ಬೆಂಗಳೂರು: ಕೆಎಸ್ಆರ್ ಟಿಸಿ ಪದ ಮತ್ತು ಲೋಗೋವನ್ನು ಕೇರಳಪಾಲಾಗಿದೆ ಎಂಬ ಸುದ್ದಿ ಉಪ ಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ನಿರಾಕರಿಸಿದ್ದಾರೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಅವರು, ಕೆ ಎಸ್ ಆರ್ ಟಿಸಿ ಬ್ರ್ಯಾಂಡ್ ಕೇರಳದ ಪಾಲಾಗಿಲ್ಲ. ಕೆಎಸ್​ಆರ್​ಟಿಸಿ ಎಂಬ ಹೆಸರು ಕರ್ನಾಟಕದ ಕೈತಪ್ಪಿದೆ ಎಂಬ ಆತಂಕ ಇಲ್ಲ. ಕೆಎಸ್​ಆರ್​ಟಿಸಿ ಎಂಬ ಹೆಸರನ್ನು ಬಳಸಲು ನಾವು ಸ್ವತಂತ್ರವಾಗಿದ್ದೇವೆ. ಈ ಬಗ್ಗೆ ಕೇರಳ ಸರ್ಕಾರದ ಅನುಮತಿ ನಮಗೆ ಬೇಕಾಗಿಲ್ಲ. ಅಗತ್ಯವಿದ್ದರೆ ನ್ಯಾಯಾಲಯಲ್ಲಿ ಕಾನೂನಾತ್ಮಕ ಹೋರಾಟಗಳನ್ನು ನಡೆಸಲು ನಾವು ಹಿಂದೆ ಬೀಳುವುದಿಲ್ಲ ಎಂದಿದ್ದಾರೆ.

ಕೇರಳ 1965ರಿಂದಲೇ ಕೆಎಸ್​ಆರ್​ಟಿಸಿ ಟ್ರೇಡ್​ ಮಾರ್ಕ್​ನ್ನು ಬಳಸುತ್ತಿದೆ. ಕರ್ನಾಟಕ ಸರ್ಕಾರ 1973ರಿಂದ ಕೆಎಸ್​ಆರ್​​ಟಿಸಿ ಹೆಸರನ್ನು ಬಳಸುತ್ತಿದೆ. ಹೀಗಾಗಿ ನಾವು ಮೊದಲು ಕೆಎಸ್​ಆರ್​ಟಿಸಿ ಹೆಸರು ಬಳಸಿರುವುದರಿಂದ ನಮಗೆ ಈ ಟ್ರೇಡ್ ಮಾರ್ಕ್​ ಕೊಡಬೇಕೆಂದು ಕೇರಳ ಕಾನೂನು ಹೋರಾಟ ನಡೆಸಿತ್ತು. ಈ ಬಗ್ಗೆ ಕೇಂದ್ರ ಸರ್ಕಾರದ ಅಧೀನದ ಟ್ರೇಡ್ ಮಾರ್ಕ್​ಗಳ ರಿಜಿಸ್ಟರ್​ಗೆ ಕೇರಳ ಸರ್ಕಾರ ಅರ್ಜಿ ಸಲ್ಲಿಸಿತ್ತು.

ರಾಜ್ಯದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಹೆಸರಿನಲ್ಲಿ ಬಸ್​ಗಳು ರಸ್ತೆಗಿಳಿಯುತ್ತಿದ್ದವು. ಅತ್ತ ಕೇರಳದಲ್ಲಿ ಕೇರಳ ಸ್ಟೇಟ್ ರೋಡ್ ಟ್ರಾನ್ಸ್​ಪೋರ್ಟ್ ಹೆಸರಿನಲ್ಲಿ ರಸ್ತೆಗಿಳಿಯುತ್ತಿದ್ದ ಕೇರಳ ಸಾರಿಗೆ ಬಸ್​ಗಳು ಸಂಚರಿಸುತ್ತಿದ್ದವು. ಎರಡೂ ರಾಜ್ಯದ ಸಾರಿಗೆ ಸಂಸ್ಥೆ ಬಸ್​ಗಳು ಕೆಎಸ್ಆರ್​ಟಿಸಿ ಟ್ರೇಡ್ ಮಾರ್ಕ್ ಬಳಸುತ್ತಿದ್ದವು. 2014ರಲ್ಲಿ ಕೇರಳಕ್ಕೆ ಈ ಟ್ರೇಡ್ ಮಾರ್ಕ್ ಬಳಸದಂತೆ ಕೇರಳಕ್ಕೆ ಕರ್ನಾಟಕ ನೋಟಿಸ್ ಜಾರಿ ಮಾಡಿತ್ತು.

