ಹಾವೇರಿ: ಕೊರೋನಾ ಸಾಂಕ್ರಾಮಿಕ ಸೋಂಕಾಗಿದ್ದು,ಕೊರೊನಾ ಸೋಂಕು ಬಂದಿದೆ ಎಂದು ಹೇಳಲು ಯಾರೂ ಮುಜುಗರಪಡುವುದಾಗಲೀ ನಾಚಿಕೆ ಪಡುವುದಾಗಲೀ ಮಾಡಬಾರದು ಎಂದಯ ಕೃಷಿ ಸಚಿವರೂ ಆಗಿರುವ ಹಿರೇಕೆರೂರು ಮತಕ್ಷೇತ್ರದ ಶಾಸಕ ಬಿ.ಸಿ.ಪಾಟೀಲ್ ಕರೆ ನೀಡಿದ್ದಾರೆ.

ಹಿರೇಕೆರೂರು ಮತಕ್ಷೇತ್ರದ ವರಹ ಗ್ರಾಮದಲ್ಲಿ ಕೋವಿಡ್ 19 ಸೋಂಕಿನಿಂದ ಮೃತಪಟ್ಟ, ಮೋಹನ್ ಮರಿಗೌಡರ್ (ವಕಿಲರು),  ದಾನಪ್ಪ ಹುಲ್ಲಣ್ಣನವರ ಹಾಗೂ ಬಸಪ್ಪ ಹನುಮಂತಪ್ಪ ನಂದಿಹಳ್ಳಿ ಇವರ ಕುಟುಂಬಗಳಿಗೆ ವೈಯಕ್ತಿಕವಾಗಿ ತಲಾ 50 ಸಾವಿರ ರೂಪಾಯಿಗಳ  ಸಹಾಯಧನ ನೀಡಿದರು. ಹಾಗೂ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಗ್ರಾಮಸ್ಥರನ್ನುದ್ದೇಶಿಸಿ ಮಾತನಾಡಿದ ಬಿ.ಸಿ.ಪಾಟೀಲ್,ಸೋಂಕಿಗೆ ನಾಚಿಕೆಯಾಗಲೀ ಅಂಜಿಕೆಯಾಗಲೀ ಇರುವುದಿಲ್ಲ.ಜಾಗೃತಿ, ಕಾಳಜಿ,ಸ್ವಚ್ಛತೆಯ ಜೊತೆಗೆ ಸಾಮಾಜಿಕ ಅಂತರ ಮುಖ್ಯ.ಸೋಂಕನ್ನು ತಡೆಯಲು ಇನ್ನೊಬ್ಬರಿಗೆ ಪಸರಿಸದಂತೆ ನೋಡಿಕೊಳ್ಳಬೇಕು.ಈ ಬಗ್ಗೆ ಸ್ವಯಂ ಜಾಗೃತಿ ಜೊತೆಗೆ ಎಲ್ಲರಿಗೂ ಜಾಗೃತಿ ಮೂಡಿಸಬೇಕೇ ವಿನಹ: ಸೋಂಕಿನ ಲಕ್ಷಣಗಳು ಕಂಡುಬಂದರೆ ಹೆದರಿಯೋ ಭಯಬಿದ್ದೋ ಅಥವಾ ಇನ್ಯಾವುದೋ ಮೌಢ್ಯವನ್ನು ನಂಬಿ ಸುಮ್ಮನೆ ಇರುವುದಿಲ್ಲ‌.ಸೋಂಕಿಗೆ ಸೂಕ್ತ ಚಿಕಿತ್ಸೆ ಪಡೆಯಲು ಸೋಂಕು ಬಂದಿದೆಯೆಂದು ಹೇಳಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಯಾವುದೇ ಕಾರಣಕ್ಕೂ ಹಿಂದೇಟು ಹಾಕಬಾರದು. ನನ್ನ ಕ್ಷೇತ್ರದ ಜನತೆಯ ಜೊತೆಗೆ ನಾನು ಸದಾ ಇದ್ದೇ ಇರುತ್ತೇನೆ ಎಂದು ಬಿ‌.ಸಿ.ಪಾಟೀಲ್ ಸ್ಫೂರ್ತಿಯ ಮಾತುಗಳನ್ನಾಡಿದರು.

Leave a Reply

Your email address will not be published. Required fields are marked *

You May Also Like

ಕಾರ್ಮಿಕರ ಮುಷ್ಕರ ಹಿನ್ನೆಲೆ ಲಕ್ಷ್ಮೇಶ್ವರದಲ್ಲಿ ಪ್ರತಿಭಟನೆ

ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ರೈತ ವಿರೊಧ ನೀತಿ ಖಂಡಿಸಿ ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ವಿವಿಧ ಕಾರ್ಮಿಕ ಹಾಗೂ ರೈತಪರ ಮತ್ತು ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ರಾಜ್ಯದಲ್ಲಿಂದು 239 ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 239 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 5452…

ಮುಂಡರಗಿ: ಬೈಕ್ ಅಪಘಾತ ಸವಾರ ಸ್ಥಳದಲ್ಲೆ ಸಾವು

ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನಲ್ಲಿ ನಡೆದಿದೆ. ಮುಂಡರಗಿ-ಬೂದಿಹಾಳ ರಸ್ತೆ ಮದ್ಯೆದಲ್ಲಿ ಅಪಘಾತ ಸಂಭವಿಸಿದ್ದು ರಾಮಚಂದ್ರ ಕಮ್ಮಾರ(36) ಸ್ಥಳದಲ್ಲಿಯೇ ಸಾವನ್ನಪ್ಪಿದ ಬೈಕ್ ಸವಾರ. ಮುಂಡರಗಿ ಪೊಲೀಸ್ ಟಾಣಾ ವ್ಯಾಪಿಯಲ್ಲಿ ಘಟನೆ ನಡೆದಿದೆ.

ಕೊರೊನಾ ಹೆಸರಲ್ಲಿ ನಡೆಯುತ್ತಿದೆಯೇ ಲೂಟಿ?

ದಾವಣಗೆರೆ: ಕೊರೊನಾ ಪಾಸಿಟಿವ್ ಎಂದು ಚಿಕಿತ್ಸೆಗೆ ದಾಖಲಾದ ರೋಗಿ ಎಂದು ಹೇಳಲಾದ ವ್ಯಕ್ತಿ ಮತ್ತೊಬ್ಬರೊಂದಿಗೆ ಮೊಬೈಲ್…