವಾಗಿವೆ ಎಂದಿದೆ.

ಆರ್‌ಬಿಐ ಮಾರ್ಗ ಸೂಚಿ ಪ್ರಕಾರ ಎಮರ್ಜೆನ್ಸಿ ಕ್ರೆಡಿಟ್ಲೈನ್ ಗ್ಯಾರಂಟಿ ಯೋಜನೆ ಅಡಿ ಆಮ್ಲಜನಕ ಘಟಕ ಸ್ಥಾಪಿಸಲು ಆಸ್ಪತ್ರೆ, ನರ್ಸಿಂಗ್ ಹೋಂಗಳಿಗೆ 7.5% ಬಡ್ಡಿ ದರದಲ್ಲಿ 2 ಕೋಟಿ ವರೆಗೆ ಸಾಲ ನೀಡಲಾಗುತ್ತದೆ.
ಆರೋಗ್ಯ ರಕ್ಷಕ ಯೋಜನೆಯಡಿ- ಆರೋಗ್ಯ ಕ್ಷೇತ್ರದ ಮೂಲಸೌಕರ್ಯ ಸ್ಥಾಪಿಸಲು, ಅಭಿವೃದ್ಧಿಗೊಳಿಸಲು, ಉತ್ಪನ್ನ ತಯಾರಿಸಲು 100 ಕೋಟಿ ವರೆಗೆ ಸಾಲನೀಡಲಾಗುವುದು. ಜೊತೆಗೆ ತುರ್ತು ವೈದ್ಯಕೀಯ ಸೇವೆಗಳಿಗೆ ಆರ್ಥಿಕ ನೆರವು ನೀಡುವ ಸಲುವಾಗಿ 50 ಕೋಟಿ ರೂ ವಾಯಿದಿ ಸಾಲ ನೀಡುವ ವ್ಯವಸ್ಥೆ ರೂಪಿಸುವುದಾಗಿ ಈ ಹಿಂದೆ ರಿಸರ್ವ್ ಬ್ಯಾಂಕ್ ತಿಳಿಸಿತ್ತು.

Leave a Reply

Your email address will not be published. Required fields are marked *

You May Also Like

ಅಮೇರಿಕಾದಲ್ಲಾದ ಹಾನಿಯನ್ನು ಚೀನಾ ದೇಶವೇ ತುಂಬಿಕೊಲಿ:ಟ್ರಂಪ್ ಆಗ್ರಹ..!

ಚೀನಾದ ನಿಷ್ಕಾಳಜಿಯೇ ಕೊರೋನಾ ಸೋಂಕು ವ್ಯಾಪಕವಾಗಲು ಕಾರಣ ಹೀಗಾಗಿ ನಮಗೆ ಆಗಿರುವ ಹಾನಿಯನ್ನು ತುಂಬಿಕೊಡುವಂತೆ ಚೀನಾ ದೇಶವನ್ನು ಆಗ್ರಹಿಸುತ್ತೇನೆ ಎಂದು ಅಮೇರಿಕಾ ಅಧ್ಯಕ್ಷ ಟ್ರಂಪ್ ಅಸಮಾಧಾನ ಹೊರಹಾಕಿದರು.

ಬಾಗಲಕೋಟೆ ರೋಟರಿ ಕ್ಲಬ್ ವತಿಯಿಂದ ಹಿರಿಯ ಪತ್ರಕರ್ತರಿಗೆ ಸನ್ಮಾನ..

ಬಾಗಲಕೋಟೆ: ನಗರದ ರೋಟರಿ ಕ್ಲಬ್ ವತಿಯಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ಇಂದು ಹಿರಿಯ ಪತ್ರಕ ರ್ತರಾದ…

ಮತದಾನ ಬಹಿಸ್ಕಾರ ಮಾಡಿದರೆ ಸಂವಿಧಾನಕ್ಕೆ ಅವಮಾನ ಮಾಡಿದಂತೆ : ಕಳಕಪ್ಪ ಬಂಡಿ

ಉತ್ತರ ಪ್ರಭ ಸುದ್ದಿರೋಣ : ತಾಲೂಕಿನ ಜಿಗಳೂರ ಗ್ರಾಮದಲ್ಲಿ ಸುಮಾರು 20 ಲಕ್ಷ ವೆಚ್ಚದ ಅಂಬೇಡ್ಕರ್…

ಅರಣ್ಯಗಳ ಅಂಚಿನಲ್ಲಿ 650 ಕಿ.ಮೀ ರೈಲ್ವೆ ಬ್ಯಾರಿಕೇಡ್ ಹಾಕುವ ಗುರಿ : ಅರಣ್ಯ ಸಚಿವ ಆನಂದ್ ಸಿಂಗ್

ಕಾಡಂಚಿನ ಗ್ರಾಮಗಳಲ್ಲಿ ಪದೆ ಪದೇ ಜಾನುವಾರಗಳ ಮೇಲೆ ಹುಲಿ ದಾಳಿ ನಡೆಸುತ್ತಿರುವ ಹಿನ್ನಲೆಯಲ್ಲಿ ಇಂದು ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಕುಂದಕೆರೆ ವಲಯಕ್ಕೆ ಅರಣ್ಯ ಸಚಿವ ಆನಂದ್ ಸಿಂಗ್ ಭೇಟಿ ನೀಡಿ ಪರಿಶೀಲಿಸಿದರು.