ಈ ಎರಡೂ ರಾಜ್ಯಗಳ ತಿಕ್ಕಾಟದ ಬಗ್ಗೆ ಸುದೀರ್ಘ 8 ವರ್ಷಗಳಿಂದ ನಡೆದಿದ್ದ ಕಾನೂನು ಹೋರಾಟದಲ್ಲಿ ಕೊನೆಗೆ ಅಂತಿಮವಾಗಿ ಕೇರಳಕ್ಕೆ ಜಯ ಸಿಕ್ಕಿತ್ತು. ಕೆಎಸ್​ಆರ್​ಟಿಸಿ ಬೌದ್ಧಿಕ ಆಸ್ತಿ ಹಕ್ಕು ಕಾಯ್ದೆಯ ಆಧಾರದಲ್ಲಿ ಟ್ರೇಡ್​ ಮಾರ್ಕ್ ರಿಜಿಸ್ಟ್ರಿ ಕೇರಳ ಸರ್ಕಾರಕ್ಕೆ ಕೆಎಸ್​ಆರ್​​ಟಿಸಿ ಟ್ರೇಡ್​​ ಮಾರ್ಕ್​ ನೀಡಿತ್ತು. ಆದರೆ, ಕರ್ನಾಟಕದಲ್ಲಿ ಕೆಎಸ್​ಆರ್​ಟಿಸಿ ಲೋಗೋ ಬಳಸಬಾರದು ಎಂದು ನಮಗೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ರೈತ ವಿರೋಧಿ ಕಾಯ್ದೆ ಹಾಗೂ ಬೆಲೆ ಏರಿಕೆ ಖಂಡಿಸಿ ರ್ಯಾಲಿ ಪ್ರತಿಭಟನೆ.

ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರರ್ಕಾರ, ಸುಳ್ಳು ಆಶ್ವಾಸನೆ ನೀಡುವದರ ಮೂಲಕ ಅಧಿಕಾರವನ್ನು ಪಡೆದುಕೊಂಡ ಮೇಲೆ ಚುನಾವಣೆಯ ಸಂಧರ್ಭದಲ್ಲಿ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿಲ್ಲ.

ರಾಜ್ಯದಲ್ಲಿ ಕೊರೋನಾ ಸೋಂಕು ಹರಡಿದ್ದು ಎಷ್ಟು ಜನರಿಂದ ಗೊತ್ತಾ?

ಈಗಾಗಲೇ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿಲಿದ್ದು ಸೋಂಕಿತರ ಸಂಖ್ಯೆ 700 ಗಡಿ ದಾಟಿದೆ. ಆದರೆ ಇಷ್ಟೊಂದು ಸೋಂಕಿತರ ಸಂಖ್ಯೆ ಹೆಚ್ಚಾಗಲು ಎಷ್ಟು ಜನ ಕಾರಣ ಻ನ್ನೋದು ಮಾತ್ರ ಕುತೂಹಲ.

ಹೊಗಳು ಭಟ್ಟರಿಂದ ದೂರವಿರುವಂತೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಸಲಹೆ ನೀಡಿದ ವಿಶ್ವನಾಥ್!

ಮೈಸೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಹಳ್ಳಿ ಹಕ್ಕಿ ಸಲಹೆ ನೀಡಿದೆ. ಅವರಿಗೆ ಪಕ್ಷದಲ್ಲಿ ಮನ್ನಣೆ ಸಿಗುತ್ತಿಲ್ಲ. ಅವರು ಹೊಗಳು ಭಟ್ಟರಿಂದ ದೂರ ಇರಬೇಕು ಎಂದು ಮಾಜಿ ಸಚಿವ ಎಚ್. ವಿಶ್ವನಾಥ್ ಎಚ್ಚರಿಕೆ ನೀಡಿದ್ದಾರೆ.

ಗದಗ ಜಿಲ್ಲೆಯ ಖಾಕಿ ಖದರ್ ಗೆ ಜನರು ಖುಷ್..!: ಕಳೆದ ವಸ್ತುಗಳು ಕೈಸೇರಿದ್ದಕ್ಕೆ ಜನ್ರು ಖುಷ್ !

ಖಾಕಿ ತನ್ನ ಖದರ್ ತೋರಿಸಿದರೆ ಏನೆಲ್ಲ ಮಾಡಬಹುದು ಎನ್ನುವುದಕ್ಕೆ ಗದಗ ಜಿಲ್ಲೆಯ ಪೊಲೀಸರು ತಾಜಾ ಉದಾಹರಣೆ. ಒಂದು ವರ್ಷದಿಂದ ಜಿಲ್ಲೆಯಲ್ಲಿ ಆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳ್ಳತನ ಜಾಲ ಭೇದಿಸಿ ಕಳ್ಳರ ಹೆಡೆಮುರಿ ಕಟ್ಟಿ ಜನರು ಕಳೆದುಕೊಂಡ ವಸ್ತುಗಳನ್ನು ಮರಳಿಸುವ ಮೂಲಕ ಜಿಲ್ಲಾ ಪೊಲೀಸ್ ಇಂದು ಜನರ ಮೆಚ್ಚುಗೆಗೆ ಪಾತ್ರವಾಯಿತು.