ಕರೋನಾ ಚಿಕಿತ್ಸಾ ವೆಚ್ಚ ಹಿನ್ನೆಲೆ, ಸಾರ್ವಜನಿಕ ವಲಯದ ಬ್ಯಾಂಕ್ಗಳು (ಪಿಎಸ್ಬಿ) ಅಸುರಕ್ಷಿತ ಸಾಲ ನೀಡಲು ನಿರ್ಧರಿಸಿವೆ.
ಕೋವಿಡ್ ಎರಡನೇ ಅಲೆ ದೇಶಾದ್ಯಂತ ಹೆಚ್ಚು ವ್ಯಾಪಿಸಿ ಸಂದಿಗ್ಧ ಪರಿಸ್ಥಿತಿ ಉಂಟು ಮಾಡಿದ್ದು, ಇದರಿಂದ ಅಸುರಕ್ಷಿತ ಸಾಲ ನೀಡುಲು ನಿರ್ಧಾರ ಮಾಡಲಾಗಿದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇಂಡಿಯನ್ ಬ್ಯಾಂಕುಗಳ ಸಂಘ (ಐಬಿಎ) ಜಂಟಿಯಾಗಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿವೆ.

ಇಂಡಿಯನ್ ಬ್ಯಾಂಕುಗಳ ಸಂಘ (ಐಬಿಎ) ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಪ್ರಕಟಣೆ ಪ್ರಕಾರ, ಸಂಬಳ ಪಡೆಯುವವರು, ಸಂಬಳ ಪಡೆಯದವರು, ಪಿಂಚಣಿದಾರರು ಸೇರಿದಂತೆ ವ್ಯಕ್ತಿಗಳು ಕೋವಿಡ್ ಚಿಕಿತ್ಸೆಗಾಗಿ (Covid-19 Treatment) ಅಸುರಕ್ಷಿತ ವೈಯಕ್ತಿಕ ಸಾಲಗಳನ್ನು ₹ 25,000 ದಿಂದ 5 ಲಕ್ಷದವರೆಗೆ ಪಡೆಯಬಹುದು . ಮರುಪಾವತಿ ಅವಧಿ 5 ವರ್ಷಗಳು ಮತ್ತು ಎಸ್‌ಬಿಐ ವಾರ್ಷಿಕ 8.5% ಬಡ್ಡಿ ವಿಧಿಸುತ್ತದೆ. ಇತರ ಬ್ಯಾಂಕುಗಳು ತಮ್ಮ ಬಡ್ಡಿದರವನ್ನು ನಿರ್ಧರಿಸಲು ಮುಕ್ತವಾಗಿವೆ ಎಂದಿದೆ.

ಆರ್‌ಬಿಐ ಮಾರ್ಗ ಸೂಚಿ ಪ್ರಕಾರ ಎಮರ್ಜೆನ್ಸಿ ಕ್ರೆಡಿಟ್ಲೈನ್ ಗ್ಯಾರಂಟಿ ಯೋಜನೆ ಅಡಿ ಆಮ್ಲಜನಕ ಘಟಕ ಸ್ಥಾಪಿಸಲು ಆಸ್ಪತ್ರೆ, ನರ್ಸಿಂಗ್ ಹೋಂಗಳಿಗೆ 7.5% ಬಡ್ಡಿ ದರದಲ್ಲಿ 2 ಕೋಟಿ ವರೆಗೆ ಸಾಲ ನೀಡಲಾಗುತ್ತದೆ.
ಆರೋಗ್ಯ ರಕ್ಷಕ ಯೋಜನೆಯಡಿ- ಆರೋಗ್ಯ ಕ್ಷೇತ್ರದ ಮೂಲಸೌಕರ್ಯ ಸ್ಥಾಪಿಸಲು, ಅಭಿವೃದ್ಧಿಗೊಳಿಸಲು, ಉತ್ಪನ್ನ ತಯಾರಿಸಲು 100 ಕೋಟಿ ವರೆಗೆ ಸಾಲನೀಡಲಾಗುವುದು. ಜೊತೆಗೆ ತುರ್ತು ವೈದ್ಯಕೀಯ ಸೇವೆಗಳಿಗೆ ಆರ್ಥಿಕ ನೆರವು ನೀಡುವ ಸಲುವಾಗಿ 50 ಕೋಟಿ ರೂ ವಾಯಿದಿ ಸಾಲ ನೀಡುವ ವ್ಯವಸ್ಥೆ ರೂಪಿಸುವುದಾಗಿ ಈ ಹಿಂದೆ ರಿಸರ್ವ್ ಬ್ಯಾಂಕ್ ತಿಳಿಸಿತ್ತು.

