ಗದಗ: ಕಳ್ಳಭಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಲಾಕ್ ಡೌನ್ ಸಮಯವನ್ನೇ ಬಂಡವಾಳ ಮಾಡಿಕೊಂಡು ಕಳ್ಳಭಟ್ಟಿ ಮಾರುತ್ತಿದ್ದ ಆರೋಪಿ ಬಂಧಿಸಿದ್ದಾರೆ.

ಗದಗ ಸಮೀಪದ ಮಲ್ಲಸಮುದ್ರ ಗ್ರಾಮದ ಹೊರವಲಯದಲ್ಲಿ ನಡೆಯುತ್ತಿದ್ದ ಕಳ್ಳಭಟ್ಟಿ ದಂಧೆಯ ಖಚಿತ ಮಾಹಿತಿ ಪಡೆದು ಎಸ್ಪಿ ಯತೀಶ್ ಎನ್, ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ ಕಳ್ಳಭಟ್ಟಿ ಸಂಗ್ರಹಿಸಿದ್ದ ಆರೋಪಿ ರಾಜು ಮಾಂತೇಶ್ ಚೌವ್ಹಾಣ್ ನನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿ ರಾಜು ಧಾರವಾಡ ಜಿಲ್ಲೆಯ ಅಣ್ಣಿಗೇರಿ ಗ್ರಾಮದಿಂದ ಹೆಂಡ ತಂದು ಮಾರುತ್ತಿದ್ದ ಎನ್ನಲಾಗಿದ್ದು, ಮಲ್ಲಸಮುದ್ರ ಗ್ರಾಮದ ಪಾಳು ಮನೆಯಲ್ಲಿ ಮಾರಾಟ ಮಾಡುತ್ತಿದ್ದ ವೇಳೆ ಸಿಕ್ಕಿ ಬಿದ್ದಿದ್ದಾನೆ. ದಾಳಿ ವೇಳೆ ಆರೋಪಿಯಿಂದ 10 ಲೀಟರ್ ಕಳ್ಳಭಟ್ಟಿ ಸಾರಾಯಿ, ಸಾಮಾಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ, ಗ್ರಾಮಾಂತರ ಪಿಎಸ್ ಐ ರವಿಕುಮಾರ್ ಕಪ್ಪತ್ತನವರ್ ಸೇರಿದಂತೆ ಸಿಬ್ಬಂದಿಯಿಂದ ದಾಳಿ ನಡೆದಿದೆ.

Leave a Reply

Your email address will not be published. Required fields are marked *

You May Also Like

ವಾರಂಟಿಯೇ ಇಲ್ಲದ ಮೇಲೆ ಗ್ಯಾರಂಟಿ ಹೇಗೆ ?
ಕಾಂಗೈ ಕಾಡ್೯ ಠುಸ್ಸು ಪರಸ್ಥಿತಿ ಈಗ ಬಲು ದುಸ್ಥಿತಿ ಸಿ.ಟಿ.ರವಿ ವ್ಯಂಗ್ಯ

ಆಲಮಟ್ಟಿ: ಕಾಂಗ್ರೆಸ್ ಪಕ್ಷ ರಾಜ್ಯದ ಜನತೆಗೆ ಭರಪೂರ ಸುಳ್ಳು ಭರವಸೆ ನೀಡುತ್ತಿದ್ದು, ಆ ಪಕ್ಷದ ವಾರಂಟಿಯೇ…

ತಮ್ಮ ಊರುಗಳತ್ತ ಮುಖ ಮಾಡಿದ ಬೆಂಗಳೂರಿಗರು – ಎಲ್ಲೆಡೆ ಟ್ರಾಫಿಕ್ ಜಾಮ್!

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸ್ಫೋಟವಾಗುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ನಾಳೆ ಕರ್ಫ್ಯೂ…

ಗರಿಷ್ಠ ಮಟ್ಟದಲ್ಲಿ ನೀರು ಸಂಗ್ರಹ: ಒಂದು ವರ್ಷ ಕಾಲ ಕುಡಿಯುವ ನೀರಿಗೆ ಸಮಸ್ಯೆ ಅಗದು- ಸಚಿವ ಸಿ.ಸಿ.ಪಾಟೀಲ

ಆಲಮಟ್ಟಿ: ಆಲಮಟ್ಟಿ ಜಲಾಶಯದಲ್ಲಿಗ ಕಳೆದ ವರ್ಷಕ್ಕಿಂತಲೂ ಈ ಬಾರಿ ಈ ವೇಳೆ ಗರಿಷ್ಠ ಮಟ್ಟದಲ್ಲಿ ನೀರು…

ಪೋಷಕರ ಕಣ್ಣ ಮುಂದೆಯೇ ಆತ್ಮಹತ್ಯೆಗೆ ಶರಣಾದ ಯುವತಿ!

ವಿಜಯಪುರ : ಪೋಷಕರ ಎದುರೇ ಯುವತಿ ಭೀಮಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಕರುಳು ಹಿಂಡುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.