ಗದಗ: ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಹಾಗೂ ಜಿಲ್ಲಾ ಅರಣ್ಯ ಇಲಾಖೆ ಇವರ ಸಹಯೋಗದೊಂದಿಗೆ ಜೂ.5ರಂದು ವಿಶಿಷ್ಟ ರೀತಿಯಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಪ್ರೊ. ಬಸವರಾಜ ಎಲ್. ಲಕ್ಕಣ್ಣವರ್, ಕುಲಸಚಿವ

ನಾಗಾವಿ ಬಳಿ ಸ್ಥಾಪಿಸಲ್ಪಟ್ಟ ಗ್ರಾಮೀಣಾಭಿವೃದ್ಧಿ ವಿವಿ ನೂತನ ಕ್ಯಾಂಪಸ್‌ ಅನ್ನು ಹಚ್ಚಹಸಿರು ಕ್ಯಾಂಪಸ್ ಆಗಿ ನಿರ್ಮಿಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ನೂತನ ಕ್ಯಾಂಪಸ್‌ನ ಸಬರಮತಿ ಆಶ್ರಮ, ಸ್ಮೃತಿ ವನ, ಜೀವ ವೈವಿಧ್ಯ ವನ, ಸಸ್ಯ ಶಿಶುಪಾಲನಾ ಕೇಂದ್ರ, ದೇಸಿ ಯೋಜನೆ ಒಳಗೊಂಡು ಹತ್ತು ವಿವಿಧ ಸ್ಥಾನಗಳಲ್ಲಿ 100ಕ್ಕೂ ಅಧಿಕ ಪ್ರಾಧ್ಯಾಪಕರು ಹಾಗೂ ವಿಶ್ವವಿದ್ಯಾಲಯದ ಸಿಬ್ಬಂದಿಯವರು ಸೇರಿ ಏಕಕಾಲದಲ್ಲಿ 500 ಗಿಡಗಳನ್ನು ನೆಟ್ಟು ಬೆಳೆಸುವ ಯೋಜನೆಯನ್ನು ಜೂ.5 ರಂದು ಅನುಷ್ಠಾನಗೊಳಿಸಲಾಗುವುದು. ವಿಶ್ವವಿದ್ಯಾಲಯದಲ್ಲಿ ಪ್ರಸ್ತುತ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಕೋವಿಡ್-19 ಕಾರಣದಿಂದಾಗಿ ಅವರು ತಮ್ಮ ಮನೆಗಳಲ್ಲಿ ವಾಸವಾಗಿರುತ್ತಾರೆ.

ಈ ಕಾರಣದಿಂದ ವಿದ್ಯಾರ್ಥಿಗಳಿಗೆ ಈ ಸತ್ಕಾರ್ಯದಲ್ಲಿ ಭಾಗಿಯಾಗಲು ಪ್ರಯಾಣ ಮಾಡುವುದು ಕಷ್ಟ ಸಾಧ್ಯವಾಗಿದ್ದರಿಂದ ವಿಶ್ವವಿದ್ಯಾಲಯದ ಎಲ್ಲಾ ವಿದ್ಯಾರ್ಥಿಗಳು ತಮ್ಮ ಸ್ಥಾನಗಳಲ್ಲಿ ಕನಿಷ್ಠ ಒಂದು ಸಸಿ ನೆಟ್ಟು, ಸೆಲ್ಫಿ ತೆಗೆದು ವಿಶ್ವವಿದ್ಯಾಲಯದೊಂದಿಗೆ ಹಂಚಿಕೊಳ್ಳುವ “ನನ್ನ ಗಿಡ ನನ್ನ ಉಸಿರು” ಎಂಬ ವಿನೂತನವಾದ ಅಭಿಯಾನವನ್ನು ಹಮ್ಮಿಕೊಂಡಿದೆ. ಈ ಮೂಲಕ  ಈ ವರ್ಷದ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಹಾಗೂ ಅತಿ ವಿಶಿಷ್ಟವಾಗಿ ಆಚರಿಸಲಾಗುವುದು ಹಾಗೂ ವಿಶ್ವವಿದ್ಯಾಲಯವು ಜಿಲ್ಲೆಯಲ್ಲಿ ವಿಶೇಷ ಅಗತ್ಯವುಳ್ಳ 20 ಶಾಲೆಗಳನ್ನು ದತ್ತು ಪಡೆದುಕೊಂಡಿರುತ್ತದೆ. ಈ ಶಾಲೆಗಳ ಪೈಕಿ ಪ್ರಸ್ತುತ 2 ಶಾಲೆಗಳಲ್ಲಿ ಔಷಧ ವನವನ್ನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಬಸವರಾಜ ಎಲ್. ಲಕ್ಕಣ್ಣವರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಪ್ರೊ. ವಿಷ್ಣುಕಾಂತ ಎಸ್. ಚಟಪಲ್ಲಿ, ಕುಲಪತಿ

