ಬೆಂಗಳೂರು: ಈಗಾಗಲೇ ಲಾಕ್ ಡೌನ್ ಹಿನ್ನೆಲೆ ಸಿನಿಮಾ ಕಾರ್ಮಿಕರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಇದರಿಂದ ನಟ ಯಶ್ ಕನ್ನಡ ಚಿತ್ರರಂಗದ 3000 ಕಾರ್ಮಿಕರಿಗೆ ತಲಾ 5000 ನೀಡುವುದಾಗಿ ಘೋಷಿಸಿದ್ದಾರೆ. ಈ ಕುರಿತು ಸೋಶಿಯಲ್ ಮಿಡಿಯಾದಲ್ಲಿ ಘೋಷಣೆ ಮಾಡಿರುವ ಯಶ್, ಯಶ್ ಅಭಿಮಾನಿಗಳಿಗೂ ಖುಷಿ ತಂದಿದೆ.
ಹಾಗಾಗಿ ಚಿತ್ರರಂಗದ 21 ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 3,000ಕ್ಕೂ ಹೆಚ್ಚಿರುವ ನಮ್ಮ ಸಿನಿಮಾ ಕಲಾವಿದರು, ತಂತ್ರಜ್ಞರು, ಕಾರ್ಮಿಕರ ಅಧಿಕೃತ ಖಾತೆಗಳಿಗೆ ತಲಾ 5 ಸಾವಿರ ಹಣವನ್ನ ತನ್ನ ಸಂಪಾದನೆಯ ಹಣದಿಂದ ಭರಿಸಲು ನಿರ್ಧರಿಸಿದ್ದೇನೆ. ಈ ಸಣ್ಣ ಸಹಾಯ ಈಗ ಎದುರಾಗಿರುವ ಎಲ್ಲ ಕಷ್ಟಗಳಿಗೂ ಪರಿಹಾರ ಎಂಬುವುದು ನನ್ನ ಭಾವನೆಯಲ್ಲ. ಬದಲಿಗೆ ಶಕ್ತಿ ಇರುವ ಹೃದಯವಂತರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಸಂಕಷ್ಟದಲ್ಲಿರುವ ಜನಸಮುದಾಯದ ಜೊತೆ ಹೆಗಲಿಗೆ ಹೆಗಲು ಕೊಟ್ಟು ನಿಂತು ಸಹಾಯ ಮಾಡಿದರೆ, ನಾನು ಮಾಡಿದ ಪ್ರಯತ್ನಕ್ಕೂ ಸಾರ್ಥಕತೆ ಬರುತ್ತದೆ ಎನ್ನುವುದು ನನ್ನ ಆಶಯ’ ಎಂದು ಸೋಶಿಯಲ್ ಮಿಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ತಲಾ 5000 ರಂತೆ 3000 ಕಾರ್ಮಿಕರಿಗೆ ಅಂದರೆ ಒಂದೂವರೆ ಕೋಟಿ ರೂಪಾಯಿ ಆಗಲಿದೆ.

Leave a Reply

Your email address will not be published. Required fields are marked *

You May Also Like

ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣು!

ಬೀದರ್: ಕ್ವಾರಂಟೈನ್ ನಲ್ಲಿದ್ದ ಯುವಕನೊಬ್ಬ ಇಂದು ಬೆಳಗ್ಗಿನ ಜಾವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಔರಾದ್…

ರೈತ ವಿರೋಧಿ ಕಾಯ್ದೆಗಳು ತಕ್ಷಣವೇ ರದ್ದು ಮಾಡಿ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತರಿಗೆ ಮಾರಕವಾಗಿರುವ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಗುರುವಾರ ರೈಲ್ ರೋಕೋ ಚಳುವಳಿಯನ್ನು ಮಾಡುವ ಮೂಲಕ ರೈತರು ಪ್ರತಿಭಟನೆ ನಡೆಸಿದರು.

ರಾಷ್ಟಪತಿ ಭಾಷಣಕ್ಕೆ ಬಹಿಷ್ಕರಿಸಲು 16 ವಿಪಕ್ಷಗಳಿಂದ ನಿರ್ಧಾರ

ನಾಳೆಯಿಂದ ಅಧಿವೇಶನ ಸಂಸತ್‌ ಬಜೆಟ್‌ ಆರಂಭವಾಗಲಿದ್ದು, ಕೇಂದ್ರದ ನೂತನ ಕೃಷಿ ಮಸೂದೆಗಳನ್ನ ವಿರೋಧಿಸಿ ರಾಷ್ಟ್ರಪತಿಗಳ ಭಾಷಣ ಬಹಿಷ್ಕರಿಸಲು ನಿರ್ಧರಿಸಿರುವುದಾಗಿ ಗುಲಾಂ ನಬಿ ಹೇಳಿದ್ದಾರೆ.

ಅಸ್ವಸ್ಥಗೊಂಡ ರಾಘವೇಂದ್ರ ರಾಜ್‌ಕುಮಾರ್ ಆಸ್ಪತ್ರೆಗೆ ದಾಖಲು

ನಟ ರಾಘವೇಂದ್ರ ರಾಜ್‌ಕುಮಾರ್ ಅವರು ಮಂಗಳವಾರ ಸಂಜೆ ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.