ಮುಳಗುಂದ: ಪಟ್ಟಣದ ಹೃದಯ ಭಾಗದ ಗಾಂಧಿಕಟ್ಟಿಯ ಹತ್ತಿರ ವೃತ್ತ ಪ.ಪಂ ಮಾಜಿ ಸದಸ್ಯ ದಿ.ಆರ್.ಎನ್ ದೇಶಪಾಂಡೆ ಅವರ ಹೆಸರು ನಾಮಕರಣ ಮಡಬೇಕು. ಎಂದು ಉನ್ನತಿ ಮಹಿಳಾ ಸಮಾಜ ಸೇವೆ ಹಾಗೂ ವಿವಿದೋದ್ದೇಶಗಳ ಸಂಘ, ಜೈ ಮಾತಾ ಜೀಜಾಬಾಯಿ ಕ್ಷತ್ರೀಯ ಮರಾಠ ಮಹಿಳಾ ಸಂಘ ಸೇರಿದಂತೆ ಹಲವು ಸಂಘಟನೆಗಳು ಪ.ಪಂ.ಮುಖ್ಯಾಧಿಕಾರಿ ಎಂಎಸ್.ಬೆಂತೂರ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.
ದಿ. ಆರ್.ಎನ್.ದೇಶಪಾಂಡೆಯವರು ಶಿಕ್ಷಣ ಪ್ರೇಮಿ,ಭೂದಾನಿ, ಆರ್ಥಿಕ, ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯವಾಗಿ ಪಟ್ಟಣದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ ಅಜಾತಶತ್ರು, ಸಾರ್ವಜನಿಕ ಜೀವನದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಜೀವನ ಸವೆಸಿದವರು. ಪಟ್ಟಣದ ಅಭಿವೃದ್ಧಿಗೆ ಕಾರಣರಾದ ಅವರ ಸೇವೆ ಅಚ್ಚಳಿಯದೇ ಉಳಿದಿದೆ, ಅವರ ಸವಿನೆನಪಿನ ಅಂಗವಾಗಿ ಪಟ್ಟಣದ ಹೃದಯ ಭಾಗದಲ್ಲಿ ವೃತ್ತಕ್ಕೆ ದಿ.ದೇಶಪಾಂಡೆ ಅವರ ಹೆಸರು ನಾಮಕರಣ ಮಾಡಬೇಕು. ಎಂದು ಮನವಿಯಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ಉನ್ನತಿ ಮಹಿಳಾ ವಿವಿದೋದ್ದೇಶ ಸಂಘದ ಉಪಾಧ್ಯಕ್ಷೆ ಮಂಗಳಾ.ಕೆ.ನೀಲಗುಂದ, ಸಂಘದ ಅಧ್ಯಕ್ಷೆ ಗೀತಾ ಜಾಧವ, ಆರ್.ಬಿ ಜಾಧವ, ವಿಜಯಲಕ್ಷ್ಮೀ, ಕಿರಣ ನೀಲಗುಂದ, ಪ್ರಸನ್ನಕುಮಾರ ಹಿರೇಮಠ, ಫಕ್ಕಿರೇಶ ಕತ್ತಿ ಮುಂತಾದವರು ಇದ್ದರು.

Leave a Reply

Your email address will not be published. Required fields are marked *

You May Also Like

ತಮ್ಮ ತಪ್ಪುಗಳನ್ನು ಮರೆಮಾಚಲು ಜನರ ಮುಂದೆ ಮೋದಿ ಬಂದಿದ್ದಾರೆ – ಸಿದ್ದರಾಮಯ್ಯ!

ಬೆಂಗಳೂರು : ಇಂದು ಸಂಜೆ ದೇಶ ಉದ್ಧೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಅವರು ವಾಗ್ದಾಳಿ ನಡೆಸಿದ್ದಾರೆ.

ಹೆಸರು, ಶೇಂಗಾ, ಹತ್ತಿ, ಗೋವಿನ ಜೋಳ ಬಿತ್ತನೆಗೆ ರೈತ ಅಣಿ ಉತ್ತಮ ಮಳೆ, ಮುಂಗಾರು ಹಂಗಾಮಿನ ಬಿತ್ತನೆಗೆ ಸಿದ್ಧತೆ ಚುರುಕು ಚಂದ್ರು ಬಿ

ಮುಳಗುಂದ: ಪಟ್ಟಣ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ವ್ಯಾಪ್ತಿಯಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ ಉತ್ತಮ ಮಳೆಯಾಗಿದ್ದು, ಕೋವಿಡ್ ಲಾಕ್ ಡೌನ್ ಮಧ್ಯೆ ಕೃಷಿ ಚಟುವಟಿಕೆಗಳು ಗರಿಗೆದರಿವೆ. ಮುಂಗಾರು ಹಂಗಾಮಿನ ಪ್ರಮುಖವಾಗಿ ಹೆಸರು, ಶೇಂಗಾ, ಹತ್ತಿ, ಗೋವಿನ ಜೋಳ ಬಿತ್ತನೆಗೆ ರೈತರು ಭೂಮಿ ಹದಗೊಳಿಸುವ ಕಾಯಕದಲ್ಲಿ ನಿರತರಾಗಿದ್ದಾರೆ.

ಅವೈಜ್ಞಾನಿಕ ಚರಂಡಿ ನಿರ್ಮಾಣ 50ಕ್ಕೂ ಮನೆಗಳಿಗೆ ನುಗ್ಗಿದ ಮಳೆ ನೀರು ಗ್ರಾಮಸ್ಥರ ಆರೋಪ

ಉತ್ತರಪ್ರಭ ಸುದ್ದಿ ನರೇಗಲ್: ಸಮೀಪದ ಕಳಕಾಪುರ ಗ್ರಾಮದಲ್ಲಿ ಶನಿವಾರ ರಾತ್ರಿ ಸುರಿದ ಮಳೆಯ ನೀರು 50ಕ್ಕೂ…

ಸೆಪ್ಟಂಬರ್ ಮೊದಲ ವಾರದಲ್ಲಿ ಪದವಿ ತರಗತಿಗಳು ಆರಂಭ

ಈಗಾಗಲೇ ಸಾಕಷ್ಟು ಚರ್ಚೆಗೆ ಗ್ರಾಮಸವಾದ ವಿಷಯ ಶೈಕ್ಷಣಿಕ ವರ್ಷದ ತರಗತಿಗಳು ಆರಂಭವಾಗುವುದು ಯಾವಾಗ ಎನ್ನುವುದು. ಈ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪಾಲಕರು ತರಗತಿಗಳು ಯಾವಾಗ ಆರಂಭವಾಗುತ್ತೆವೆಯೋ ಎನ್ನುವುದನ್ನೇ ಎದುರು ನೋಡುತ್ತಿದ್ದರು.