ಪಂಚವಟಿ ಅಭಿಯಾನ (ಆಕ್ಸಿಜನ್ ಟವರ್)

ಪಂಚವಟಿ ವನದಲ್ಲಿ ಅತಿ ಹೆಚ್ಚು ಆಮ್ಲಜನಕ ಬಿಡುಗಡೆ ಮಾಡುವ ಹತ್ತಿ, ಬನ್ನಿ, ಬೇವು, ಅರಳಿ, ಪತ್ರಿ ಮರಗಳನ್ನೊಳಗೊಂಡಿರುತ್ತದೆ. ಈ ಅಭಿಯಾನವನ್ನು ವಿಶ್ವವಿದ್ಯಾಲಯದ ಸಿಬ್ಬಂದಿಗಳ ಸಹಕಾರದೊಂದಿಗೆ ಸುತ್ತಮುತ್ತಲಿನ ಪ್ರತಿಯೊಂದು ಗ್ರಾಮಗಳಲ್ಲಿ ಅನುಷ್ಠಾನಗೊಳಿಸುವ  ಮಹತ್ವಾಕಾಂಕ್ಷೆಯನ್ನು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವಿಷ್ಣುಕಾಂತ ಎಸ್. ಚಟಪಲ್ಲಿ ಹೊಂದಿದ್ದಾರೆ.

Leave a Reply

Your email address will not be published. Required fields are marked *

You May Also Like

ಮಧುಮಗನ ತಾಯಿಗೆ ಕೊರೊನಾ ಪಾಸಿಟಿವ್ ಮದುವೆ ರದ್ದು

ಬಾಗಲಕೋಟೆ: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು, ನಡೆಯಬೇಕಿದ್ದ ಮದುವೆ ಯನ್ನು ಗುಳೇದಗುಡ್ಡ ತಾಲೂಕು ಆಡಳಿತದ ಅಧಿಕಾರಿಗಳು…

ಡಿಸಿಎಂ ಸವದಿ ಹೇಳಿಕೆಯಿಂಮಹಾರಾಷ್ಟ್ರದಲ್ಲಿ ಮೂಡಿದ ಸಂಚಲನ

ನಮಗೆ ಮುಂಬೈ ಮೇಲೆ ಹಕ್ಕು ಇದೆ. ಮುಂಬೈಯನ್ನು ರಾಜ್ಯಕ್ಕೆ ಸೇರಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಬೇಡಿಕೆ ಇಡಲಿದ್ದು, ಅಲ್ಲಿವರೆಗೂ ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸುವಂತೆ ಒತ್ತಾಯಿಸುವು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.

ಕೆಜಿ “ಬಂಡಿ”ಗೆ ನಾನು ತಮಾಷೆ ಮಾಡಿದ್ದೆ: ಬಿ ಎಸ್ ವೈ ಸ್ಪಷ್ಟನೆ

ಉತ್ತರಪ್ರಭ ಸುದ್ದಿನಾನು ದಿನಾಂಕ 08-11-2022ರಂದು ಶಿರಹಟ್ಟಿಯಲ್ಲಿ ಜನಸಂಪರ್ಕ ಯಾತ್ರೆಯನ್ನು ಮುಗಿಸಿಕೊಂಡು ಬರುತ್ತಿರುವ ಸಂಧರ್ಭದಲ್ಲಿ ರೋಣ ಕ್ಷೇತ್ರದ…

ಗದಗ ಜಿಲ್ಲೆಯಲ್ಲಿ 72; ರಾಜ್ಯದಲ್ಲಿಂದು 10,947 ಕೊರೊನಾ ಪಾಸಿಟಿವ್!

ಜಿಲ್ಲೆಯಲ್ಲಿಂದು 72 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 9700ಕ್ಕೆ ಏರಿಕೆಯಾಗಿದೆ. ಒಟ್ಟು ಸಕ್ರೀಯ 676 ಪ್ರಕರಣಗಳಿವೆ. ಇಂದು 63 ಜನರು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು ಬಿಡುಗಡೆಯಾಗಿರುವ ಪ್ರಕರಣಗಳ ಸಂಖ್ಯೆ 8889. ಒಟ್ಟು ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 135ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.