ಗದಗ: ಗದಗ ಬೆಟಗೇರಿ ನಗರದ ವಿವಿಧ ವಾರ್ಡುಗಳಲ್ಲಿರುವ ಮಳೆಗಾಲದಲ್ಲಿ ಮಳೆ ನೀರಿನಿಂದ ತುಂಬಿ ಹರಿಯುವ ನಾಲಾ ಮತ್ತು ಚರಂಡಿಗಳನ್ನು ಸ್ವಚ್ಛಗೊಳಿಸುವ ಕಾರ್ಯಕ್ರಮ ಮುಂಜಾಗೃತಾ ಕ್ರಮವಾಗಿ ಆಡಳಿತಾಧಿಕಾರಿಗಳ ನಿರ್ದೇಶನದಂತೆ ಜೂನ್ 3 ರಂದು ಪರಿಸರ ಅಭಿಯಂತರರು, ಹಿರಿಯ ಆರೋಗ್ಯ ನಿರೀಕ್ಷಕರು, ಆಯಾ ವಾರ್ಡುಗಳ ಸೂಪರ್‌ವೈಸರ್‌ಗಳ ಸಭೆ ಕರೆದು ಸಭೆಯಲ್ಲಿ ನಗರದ ಮುಖ್ಯ ನಾಲಾಗಳು ದೊಡ್ಡ ಚರಂಡಿಗಳು ಮತ್ತು ಮುಖ್ಯ ರಸ್ತೆಯ ಚರಂಡಿಗಳು ಹಾಗೂ ವಿವಿಧ ವಾರ್ಡಗಳಲ್ಲಿ ಮಳೆಯಿಂದ ತುಂಬಿ ಹರಿಯುವ ಚರಂಡಿಗಳನ್ನು ಸ್ವಚ್ಛತೆ ಮಾಡಿಸುವ ಕುರಿತು ಚರ್ಚಿಸಲಾಯಿತು.
ಗದಗ ಬೆಟಗೇರಿ ನಗರಸಭೆಯ ವ್ಯಾಪ್ತಿಯಲ್ಲಿ ಸಂಪೂರ್ಣವಾಗಿ ಹೂಳು ತುಂಬಿಕೊoಡಿರುವ ರಾಜ ಕಾಲುವೆ ಮತ್ತು ಚರಂಡಿಗಳನ್ನು ಗುರುತಿಸಿ ಕ್ರಿಯಾ ಯೋಜನೆಯನ್ನು ತಯಾರಿಸಲಾಗಿದ್ದು ಈಗಾಗಲೇ ಮಳೆಗಾಲ ಆರಂಭವಾಗಿರುವುದರಿoದ ಮಳೆಯ ನೀರು ಸರಾಗವಾಗಿ ಹರಿದು ಹೋಗುವಂತೆ ಹೂಳು ತುಂಬಿಕೊoಡಿರುವ ಸರಾಫ್ ಬಜಾರ್, ಬ್ಯಾಂಕ್ ರೋಡ, ಪೊಲೀಸ ಸ್ಟೇಶನ್ ಹಿಂದೆ ಬೇವಿನಕಟ್ಟಿ ನಾಲಾ, ತುಳಜಾ ಭವಾನಿ ಗುಡಿಯ ಮುಂದೆ ಇರುವ ಮುಖ್ಯ ಚರಂಡಿಗಳನ್ನು ಸ್ವಚ್ಛಗೊಳಿಸಲಾಗಿದೆ. ನಗರದ ಕೆಲವು ವಾರ್ಡುಗಳಲ್ಲಿ ಈಗಾಗಲೇ ಚರಂಡಿಗಳನ್ನು ಸ್ವಚ್ಛಗೊಳಿಸಲಾಗಿದ್ದು ಇನ್ನುಳಿದ ಮುಖ್ಯ ಚರಂಡಿಗಳನ್ನು ಸ್ವಚ್ಛಗೊಳಿಸಲು ಕ್ರಿಯಾ ಯೋಜನೆ ತಯಾರಿಸಿದ್ದು ಅದರಂತೆ ನಗರದ ವಿವಿಧ ರಸ್ತೆಯ ಬದಿಯ ಚರಂಡಿಗಳನ್ನು ಸ್ವಚ್ಛಗೊಳಿಸಲು ನಗರಸಭೆ ಪೌರಾಯುಕ್ತರು ಸೂಚಿಸಿದರು. ಯಾವುದೇ ಕಾಲಕ್ಕೆ ಚರಂಡಿಗಳಲ್ಲಿ ಮಳೆ ನೀರು ತುಂಬಿ ಮನೆಗಳಿಗೆ ಹಾನಿಯಾಗದಂತೆ ನೋಡಿಕೊಳ್ಳಲು ಹಾಗೂ ಕ್ರಮ ಜರುಗಿಸಲು ಗದಗ ಬೆಟಗೇರಿ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.
