ರೋಣ: ನಗರದ ಬಸ್ ನಿಲ್ದಾಣದ ಹತ್ತಿರ ಬೀಡು ಬಿಟ್ಟಿರುವ ಕೋತಿಗಳಿಗೆ ಬಾಳೆ ಹಣ್ಣು ನೀಡುವ ಮೂಲಕ ಎಎಸ್ಐ ಒಬ್ಬರೂ ಮಾನವೀಯತೆ ಮೆರೆದ ಘಟನೆ ರೋಣದಲ್ಲಿ ನಡೆದಿದೆ.

ಲಾಕ್ ಡೌನ್ ನಿಂದಾಗಿ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಬಾಯಿದ್ದವರೇ ಸಂಕಷ್ಟದಲ್ಲಿರುವಾಗ ಇನ್ನು ಮೂಕ ಪ್ರಾಣಿಗಳ ವೇದನೆ ಹೇಳತೀರದು. ರೋಣ ಪಟ್ಟಣದ ಬಸ್ ನಿಲ್ದಾಣದ ಬಳಿ ನೀರು ಆಹಾರವಿಲ್ಲದೇ ನಿತ್ರಾಣವಾಗಿರುವ ಕೋತಿಗಳಿಗೆ ಆಹಾರ ನೀಡುವ ಮೂಲಕ ಇಲ್ಲಿನ ಎಎಸ್ಐ ಸರ್ವಿ ಕೋತಿಗಳ ಹಸಿವಿಗೆ ಮಿಡಿದಿದ್ದಾರೆ. ಈ ಮೂಲಕ ಖಾಕಿಯೊಳಗಿನ ಅಂತಕರಣದ ಮನಸ್ಸು ಜನರ ಮೆಚ್ಚುಗೆಗೆ ಕಾರಣವಾಗಿದೆ.

ರೋಣ ಠಾಣೆಯ ಎಎಸ್ಐ ಸರ್ವಿ ಕೋತಿಗಳಿಗೆ ಬಾಳೆ ಹಣ್ಣು, ಬಿಸ್ಕೀಟ್, ನೀರಿನ ಬಾಟಲಿಗಳನ್ನು ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಕರೊನಾ ಸಂಕಷ್ಟದ ಕಾಲದಲ್ಲಿಯೂ ಒತ್ತಡದ ಕೆಲಸದ ಮಧ್ಯದಲ್ಲಿಯೂ ಇಂತಹ ಜನಪರ, ಜೀವಪರ ಕಾರ್ಯಗಳಿಗೆ ಮೀಡಿಯುತ್ತಿರುವ ಈ ಪೊಲೀಸಪ್ಪನ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.ಅನೇಕ ಸಂಘ ಸಂಸ್ಥೆಯವರು ಅದೆಷ್ಡೋ ಕಡೆಗಳಲ್ಲಿ ಹಸಿದ ಹೊಟ್ಟೆಗೆ ಅನ್ನ ನೀಡಿ ಮಾನವೀಯತೆ ಪ್ರದರ್ಶಿಸಿದ್ದಾರೆ. ಆದರೆ ಇಲ್ಲಿ ಪ್ರಾಣಿಗಳ ಮೇಲೆ ದಯೇ ತೋರಿಸುವ ಮೂಲಕ ಎ.ಎಸ್.ಐ ಸರ್ವಿ ಅವರು ಕಾಳಜಿ ತೋರಿದ್ದು ವಿಶೇಷವಾಗಿದೆ.

Leave a Reply

Your email address will not be published. Required fields are marked *

You May Also Like

ಖಾಸಗಿ‌ ಶಾಲಾ ಶಿಕ್ಷಕರ ನೆರವಿಗೆ ಸರ್ಕಾರಿ ಶಿಕ್ಷಕರಿಗೆ ಮನವಿ

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲೆಯ ಶಿಕ್ಷಕರು ತಮ್ಮ ಒಂದು ಅಥವಾ ಎರಡು ದಿನದ ಸಂಬಳವನ್ನು…

ಗಳಿಕೆ ರಜೆ ನಗದಿಕರಣ ರದ್ದು!

ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ರದ್ದುಗೊಳಿಸುವ ಮೂಲಕ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಕೋವಿಡ್ ಹಿನ್ನೆಲೆ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವುದರಿಂದ ಸರ್ಕಾರ ಈ ತೀರ್ಮಾನ ಕೈಗೊಂಡಿದೆ ಎನ್ನಲಾಗಿದೆ.

ಸಾಮಾಜಿಕ, ಆರ್ಥಿಕ, ಶೈಕ್ಷಣಿಕೆ ಸಮೀಕ್ಷೆ ವರದಿ ಜಾರಿಗೊಳಿಸಿ: ಸಿದ್ದರಾಮಯ್ಯ

ಸಾಮಾಜಿಕ ನ್ಯಾಯದ ಪರವಾಗಿದ್ದೇವೆ ಎಂದು ಬಾಯಿಮಾತಿನಲ್ಲಿ ಹೇಳಿದರೆ ಸಾಲದು, ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಲ್ಲಿಸಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ತಕ್ಷಣ ಜಾರಿಗೊಳಿಸಬೇಕು ಎಂದು ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಅವರನ್ನು ಒತ್ತಾಯಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

ರಾಜ್ಯದಲ್ಲಿ ಕೋವಿಡ್ ಕರ್ಪ್ಯೂ! ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳೇನು?

ಈಗಾಗಲೇ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಲಾಕ್ ಡೌನ್ ಮಾದರಿಯಲ್ಲೆ ರಾಜ್ಯ ಸರ್ಕಾರ ಕೋವಿಡ್ ಕರ್ಪ್ಯೂ ಘೋಷಿಸಿದೆ. ಸಚಿವ ಸಂಪುಟದಲ್ಲಿ ಈ ನಿರ್ಧಾರ ತೆಗೆದುಕೊಂಡು ಇನ್ನು ಹಲವು ನಿರ್ಧಾರಗಳನ್ನು ಸಂಪುಟ ಸಭೆಯಲ್ಲಿ ಸರ್ಕಾರ ತೆಗೆದುಕೊಂಡಿದೆ.