ಧಾರವಾಡ: ಜಿಲ್ಲೆಯಲ್ಲಿ ಮುಖ್ಯ ಬೆಳೆಯೇ ಮೆಣಸಿನ ಕಾಯಿ ಬೆಳೆ. ಆದರೆ ಮೆಣಸಿನಕಾಯಿ ಬೆಳೆದ ರೈತರಿಗೆ ಈ ಭಾರಿ ಮೆಣಸಿನಕಾಯಿ ಖಾರವಾಗಿ ಮಾರ್ಪಟ್ಟಿದೆ. ಈ ಕಾರಣದಿಂದ ಬೆಲೆ ಇಲ್ಲದ ಕಾರಣ ಬೆಳೆದ ಬೆಳೆಯನ್ನು ಅನ್ನದಾತ ನಾಶಪಡಿಸುತ್ತಿದ್ದಾನೆ.

ಲಾಕಡೌನ್ ಹಿನ್ನೆಲೆಯಲ್ಲಿ ಮೆಣಸಿನಕಾಯಿ ದರ ಕುಸಿತಗೊಂಡಿದ್ದು, ಅದನ್ನು ಬೆಳೆದ ರೈತ ಇದೀಗ ಕಣ್ಣೀರು ಹಾಕುವಂತಾಗಿದೆ.

ಮೆಣಸಿನಕಾಯಿಗೆ ಬೆಲೆ ಇಲ್ಲದ ಕಾರಣ ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದ ರೈತನೋರ್ವ ತಾನು ಬೆಳೆದ ಮೆಣಸಿನಕಾಯಿ ಬೆಳೆಯನ್ನೇ ನಾಶಪಡಿಸಿದ್ದಾನೆ.

ರೈತ ಅಜ್ಜಪ್ಪ, ತನ್ನ 3 ಎಕರೆ ಪ್ರದೇಶದಲ್ಲಿ ಮೆಣಸಿನಕಾಯಿ ಬೆಳೆ ಬೆಳೆದಿದ್ದರು. ಆದರೆ, ಪ್ರಸಕ್ತ ಕೊರೊನಾದಿಂದಾಗಿ ಲಾಕಡೌನ್ ಆಗಿದ್ದು, ಪ್ರತಿ ಕೆಜಿ ಮೆಣಸಿನಕಾಯಿಗೆ 5 ರೂಪಾಯಿ ಮಾತ್ರ ಬೆಲೆ ಸಿಗುತ್ತಿದೆ. ಮಾರುಕಟ್ಟೆಯಲ್ಲಿ ಮೆಣಸಿನಕಾಯಿಯನ್ನು ಯಾರೂ ಕೇಳದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಸುಮಾರು 25 ಸಾವಿರಕ್ಕಿಂತಲೂ ಹೆಚ್ಚು ಖರ್ಚು ಮಾಡಿದ ರೈತ, ತನಗೆ ಲಾಭ ಬರದೇ ಇರುವುದರಿಂದ ಇಡೀ ಹೊಲದಲ್ಲಿನ ಮೆಣಸಿನಕಾಯಿ ಬೆಳೆಯನ್ನು ನಾಶಪಡಿಸಿದ್ದಾನೆ.

ತೋಟಗಾರಿಕಾ ಬೆಳೆಗಳಿಗೆ ಬೆಲೆ ಸಿಗದೇ ಅನಿವಾರ್ಯವಾಗಿ ಅವುಗಳನ್ನು ನಾಶಪಡಿಸುತ್ತಿದ್ದಾರೆ. ಅಮ್ಮಿನಬಾವಿ ಗ್ರಾಮದಲ್ಲಿ ಸುಮಾರು 10 ಕ್ಕೂ ಹೆಚ್ಚು ರೈತರು ತೋಟಗಾರಿಕಾ ಬೆಳೆಯನ್ನು ನಾಶಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಏನೇ ಆಗಲಿ ಕೊರೊನಾ ಕರಿ ನೆರಳು ಬೆಳೆ ಬೆಳೆದು ಜಗತ್ತಿಗೆ ಅನ್ನ ಕೊಡುವ ಸ್ವಾಭಿಮಾನಿ ರೈತರ ನೆಮ್ಮದಿಗೂ ಭಂಗ ತಂದಿದೆ.

Leave a Reply

Your email address will not be published. Required fields are marked *

You May Also Like

ಗದಗನಲ್ಲಿ ಬೆಂಕಿಗೆ ಆಹುತಿಯಾದ ಸ್ಕೂಟಿ ಪ್ಲೇಜರ್

ನಗರದ ಗಂಗಾಪೂರ ಪೇಟೆಯ ವೀರನಾರಾಯಣ ದೇವಸ್ಥಾನ ಬಳಿ ನಿಲ್ಲಿಸಿದ ಸ್ಕೂಟಿ ಪ್ಲೇಜರ್ ಆಕಸ್ಮಿಕ ಬೆಂಕಿಗೆ ಹೊತ್ತು ಉರಿಯಿತು.

ಅಕಾಲಿಕೆ ಮಳೆಗೆ ಬೆಳೆ ಹಾನಿ, ಸಾಲದ ಬಾಧೆಯಿಂದ ರೈತ ಆತ್ಮಹತ್ಯೆ.

ಲಕ್ಷ್ಮೇಶ್ವರ:ಅಕಾಲಿಕ ಮಳೆ ಹಾಗೂ ಸಾಲದ ಹೊರೆ ತಾಲೂಕಿನಲ್ಲಿ ರೈತರೊಬ್ಬರ ಜೀವ ತೆಗೆದಿದೆ. ಬೆಳೆದ ಬೆಳೆ ಕಣ್ಣೆದುರೇ…

ಸಂಜನಾ, ರಾಗಿಣಿಗೆ ಬೇಲ್ ಬಾಂಬ್ ಪ್ರಕರಣದ ಹಿಂದಿನ ಸತ್ಯವೇನು?

ತುಮಕೂರು : ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟಿ ಸಂಜನಾ ಹಾಗೂ ರಾಗಿಣಿ ಅವರ ಜಾಮೀನಿಗೆ ಸಂಬಂಧಿಸಿದಂತೆ ಎನ್‍ ಡಿಪಿಎಸ್ ಕೋರ್ಟ್ ನ ನ್ಯಾಯಾಧೀಶರಿಗೆ ಬಾಂಬ್ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಹೊಸ ಟ್ವೀಸ್ಟ್ ಸಿಕ್ಕಿದೆ.

ಬೆಂಗಳೂರು ಹಾಗೂ ಗದಗಿಗೆ ಬರಲಿದೆ ಕೊರೊನಾ ಎಕ್ಸ್ ಪ್ರೆಸ್!

ಬೆಂಗಳೂರು: ಸದ್ಯದಲ್ಲಿಯೇ ಬೆಂಗಳೂರಿಗೆ ಕೊರೊನಾ ಎಕ್ಸ್ ಪ್ರೆಸ್ ಬರಲಿದೆ.ಕರ್ನಾಟಕದ ಗ್ರೀನ್ ಜೋನ್ ಗೆ ದಾಳಿಯಿಟ್ಟ ಮುಂಬಯಿ…