ಬೆಂಗಳೂರು : ಕೊರೊನಾ ಸೋಂಕು ಮಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ ಮಕ್ಕಳಿಗೆ ಬಿಸಿಯೂಟದ ಬದಲಿಗೆ ಅಹಾರ ಧಾನ್ಯ ವಿತರಿಸಬೇಕು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಕೋವಿಡ್ ನಿರ್ವಹಣೆ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ಪಿಐಎಲ್ ಅರ್ಜಿಗಳ ವಿಚಾರಣೆ ನಡೆಸಿದ ಸಿಜೆ ಎ. ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ.

ಕಳೆದ ಬಾರಿ ಕೊರೊನಾ ಸೋಂಕಿನಿಂದ ಶಾಲೆಗಳು ನಡೆಯದ ಕಾರಣದಿಂದ ಶಾಲಾ ಮಕ್ಕಳಿಗೆ ಬಿಸಿಯೂಟದ ಬದಲಿಗೆ ಮಕ್ಕಳಿಗೆ ಅಹಾರ ಧಾನ್ಯ ನೀಡಲಾಗಿತ್ತು ಅದೇ ರೀತಿ ಈ ಬಾರಿಯೂ ರಾಜ್ಯ ಸರ್ಕಾರ ಅಹಾರ ಧಾನ್ಯ ವಿತರಿಸಬೇಕು ಎಂದು ನಿರ್ದೇಶನ ನೀಡಿದೆ. ಶಾಲಾ ವಿದ್ಯಾರ್ಥಿಗಳಿಗೆ ಏಪ್ರಿಲ್ 14 ರಿಂದ ಈವರೆಗೆ ಆಹಾರ ಧಾನ್ಯಗಳನ್ನು ಒದಗಿಸಬೇಕು. ಈ ಕುರಿತಂತೆ ಕೈಗೊಂಡ ಕ್ರಮಗಳ ವರದಿಯನ್ನ ಮುಂದಿನ ವಿಚಾರಣೆ ವೇಳೆ ಸಲ್ಲಿಸಬೇಕು ಎಂದು ಸೂಚಿಸಿದೆ.

ನಂತರ ಈ ಲಾಕ್‌ಡೌನ್ ಸಮಯದಲ್ಲಿ ಸಮಾಜದ ದುರ್ಬಲ ವರ್ಗದವರಿಗಾಗಿ ಆಹಾರ ಕಿಟ್ ನೀಡುವ ಕುರಿತು ಮುಂದಿನ ಸೋಮವಾರದೊಳಗಾಗಿ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ನಿರ್ದೇಶಿಸಿದೆ.

Leave a Reply

Your email address will not be published. Required fields are marked *

You May Also Like

ಶೀಘ್ರವಾಗಿ ಎ.ಪಿ.ಎಂ.ಸಿ ಮಾರುಕಟ್ಟೆ ಪ್ರಾರಂಭಿಸಿಲು: ಮನವಿ

ಶಿರಹಟ್ಟಿ ಪಟ್ಟಣವು ತಾಲ್ಲೂಕು ಕೇಂದ್ರವಾಗಿದ್ದು, ಸ್ಥಳೀಯವಾಗಿ ಎಪಿಎಂಸಿ ಸ್ಥಾಪನೆ ಮಾಡಬೇಕೆಂದು ಮಂಗಳವಾರ ತಹಶಿಲ್ದಾರ ಮೂಲಕ ಕರ್ನಾಟಕ ಪ್ರಜಾಪರ ವೇದಿಕೆ ತಾಲೂಕ ಘಟಕದ ವತಿಯಿಂದ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ರಾಜ್ಯ ಸರ್ಕಾರದಿಂದ 13,341 ಉದ್ಯೋಗ ಸೃಷ್ಠಿ

ಕೈಗಾರಿಕೆಗಳ ಸ್ಥಾಪನೆಗೆ ಸರ್ಕಾರ ಆದ್ಯತೆ ನೀಡಲು ಮುಂದಾಗಿದ್ದು, ಇದರಿಂದ ಭಾರೀ ಪ್ರಮಾಣದ ದ್ಯೋಗ ಸೃಷ್ಟಿಯಾಗುವ ಸಾದ್ಯತೆ ಇದೆ. ಈ ಬಗ್ಗೆ ವಿಧಾನಸೌಧದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ 55ನೇ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯಲ್ಲಿ ಒಟ್ಟು 26,659 ಕೋಟಿ ರೂ ಹೂಡಿಕೆಯ 5 ಪ್ರಸ್ತಾವನೆಗಳಿಗೆ ಅನುಮತಿ ದೊರೆತಿದ್ದು, ಇದರಿಂದ ಒಟ್ಟು 13,341 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.

ಮುಂಡರಗಿ: ಬೈಕ್ ಅಪಘಾತ ಸವಾರ ಸ್ಥಳದಲ್ಲೆ ಸಾವು

ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನಲ್ಲಿ ನಡೆದಿದೆ. ಮುಂಡರಗಿ-ಬೂದಿಹಾಳ ರಸ್ತೆ ಮದ್ಯೆದಲ್ಲಿ ಅಪಘಾತ ಸಂಭವಿಸಿದ್ದು ರಾಮಚಂದ್ರ ಕಮ್ಮಾರ(36) ಸ್ಥಳದಲ್ಲಿಯೇ ಸಾವನ್ನಪ್ಪಿದ ಬೈಕ್ ಸವಾರ. ಮುಂಡರಗಿ ಪೊಲೀಸ್ ಟಾಣಾ ವ್ಯಾಪಿಯಲ್ಲಿ ಘಟನೆ ನಡೆದಿದೆ.

ಫೇಸ್ ಬುಕ್ ನಲ್ಲಿ ಪರಿಚಯ ಮಾಡಿಕೊಂಡ ಕಿಲಾಡಿ ಮಹಿಳೆ, ಮಾಡಿದ್ದೇನು?

ಅಹಮದಾಬಾದ್ : ಸಾಮಾಜಿಕ ಜಾಲತಾಣದ ಮೂಲಕ ಉದ್ಯಮಿಯೊಬ್ಬರನ್ನು ಪರಿಚಯ ಮಾಡಿಕೊಂಡಿದ್ದ ಮಹಿಳೆಯೊಬ್ಬರು ಮೋಸ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.