ಗದಗ: ಕಳ್ಳಭಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಲಾಕ್ ಡೌನ್ ಸಮಯವನ್ನೇ ಬಂಡವಾಳ ಮಾಡಿಕೊಂಡು ಕಳ್ಳಭಟ್ಟಿ ಮಾರುತ್ತಿದ್ದ ಆರೋಪಿ ಬಂಧಿಸಿದ್ದಾರೆ.

ಗದಗ ಸಮೀಪದ ಮಲ್ಲಸಮುದ್ರ ಗ್ರಾಮದ ಹೊರವಲಯದಲ್ಲಿ ನಡೆಯುತ್ತಿದ್ದ ಕಳ್ಳಭಟ್ಟಿ ದಂಧೆಯ ಖಚಿತ ಮಾಹಿತಿ ಪಡೆದು ಎಸ್ಪಿ ಯತೀಶ್ ಎನ್, ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ ಕಳ್ಳಭಟ್ಟಿ ಸಂಗ್ರಹಿಸಿದ್ದ ಆರೋಪಿ ರಾಜು ಮಾಂತೇಶ್ ಚೌವ್ಹಾಣ್ ನನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿ ರಾಜು ಧಾರವಾಡ ಜಿಲ್ಲೆಯ ಅಣ್ಣಿಗೇರಿ ಗ್ರಾಮದಿಂದ ಹೆಂಡ ತಂದು ಮಾರುತ್ತಿದ್ದ ಎನ್ನಲಾಗಿದ್ದು, ಮಲ್ಲಸಮುದ್ರ ಗ್ರಾಮದ ಪಾಳು ಮನೆಯಲ್ಲಿ ಮಾರಾಟ ಮಾಡುತ್ತಿದ್ದ ವೇಳೆ ಸಿಕ್ಕಿ ಬಿದ್ದಿದ್ದಾನೆ. ದಾಳಿ ವೇಳೆ ಆರೋಪಿಯಿಂದ 10 ಲೀಟರ್ ಕಳ್ಳಭಟ್ಟಿ ಸಾರಾಯಿ, ಸಾಮಾಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ, ಗ್ರಾಮಾಂತರ ಪಿಎಸ್ ಐ ರವಿಕುಮಾರ್ ಕಪ್ಪತ್ತನವರ್ ಸೇರಿದಂತೆ ಸಿಬ್ಬಂದಿಯಿಂದ ದಾಳಿ ನಡೆದಿದೆ.

Leave a Reply

Your email address will not be published. Required fields are marked *

You May Also Like

ಲಕ್ಷ್ಮೇಶ್ವರ : ಶೇಂಗಾ ಬಣವಿಗೆ ಬೆಂಕಿ ಲಕ್ಷಾಂತರ ಹಾನಿ

ಲಕ್ಷ್ಮೇಶ್ವರ: ಶೇಂಗಾ ಬಣವಿಗೆ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ರೂಪಾಯಿ ಹಾನಿಗೊಳಗಾದ ರೈತ ಕಂಗಾಲಾಗುವಂತಾಗಿದೆ.

ದಿಶಾ ರವಿ ಪರ ಧ್ವನಿಯೆತ್ತುವ ಅಗತ್ಯವಿದೆ

ಟೂಲ್‌ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಶಾ ರವಿ ಬಂಧನವನ್ನು ಸಾಮಾಜಿಕ ಜಾಲತಾಣದ ಮೂಲಕ ನಟಿ ರಮ್ಯಾ ವಿರೋಧಿಸಿದ್ದಾರೆ. 21 ವರ್ಷದ ಪರಿಸರ ಕಾರ್ಯಕರ್ತೆ ದಿಶಾ ರವಿ ಜೈಲಿನಲ್ಲಿದ್ದಾರೆ. ಇದಕ್ಕೆ ನಾವೆಲ್ಲರು ಸಾಮೂಹಿಕವಾಗಿ ಜವಾಬ್ದಾರರಾಗುತ್ತೇವೆ. ಬಹಳ ದಿನಗಳಿಂದ ಇಂತಹ ಅನ್ಯಾಯವನ್ನು ಮೂಕ ಪ್ರೇಕ್ಷಕರಾಗಿ ನೋಡುತ್ತಿದ್ದೇ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಪಾರದರ್ಶಕ ಕನ್ನಡ ಸಾಹಿತ್ಯ ಪರಿಷತ್ತು ನಿರ್ಮಾಣವೇ ನನ್ನ ಗುರಿ : ರಾಜಶೇಖರ ಮುಲಾಲಿ

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಬ್ರಷ್ಟಾಚಾರ ಬೇರೂರಿದ್ದು, ಸಂಪೂರ್ಣವಾಗಿ ತೊಡೆದು ಹಾಕು ಕೆಲಸವಾಗಬೇಕಿದೆ. ಆದ್ದರಿಂದ ಈ ಬಾರಿ ಕರ್ನಾಟಕ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಗೆ ಉತ್ತರ ಕರ್ನಾಟಕದಿಂದ ನಾನು ಕೂಡ ಸ್ಪರ್ಧಿಸಲಿದ್ದೇನೆ ಎಂದು ಅಣ್ಣಾ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ, ಭ್ರಷ್ಟಾಚಾರ ವಿರೋಧಿ ಮತ್ತು ಸಾಮಾಜಿ ಹೋರಾಟಗಾರ ರಾಜಶೇಖರ ಮುಲಾಲಿ ಹೇಳಿದರು.

ಅ.25ರಂದು ನೀಲಾನಗರ ದುರ್ಗಾದೇವಿ ಜಾತ್ರೆ ಸರಳವಾಗಿ ಆಚರಣೆ

ಸಮೀಪ ನೀಲಾನಗರದ ದುರ್ಗಾದೇವಿ ಜಾತ್ರೆಯನ್ನು ಸರಳವಾಗಿ ಆಚರಣೆ ಮಾಡಲಾಗುವುದು ಎಂದು ಬಂಜಾರ ಪೀಠಾಧಿಪತಿ ಕುಮಾರ ಮಹಾರಾಜ ತಿಳಿಸಿದರು.