ಬೆಂಗಳೂರು: ಕೆಜಿಎಫ್ ಅಂದ್ರೆ ಸಾಕು ಪಡ್ಡೆ ಹುಡುಗರ ಕೇಕೆ ಶುರುವಾಗುತ್ತೆ. ಈ ಕೊರೊನಾ ಸಂಕಷ್ಟದಲ್ಲಿ ರಾಕಿ ಬಾಯ್ ಫ್ಯಾನ್ಸ್ ಗೆ ಖುಷಿ ಸುದ್ದಿಯೊಂದು ಸಿಕ್ಕಿದೆ. ಅಂದ್ಹಾಗೆ ಈ ಖುಷಿಗೆ ಕಾರಣ 18 ಕೋಟಿಗೂ ಹೆಚ್ಚು ವೀಕ್ಷಣೆ ಪಡೆದ ಕೆಜಿಎಫ್-2 ಟೀಸರ್. ಹೌದು ಹೆಚ್ಚು ಜನರಿಂದ ವೀಕ್ಷಣೆಗೊಳಗಾದ ಭಾರತದ ಸಿನಿಮಾ ಟೀಸರ್ ಎನ್ನುವ ಖ್ಯಾತಿಗೆ ಈ ಟೀಸರ್ ಪಾತ್ರವಾಗಿದೆ. ಈ ವಿಷಯವನ್ನು ಹೊಂಬಾಳೆ ಫಿಲ್ಸ್ಂ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ. ಕೆಜಿಎಫ್ 2 ಚಿತ್ರದ ಟೀಸರ್ಗೆ ಯೂಟ್ಯೂಬ್ನಲ್ಲಿ ಹತ್ತು ಲಕ್ಷಕ್ಕೂ ಹೆಚ್ಚು ಜನ ಕಮೆಂಟ್ ಮಾಡಿದ್ದಾರೆ. 18 ಕೋಟಿಗೂ ಹೆಚ್ಚು ವೀಕ್ಷಣೆ ಕಂಡಿದೆ.
ಯಶ್, ಶ್ರೀನಿಧಿ ಶೆಟ್ಟಿ, ಸಂಜಯ್ ದತ್, ರವೀನಾ ಟಂಡನ್ ಸೇರಿದಂತೆ ಹಲವರ ತಾರಾ ಬಳಗದ ಈ ಚಿತ್ರ, ಸಿನಿಮಾ ರಿಲೀಸ್ಗೂ ಮೊದಲೇ ಸಖತ್ ಸದ್ದು ಮಾಡುತ್ತಿದೆ. ಮೋಷನ್ ಪೋಸ್ಟರ್, ಫಸ್ಟ್ ಲುಕ್ ಜೊತೆ ರಾಕಿಂಗ್ ಸ್ಟಾರ್ ಹುಟ್ಟುಹಬ್ಬದ ದಿನ ರಿಲೀಸ್ ಆದ ಟೀಸರ್, ಕಡಿಮೆ ಅವಧಿಯಲ್ಲಿ ಹೆಚ್ಚು ಜನ ನೋಡಿದ ಟೀಸರ್ ಎಂಬ ಹೆಗ್ಗಳಿಕೆ ಪಾತ್ರವಾಗಿದೆ.

Leave a Reply

Your email address will not be published. Required fields are marked *

You May Also Like

ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಮಾರ್ಗಸೂಚಿ ಪಾಲಿಸಿ

ಗದಗ:ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಹಾಗೂ ಸೋಂಕಿತ ಚಿಕಿತ್ಸೆ ನೀಡುವಲ್ಲಿ ಸರ್ಕಾರ ನೀಡಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನ…

