ಗದಗ: ಕಳೆದ 50 ದಿನಗಳಿಂದ ರಾಜ್ಯಾದ್ಯಂತ ಲಾಕ್ಡೌನ ಕಾರಣ ದಿನಗೂಲಿ ಕಾರ್ಮಿಕರು, ಬಡವರು, ನಿರ್ಗತಿಕರು ತುಂಬಾ ಸಂಕಷ್ಟದಲ್ಲಿದ್ದು ಈ ಕಾರಣದಿಂದ ಕಳಸಾಪೂರ ಬಸವಕೇಂದ್ರ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಗ. ಖಂಡಮ್ಮನವರ ವತಿಯಿಂದ ನಗರದ ಹೆರಿಗೆ ಆಸ್ಪತ್ರೆ ಆವರಣ, ಬೆಟಗೇರಿ ರಂಗಪ್ಪಜ್ಜನ ಮಠದ ಆವರಣ, ನಗರಸಭೆ ಹತ್ತಿರ, ಹೆಲ್ಥಕ್ಯಾಂಪ್ನಲ್ಲಿ ಉಪಹಾರ ಸೇವೆ ಮಾಡಲಾಯಿತು.
ಈ ಸೇವಾ ಕಾರ್ಯದಲ್ಲಿ ಶೇಖಣ್ಣ ಕವಳಿಕಾಯಿ, ಅಶೋಕ ಬರಗುಂಡಿ, ಬಸವರಾಜ ಹಡಗಲಿ ಇನ್ನೂ ಅನೇಕರು ಭಾಗವಹಿಸಿದ್ದರು.