Leave a Reply

Your email address will not be published. Required fields are marked *

You May Also Like

ಕಪ್ಪತ್ತಗುಡ್ಡ ವನ್ಯಜೀವಿಧಾಮ: ಕೈಬಿಡಲು ಒತ್ತಾಯಿಸಿ ಮನವಿ

ಸರ್ಕಾರ ಅವೈಜ್ಞಾನಿಕವಾಗಿ ಕಪ್ಪತ್ತಗುಡ್ಡವನ್ನು ವನ್ಯಜೀವಿ ಧಾಮ ಎಂದು ಘೋಷಿಸಿದ್ದು, ಶಿರಹಟ್ಟಿ ತಾಲೂಕಿನ‌ ಬ್ಲಾಕ್ ನಂ 3 ಮತ್ತು 4 ರ ಅರಣ್ಯ ಕ್ಷೇತ್ರವನ್ನು ಕೂಡಲೇ ಕೈಬಿಡಬೇಕೆಂದು ಒತ್ತಾಯಿಸಿ ಜಿಲ್ಲಾ ಅಹಿಂದ್ ಸಂಘ ಹಾಗೂ‌ ಕ್ರಷರ್ ಮತ್ತು‌ ಕಲ್ಲು ಗಣಿಗಾರಿಕೆ ಕಾರ್ಮಿಕ ಒಕ್ಕೂಟ ಸಂಘದ ವತಿಯಿಂದ ಬುಧವಾರ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ‌ ಮನವಿ‌ ಸಲ್ಲಿಸಲಾಯಿತು.

ಬ್ಯಾಂಕ್ ಗೆ ನುಗ್ಗಿ ಮ್ಯಾನೇಜರ್ ಮೇಲೆ ಹಲ್ಲೆ : ಆರೋಪಿ ಬಂಧನ

ಹಣ ಡ್ರಾ ಮಾಡಿಕೊಡುವಂತೆ ಬ್ಯಾಂಕ್ ಮ್ಯಾನೇಜರ್ ಒಬ್ಬರ ಮನೆಗೆ ನುಗ್ಗಿದ ಇಬ್ಬರು ಮ್ಯಾನೇಜರ್ ಮೇಲೆ ದರ್ಪ ತೋರಿದ ಘಟನೆ ಬಾಲೆಹೊಸೂರು ಗ್ರಾಮದಲ್ಲಿ ನಡೆದಿತ್ತು.

ವಾಟ್ಸಾಪ್ ಬಗ್ಗೆ ಮುಖ್ಯ ಮಾಹಿತಿ ಇಲ್ಲಿದೆ ನೋಡಿ

ವಾಟ್ಸಾಪ್ ಬಳಕೆದಾರರಿಗೆ ಹೊಸ ಮಾಹಿತಿಯೊಂದು ಇಲ್ಲಿದೆ. ವಾಟ್ಸಾಪ್ ಬಳಕೆದಾರರು ಸ್ಮಾರ್ಟ ಫೋನ್ ಗಳಲ್ಲಿ ವಾಟ್ಸಾಪ್ ಲಾಗೌಟ್ ಮಾಡಬಹುದಾಗಿದೆ.

ಕೆ.ಎಸ್ಆರ.ಟಿ.ಸಿ ನೌಕರರಿಗೆ ಸಂಬಳರಹಿತ ರಜೆ ಅಮಾನವೀಯ:ಸರ್ಕಾರ ದಿವಾಳಿಯಾಗಿದೆಯೇ?: ಸಿದ್ದರಾಮಯ್ಯ ಆಕ್ರೋಶ

ಕೆ.ಎಸ್.ಆರ.ಟಿ.ಸಿ ನೌಕರರಿಗೆ 1 ವರ್ಷ ಸಂಬಳರಹಿತ ರಜೆ ನೀಡಲು ಹೊರಟಿರುವುದು ಕಾರ್ಮಿಕ ವಿರೋಧಿ ನಡೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.ಸರ್ಕಾರದ ಯೋಚನೆ ಕಾರ್ಮಿಕ ವಿರೋಧಿ ಮತ್ತು ಅಮಾನವೀಯ