ಲಕ್ಷ್ಮೇಶ್ವರ: ಕಾಮಗಾರಿ ಮುಗಿದರೂ ಹಸ್ತಾಂತರವಾಗದ ಅಂಗನವಾಡಿ

ಬಡ ಮಕ್ಕಳ ಬದುಕಿನಲ್ಲಿ ಶಿಕ್ಷಣ ದಿವಿಗೆಯನ್ನು ಹಚ್ಚಬೇಕಾದ ಅಂಗನವಾಡಿ ಕೇಂದ್ರ ಇದ್ದು ಇಲ್ಲದಂತಾಗಿ ತಾಲೂಕಿನ ಆದರಹಳ್ಳಿ ಗ್ರಾಮದ 2ನೇ ವಾರ್ಡಿನ ಅಂಗನವಾಡಿ ಕೇಂದ್ರ ಇಲ್ಲದೇ ಬಾಡಿಗೆ ಕಟ್ಟಡದಲ್ಲಿ ಅಂಗನವಾಡಿ ಕೇಂದ್ರ ನಡೆಯುತ್ತಿದೆ. ಹಲವು ವರ್ಷಗಳಿಂದ ಮಕ್ಕಳಿಗೆ ಶಿಕ್ಷಣ ಕೊಡುತ್ತಾ ಬಂದಿದ್ದಾರೆ. ಹೊಸ ಅಂಗನವಾಡಿ ಕೇಂದ್ರ ನಿರ್ಮಾಣವಾಗಿ ಸುಮಾರು ವರ್ಷಗಳು ಕಳೆದರೂ ಇದುವರೆಗೆ ಅಂಗನವಾಡಿ ಕೇಂದ್ರವನ್ನು ಗುತ್ತಿಗೆದಾರರು ಹಸ್ತಾಂತರ ಮಾಡಿಲ್ಲ ಹಾಗೂ ಗ್ರಾ.ಪಂ.ಚುನಾವಣೆ ನಡೆದು ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯೂ ಆಗಿದೆ. ಆದರೆ ಅಂಗನವಾಡಿ ಬಗ್ಗೆ ಯಾರೂ ಚಕಾರ ಎತ್ತುತ್ತಿಲ್ಲ ಎಂದು 2 ವಾರ್ಡಿನ ಸಾರ್ವಜನಿಕರು ತಮ್ಮ ಆಕ್ರೋಶವನ್ನು ಹೋರ ಹಾಕುತ್ತಿದ್ದಾರೆ.

ಡಂಬಳ : ಪಶು ಆಸ್ಪತ್ರೆಯಲ್ಲಿ ವೈದ್ಯರ ಕೊರತೆ

ಜಾನುವಾರುಗಳಿಗೆ ಚಿಕಿತ್ಸೆ ನೀಡುವುದಕ್ಕೆ ಪಶು ಆಸ್ಪತ್ರೆ ಇದ್ದರೂ ಕೂಡ ಜಾನುವಾರುಗಳಿಗೆ ಚಿಕಿತ್ಸೆ ಸಿಗದೇ ಜಾನುವಾರಗಳು ನರಳಾಡುವಂತಹ ಪರಸ್ಥಿತಿ ಎದುರಾಗಿದೆ.

ಬೆಳ್ಳಂಬೆಳಿಗ್ಗೆ ಲೋಕಾ ರೈಡ್; ಗದಗ ನಗರಸಭೆ ಎಇಇ ಬಂಡಿವಡ್ಡರ ಸೇರಿ ರಾಜ್ಯದ 8 ಅಧಿಕಾರಿಗಳ ಮನೆ, ಕಛೇರಿ ಮೇಲೆ ದಾಳಿ..!

ಉತ್ತರಪ್ರಭ, ಗದಗ :ಇಂದು ಬುಧವಾರ ಬೆಳ್ಳಂಬೆಳಿಗ್ಗೆ ರಾಜ್ಯಾದ  ಗದಗ, ಬಳ್ಳಾರಿ, ಬೀದರ, ಬೆಂಗಳೂರು, ರಾಯಚೂರು, ಬೆಳಗಾವಿ,…