ಬೆಂಗಳೂರು: ಈಗಾಗಲೇ ಲಾಕ್ ಡೌನ್ ಹಿನ್ನೆಲೆ ಸಿನಿಮಾ ಕಾರ್ಮಿಕರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಇದರಿಂದ ನಟ ಯಶ್ ಕನ್ನಡ ಚಿತ್ರರಂಗದ 3000 ಕಾರ್ಮಿಕರಿಗೆ ತಲಾ 5000 ನೀಡುವುದಾಗಿ ಘೋಷಿಸಿದ್ದಾರೆ. ಈ ಕುರಿತು ಸೋಶಿಯಲ್ ಮಿಡಿಯಾದಲ್ಲಿ ಘೋಷಣೆ ಮಾಡಿರುವ ಯಶ್, ಯಶ್ ಅಭಿಮಾನಿಗಳಿಗೂ ಖುಷಿ ತಂದಿದೆ.
ಹಾಗಾಗಿ ಚಿತ್ರರಂಗದ 21 ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 3,000ಕ್ಕೂ ಹೆಚ್ಚಿರುವ ನಮ್ಮ ಸಿನಿಮಾ ಕಲಾವಿದರು, ತಂತ್ರಜ್ಞರು, ಕಾರ್ಮಿಕರ ಅಧಿಕೃತ ಖಾತೆಗಳಿಗೆ ತಲಾ 5 ಸಾವಿರ ಹಣವನ್ನ ತನ್ನ ಸಂಪಾದನೆಯ ಹಣದಿಂದ ಭರಿಸಲು ನಿರ್ಧರಿಸಿದ್ದೇನೆ. ಈ ಸಣ್ಣ ಸಹಾಯ ಈಗ ಎದುರಾಗಿರುವ ಎಲ್ಲ ಕಷ್ಟಗಳಿಗೂ ಪರಿಹಾರ ಎಂಬುವುದು ನನ್ನ ಭಾವನೆಯಲ್ಲ. ಬದಲಿಗೆ ಶಕ್ತಿ ಇರುವ ಹೃದಯವಂತರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಸಂಕಷ್ಟದಲ್ಲಿರುವ ಜನಸಮುದಾಯದ ಜೊತೆ ಹೆಗಲಿಗೆ ಹೆಗಲು ಕೊಟ್ಟು ನಿಂತು ಸಹಾಯ ಮಾಡಿದರೆ, ನಾನು ಮಾಡಿದ ಪ್ರಯತ್ನಕ್ಕೂ ಸಾರ್ಥಕತೆ ಬರುತ್ತದೆ ಎನ್ನುವುದು ನನ್ನ ಆಶಯ’ ಎಂದು ಸೋಶಿಯಲ್ ಮಿಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ತಲಾ 5000 ರಂತೆ 3000 ಕಾರ್ಮಿಕರಿಗೆ ಅಂದರೆ ಒಂದೂವರೆ ಕೋಟಿ ರೂಪಾಯಿ ಆಗಲಿದೆ.

Leave a Reply

Your email address will not be published. Required fields are marked *

You May Also Like

ಬೆಳ್ಳಿ ತೆರೆಯ ಕಾರ್ಮಿಕರಿಗೆ ವಿಶೇಷ ಕೊಡುಗೆ!

ಬೆಳ್ಳೆ ತೆರೆಯ ಹಿಂದೆ ದುಡಿದಿರುವ ಎಲ್ಲ ಕಾರ್ಮಿಕರಿಗೂ ಗೌರವ ಸಲ್ಲಿಸುವ ನಿಟ್ಟಿನಲ್ಲಿ ರಾಬರ್ಟ್ ಚಿತ್ರ ತಂಡ ಮೇಕಿಂಗ್ ವಿಡಿಯೋ ಒಂದನ್ನು ಬಿಡುಗಡೆ ಮಾಡಿದೆ.

ಮೃತ ದೇಹದಲ್ಲೆಷ್ಟು ದಿನ ಬದುಕಿರುತ್ತೆ ಕೊರೋನಾ ವೈರಸ್..?

ಹೊಸದೆಹಲಿ: ಇಲ್ಲಿನ ಏಮ್ಸ್‌ ಆಸ್ಪತ್ರೆಯ ವೈದ್ಯರು ಹೊಸ ಅಧ್ಯಯನ ಮಾಡಲು ಮುಂದಾಗಿದ್ದಾರೆ.ಕರೋನಾ ವೈರಸ್‌ ಮೃತ ಶರೀರದಲ್ಲಿ…

ನಟಿ ಜಸ್ಲೀನ್ ಅವತಾರಕ್ಕೆ ನೆಟ್ಟಿಗರು ಶಾಕ್!

ಸೆಲೆಬ್ರಟಿಗಳಿಗೆ ಅದೆಂತೆಂಥಾ ಹುಚ್ಚಿರುತ್ತೆ ಅಂತ ಊಹಿಸೋಕು ಆಗಲ್ಲ. ಪ್ರಚಾರಕ್ಕಾಗಿ ಎಂತೆಂಥ ಚಿತ್ರವಿಚಿತ್ರ ಅವತಾರ ತಾಳುತ್ತಾರೆ ಅಂತ ಕಲ್ಪನೆಗೂ ಅಸಾಧ್ಯ. ಇಂತಹ ಪ್ರಚಾರದ ಗೀಳಿಗೆ ಬಿದ್ದ ನಟಿಯೊಬ್ಬರು ಇದೀಗ ನೆಟ್ಟಿಗರಿಗೆ ಶಾಕ್ ಕೊಟ್ಟಿದ್ದಾರೆ.

ಕತ್ತಿ ವರಸೆಗೆ ಶಾಕ್ ಕೊಟ್ರು ಸಿಎಂ..!

ಇತ್ತೀಗಷ್ಟೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ಶಾಸಕ ಉಮೇಶ್ ಕತ್ತಿ, ಡಿನ್ನರ್ ಪಾಲಿಟಿಕ್ಸ್ ನಡೆಸಿದ್ರು. ಇದರಲ್ಲಿ ಕೆಲವು ಅತೃಪ್ತ ಶಾಸಕರು ಭಾಗವಹಿಸಿದ್ದು ಬಿಜೆಪಿಯಲ್ಲಿ ಕುಚ್… ಕುಚ್ ಹೋ ರಹಾ ಹೈ ಎಂಬ ಚರ್ಚೆಗೆ ಮುನ್ನುಡಿ ಬರೆದಿತ್ತು. ಉಮೇಶ್ ಕತ್ತಿ ಮನೆಯಲ್ಲಿ ಶೀಕರಣಿ ಊಟದ ರಾಜಕಾರಣದ ಬೆನ್ನಲ್ಲೆ ಸಿಎಂ ಬಿಎಸ್ವೈ ಪರ ಹಾಗೂ ವಿರೋಧ ಚರ್ಚೆಗಳು ನಡೆದವು. ಇದು ಸ್ವತ: ಸಿಎಂ ಯಡಿಯೂರಪ್ಪ ಅವರಿಗೂ ಮುಜುಗುರ ತಂದಿರಬಹುದು. ಆದರೆ ಬಿಎಸ್ವೈ ಹೈಕಮಾಂಡ್ ಮಟ್ಟದಲ್ಲಿ ಇನ್ನು ಪವರ್ ಫುಲ್ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಇದಕ್ಕೆ ಇಂದು ಜಿಲ್ಲಾ ಉಸ್ತುವಾರಿ ಸಚಿವರ ನೇಮಕವೇ ಸಾಕ್ಷಿಯಾಗಿದೆ.