ಬೆಂಗಳೂರು : ಕೊರೊನಾ ಸೋಂಕು ಮಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ ಮಕ್ಕಳಿಗೆ ಬಿಸಿಯೂಟದ ಬದಲಿಗೆ ಅಹಾರ ಧಾನ್ಯ ವಿತರಿಸಬೇಕು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಕೋವಿಡ್ ನಿರ್ವಹಣೆ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ಪಿಐಎಲ್ ಅರ್ಜಿಗಳ ವಿಚಾರಣೆ ನಡೆಸಿದ ಸಿಜೆ ಎ. ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ.

ಕಳೆದ ಬಾರಿ ಕೊರೊನಾ ಸೋಂಕಿನಿಂದ ಶಾಲೆಗಳು ನಡೆಯದ ಕಾರಣದಿಂದ ಶಾಲಾ ಮಕ್ಕಳಿಗೆ ಬಿಸಿಯೂಟದ ಬದಲಿಗೆ ಮಕ್ಕಳಿಗೆ ಅಹಾರ ಧಾನ್ಯ ನೀಡಲಾಗಿತ್ತು ಅದೇ ರೀತಿ ಈ ಬಾರಿಯೂ ರಾಜ್ಯ ಸರ್ಕಾರ ಅಹಾರ ಧಾನ್ಯ ವಿತರಿಸಬೇಕು ಎಂದು ನಿರ್ದೇಶನ ನೀಡಿದೆ. ಶಾಲಾ ವಿದ್ಯಾರ್ಥಿಗಳಿಗೆ ಏಪ್ರಿಲ್ 14 ರಿಂದ ಈವರೆಗೆ ಆಹಾರ ಧಾನ್ಯಗಳನ್ನು ಒದಗಿಸಬೇಕು. ಈ ಕುರಿತಂತೆ ಕೈಗೊಂಡ ಕ್ರಮಗಳ ವರದಿಯನ್ನ ಮುಂದಿನ ವಿಚಾರಣೆ ವೇಳೆ ಸಲ್ಲಿಸಬೇಕು ಎಂದು ಸೂಚಿಸಿದೆ.

ನಂತರ ಈ ಲಾಕ್‌ಡೌನ್ ಸಮಯದಲ್ಲಿ ಸಮಾಜದ ದುರ್ಬಲ ವರ್ಗದವರಿಗಾಗಿ ಆಹಾರ ಕಿಟ್ ನೀಡುವ ಕುರಿತು ಮುಂದಿನ ಸೋಮವಾರದೊಳಗಾಗಿ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ನಿರ್ದೇಶಿಸಿದೆ.

Leave a Reply

Your email address will not be published. Required fields are marked *

You May Also Like

ಹೌಸ್ಫುಲ್.. ಹೌಸ್ಫುಲ್..! ಅದ್ಧೂರಿ ಎಂಟ್ರಿ ಕೊಟ್ಟ ಪೊಗರು

ಖುಷ್ತ್ರಿಭಾಷೆಯಲ್ಲಿ ಬಿಡುಗಡೆಯಾದ ಪೊಗರು ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಶುಕ್ರವಾರ ತೆರೆಕಂಡ ಪೊಗರು ಶಿವನಿಗೆ ಅಭಮಾನಿಗಳು ಫಿದಾ ಆಗಿದ್ದಾರೆ.

ನಾಳೆ ರಾಜ್ಯ ಬಂದ್ – ರೈತರ ಹೋರಾಟದಿಂದಾಗಿ ಏನಿರತ್ತೆ? ಏನಿರಲ್ಲ?

ಬೆಂಗಳೂರು : ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿರುವ ವಿಧೇಯಕ ವಿರೋಧಿಸಿ…

ಈಜಲು ಹೋದ ಇಬ್ಬರು ಹುಡುಗರು ಕ್ವಾರಿಯಲ್ಲೆ ಸಾವು: ಅಗ್ನಿಶಾಮಕ ದಳದಿಂದ ಶೋಧ ಕಾರ್ಯ

ಉತ್ತರಪ್ರಭಗದಗ: ತಾಲೂಕಿನ ಶ್ಯಾಗೋಟಿ ಗ್ರಾಮದ ಇಬ್ಬರು ವಿದ್ಯಾರ್ಥಿಗಳು ಈಜಲು ಹೋಗಿ ಮಣ್ಣು ಹುತಿದ್ದ ದೋಡ್ಡ ಕ್ವಾರಿಯಲ್ಲಿ…

ಆಲಮಟ್ಟಿ 26 ಗೇಟ್ ಓಪನ್ – ಅಪಾರ ನೀರು ಹೊರಕ್ಕೆ

ಉತ್ತರಪ್ರಭ ಸುದ್ದಿಆಲಮಟ್ಟಿ: ನೆರೆಯ ಮಹಾರಾಷ್ಟ್ರ ಕೃಷ್ಣಾ ಕಣಿವೆಯಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆಯಿಂದ ಕೃಷ್ಣಾ ನದಿ ಹರಿವಿನಲ್ಲಿ…