ಸಸಿ ವಿತರಿಸಿದ ಅರಣ್ಯಾಧಿಕಾರಿ

ಲಕ್ಷ್ಮೇಶ್ವರ: ಈಗಾಗಲೇ ಮುಂಗಾರು ಹಂಗಾಮು ಆರಂಭವಾಗಿದ್ದು, ಸಸಿಗಳನ್ನು ರೈತರಿಗೆ ಹಾಗೂ ಸಾರ್ವಜನಿಕರಿಗೆ ಉಚಿತವಾಗಿ ಕೊಡಲಾಗುತ್ತಿದೆ ಎಂದು ಅರಣ್ಯಾಧಿಕಾರಿ ಸಿದ್ದರಾಮ ವಿಭೂತಿ ಹೇಳಿದರು.
ಪಟ್ಟಣದಲ್ಲಿ ಮುಂಬರುವ ಪರಿಸರ ದಿನಾಚರಣೆ ಅಂಗವಾಗಿ ಆರ್.ಎಸ್.ಎಸ್.ಮತ್ತು ಎಂಜಿಎಂ ಫೌಂಡೇಶನ್ ನಿಂದ 500 ಸಸಿಗಳನ್ನು ಶಾಲೆಗಳಲ್ಲಿ ಆಸಕ್ತರಿಗೆ ವಿತರಿಸಿ ಮಾತನಾಡಿದರು.
ಅರಣ್ಯ ಇಲಾಖೆಯಿಂದ ಸಾರ್ವಜನಿಕರಿಗೆ ಹಾಗೂ ರೈತರಿಗೆ, ಆಸಕ್ತರಿಗೆ ಸಸಿಗಳನ್ನು ನೀಡಲಾಗುತ್ತಿದ್ದು, ರಸ್ತೆಯ ಎರಡು ಬದಿಯಲ್ಲಿ ಸಸಿಗಳನ್ನು ನೆಡುವ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದರು.
ಆರ್.ಎಸ್.ಎಸ್ ಕಾರ್ಯಕರ್ತರು ಹಾಗೂ ಎಂಜಿಎಂ ಫೌಂಡೇಶನ್ ನವರು, ಅರಣ್ಯ ಇಲಾಖೆಯ ಸಿಬ್ಬಂದಿಯ ವರ್ಗದವರು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

Exit mobile version