ರೋಣ: ನಗರದ ಬಸ್ ನಿಲ್ದಾಣದ ಹತ್ತಿರ ಬೀಡು ಬಿಟ್ಟಿರುವ ಕೋತಿಗಳಿಗೆ ಬಾಳೆ ಹಣ್ಣು ನೀಡುವ ಮೂಲಕ ಎಎಸ್ಐ ಒಬ್ಬರೂ ಮಾನವೀಯತೆ ಮೆರೆದ ಘಟನೆ ರೋಣದಲ್ಲಿ ನಡೆದಿದೆ.

ಲಾಕ್ ಡೌನ್ ನಿಂದಾಗಿ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಬಾಯಿದ್ದವರೇ ಸಂಕಷ್ಟದಲ್ಲಿರುವಾಗ ಇನ್ನು ಮೂಕ ಪ್ರಾಣಿಗಳ ವೇದನೆ ಹೇಳತೀರದು. ರೋಣ ಪಟ್ಟಣದ ಬಸ್ ನಿಲ್ದಾಣದ ಬಳಿ ನೀರು ಆಹಾರವಿಲ್ಲದೇ ನಿತ್ರಾಣವಾಗಿರುವ ಕೋತಿಗಳಿಗೆ ಆಹಾರ ನೀಡುವ ಮೂಲಕ ಇಲ್ಲಿನ ಎಎಸ್ಐ ಸರ್ವಿ ಕೋತಿಗಳ ಹಸಿವಿಗೆ ಮಿಡಿದಿದ್ದಾರೆ. ಈ ಮೂಲಕ ಖಾಕಿಯೊಳಗಿನ ಅಂತಕರಣದ ಮನಸ್ಸು ಜನರ ಮೆಚ್ಚುಗೆಗೆ ಕಾರಣವಾಗಿದೆ.

ರೋಣ ಠಾಣೆಯ ಎಎಸ್ಐ ಸರ್ವಿ ಕೋತಿಗಳಿಗೆ ಬಾಳೆ ಹಣ್ಣು, ಬಿಸ್ಕೀಟ್, ನೀರಿನ ಬಾಟಲಿಗಳನ್ನು ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಕರೊನಾ ಸಂಕಷ್ಟದ ಕಾಲದಲ್ಲಿಯೂ ಒತ್ತಡದ ಕೆಲಸದ ಮಧ್ಯದಲ್ಲಿಯೂ ಇಂತಹ ಜನಪರ, ಜೀವಪರ ಕಾರ್ಯಗಳಿಗೆ ಮೀಡಿಯುತ್ತಿರುವ ಈ ಪೊಲೀಸಪ್ಪನ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.ಅನೇಕ ಸಂಘ ಸಂಸ್ಥೆಯವರು ಅದೆಷ್ಡೋ ಕಡೆಗಳಲ್ಲಿ ಹಸಿದ ಹೊಟ್ಟೆಗೆ ಅನ್ನ ನೀಡಿ ಮಾನವೀಯತೆ ಪ್ರದರ್ಶಿಸಿದ್ದಾರೆ. ಆದರೆ ಇಲ್ಲಿ ಪ್ರಾಣಿಗಳ ಮೇಲೆ ದಯೇ ತೋರಿಸುವ ಮೂಲಕ ಎ.ಎಸ್.ಐ ಸರ್ವಿ ಅವರು ಕಾಳಜಿ ತೋರಿದ್ದು ವಿಶೇಷವಾಗಿದೆ.

Leave a Reply

Your email address will not be published. Required fields are marked *

You May Also Like

ಮದ್ಯಕ್ಕೆ ಕೊಡುವ ಪ್ರೋತ್ಸಾಹ ವಿದ್ಯೆಗೆ ನೀಡಿ- ಗುರುಶಾಂತ ಸ್ವಾಮೀಜಿ

ವರದಿ: ಗುಲಾಬಚಂದ ಜಾಧವ ಆಲಮಟ್ಟಿ : ಬಹಳಷ್ಟು ಯುವಕರ ಮನಸ್ಥಿತಿಯಿಂದು ಕೆಟ್ಟು ಹೋಗುತ್ತಲ್ಲಿದೆ. ದುಷ್ಚಟಗಳ ದಾಸರಾಗಿ…

ಹಿರೇದುರ್ಗಾದೇವಿ ಜಾತ್ರಾ ಮಹೋತ್ಸವ

ಪಟ್ಟಣದ ಅದಿ ದೇವತೆ ಶ್ರೀ ಹಿರೇದುರ್ಗಾದೇವಿ ಜಾತ್ರಾ ಮಹೋತ್ಸವ ಫೆ.10 ರಂದು ನಡೆಯಲಿದೆ.

ಸ್ವಪ್ನ ಸುಂದರಿ ಸಾಗಿಸಿದ್ದು 30 ಅಲ್ಲ, 180 ಕೆಜಿ ಚಿನ್ನವಂತೆ!

ಯುಎಇಯಿಂದ 30 ಕೆಜಿ ಚಿನ್ನ ಸಾಗಿಸಿದ ಆರೋಪ ಎದುರಿಸುತ್ತಿರುವ ಸ್ವಪ್ನ ಟೀಮ್ ಇದೇ ಮಾದರಿಯಲ್ಲಿ ಒಟ್ಟು 180 ಕೆಜಿ ಚಿನ್ನ ಸಾಗಿಸಿದೆ ಎನ್ನಲಾಗಿದೆ.ಯುಎಇಯಿಂದ ಕೇರಳಕ್ಕೆ 30 ಕೆಜಿ ಚಿನ್ನವನ್ನು

ಮೃತ ಎಂದು ಶವಾಗಾರಕ್ಕೆ ಹೋಗಿ ಬದುಕಿ ಬಂದಿದ್ದ ಬಾಗಲಕೋಟೆ ಯುವಕ ಸಾವು

ಕೆಲ ದಿನಗಳ ಹಿಂದೆ ಜೀವ ಇರುವಾಗಲೇ ಯುವಕನ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿದ್ದ ಮಹಾ ಎಡವಟ್ಟೊಂದು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಸರ್ಕಾರಿ ಆಸ್ಪತ್ರೆಯ ವೈದ್ಯರಿಂದ ನಡೆದಿತ್ತು.