ಬೆಂಗಳೂರು: ಹೊಸದಾಗಿ ನೇಮಕಗೊಂಡಿರುವ 715 ಹಿರಿಯ ತಜ್ಞರು ಮತ್ತು 1,048 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಬುಧವಾರ ಆರೋಗ್ಯ ಸಚಿವ ಕೆ.ಸುಧಾಕರ್ ಸ್ವಾಗತ ಕೋರಿದ್ದಾರೆ. ರಾಜ್ಯಾದ್ಯಂತ ಖಾಲಿ ಇರುವ ಹುದ್ದೆಗಳಿಗೆ ನೇಮಕಗೊಳ್ಳುತ್ತಿರುವ ತಜ್ಞರು, ವೈದ್ಯರಲ್ಲದೆ ಇಲಾಖೆಯ ಹಿರಿಯ ಅಧಿಕಾರಿಗಳು, ಎಲ್ಲಾ ಜಿಲ್ಲೆಗಳ ಡಿಎಚ್ ಒ, ಟಿಎಚ್ ಒಗಳು ವರ್ಚುವಲ್ ವೇದಿಕೆ ಮೂಲಕ ಈ ವಿಶೇಷ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದಾರೆ. ಭಾಷಣದಲ್ಲಿ ಹೊಸದಾಗಿ ನೇಮಕಗೊಂಡ ಎಲ್ಲರಿಗೂ ವೃತ್ತಿ ಘನತೆ ಎತ್ತಿ ಹಿಡಿಯುವಂತೆ ಮಾನವೀಯ ನೆಲೆಯಲ್ಲಿ ಕಾರ್ಯ ನಿರ್ವಹಿಸಲು ಸಚಿವ ಸುಧಾಕರ್ ಕರೆ ನೀಡಿದ್ದಾರೆ.
You May Also Like
ಶಿರಹಟ್ಟಿ ಮಾಬುಸುಬಾನಿ ಉರುಸು ರದ್ದು
ಮಾಬುಸುಬಾನಿ ಉರುಸು ರದ್ದು ಪಟ್ಟಣದಲ್ಲಿ ಭಾವೈಕ್ಯತೆ ಸಂಕೇತವಾಗಿದ್ದ ಹಜರತ್ ಮೆಹಬೂಬ ಸುಬ್ಹಾನಿ(ರಹ) ದರ್ಗಾದ ಉರುಸು ಈ ಬಾರಿ ಕೊರೊನಾದಿಂದ ರದ್ದುಗೊಳಿಸಲಾಗಿದೆ. ಉರುಸು ನಿಮಿತ್ಯ ನವೆಂಬರ್ 25 ರಿಂದ 27ರವರೆಗೆ ನಡೆಯಬೇಕಿದ್ದ ಎಲ್ಲ ಕಾರ್ಯಕ್ರಮಗಳನ್ನು ಸರ್ಕಾರದ ನಿಯಮದಂತೆ ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ ಆದೇಶದ ಪ್ರಕಾರ ರದ್ದುಗೊಳಿಸಲಾಗಿದೆ.
- ಉತ್ತರಪ್ರಭ
- November 23, 2020