ಕ್ರಿಯಾ ಯೋಜನೆಯ ಪ್ರಕಾರ ಜೂ.30 ರವರೆಗೆ ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯಲ್ಲಿ ಮಳೆ ನೀರು ನುಗ್ಗುವ ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲದಂತೆ ಹಾಗೂ ಮನೆಗಳಿಗೆ ನೀರು ನುಗ್ಗದಂತೆ ಸ್ವಚ್ಛಗೊಳಿಸಲು ಕೆಳಕಂಡ ದಿನಾಂಕಗಳAದು ಕಾರ್ಯ ಕೈಗೊಳ್ಳಲಾಗುವುದು. ಜೂನ್ 6 ರಿಂದ 7 ರವರೆಗೆ ವಾರ್ಡ ನಂ. 1 & 2, ಜೂನ್ 8 ರಿಂದ 9 ರವರೆಗೆ ವಾರ್ಡ ನಂ. 3 & 4, ಜೂನ 8 ರಿಂದ 10 ರವರೆಗೆ ವಾರ್ಡ ನಂ. 5 & 7, ಜೂನ್ 6 ಮತ್ತು 7 ರವರೆಗೆ ವಾರ್ಡ ನಂ. 8 & 9, ಜೂನ್ 6 ರಿಂದ 7 ರವರೆಗೆ 6 & 10 ರವರೆಗೆ, ಜೂನ್ 6 ರಿಂದ 8 ರವರೆಗೆ ವಾರ್ಡ ನಂ. 11 & 12, ಜೂನ್ 8 ರಿಂದ 10 ರವರೆಗೆ ವಾರ್ಡ ನಂ. 27,28,29 ಗಳನ್ನು ಸ್ವಚ್ಛ ಗೊಳಿಸುವ ಕಾರ್ಯ ಕೈಗೊಳ್ಳಲಾಗುವುದು.
ಅದೇ ರೀತಿಯಾಗಿ ಜೂನ್ 6 ರಿಂದ 8 ರವರೆಗೆ ಹಾಗೂ ಜೂನ್ 9 ರಿಂದ 10 ರವರೆಗೆ ವಾರ್ಡ ನಂ.26 ರಲ್ಲಿ, ಜೂನ್ 6 ರಿಂದ 9 ರವರೆಗೆ ಹಾಗೂ 9 ರಿಂದ 10 ರವರೆಗೆ ವಾರ್ಡ ನಂ. 20,31,33 ರಲ್ಲಿ, ಜೂನ್ 6 ರಿಂದ 7 ರವರೆಗೆ ಹಾಗೂ ಜೂನ್ 8, 9 ಹಾಗೂ 10 ರಂದು ವಾರ್ಡ ನಂ. 16 ರಲ್ಲಿ, ಸ್ವಚ್ಛಗೊಳಿಸುವ ಕಾರ್ಯ ಕೈಗೊಳ್ಳಲಾಗುವುದು ಎಂದು ಗದಗ-ಬೆಟಗೇರಿ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಅಮ್ಮನ ಕೂಗು ನಾವೆಷ್ಟು ಜವಾಬ್ದಾರರು..?

ಕೊರೋನಾ ಎಲ್ಲಡೆ ತನ್ನ ಕರಿನೆರಳು ಚಾಚುತ್ತಾ ಹೊರಟಿದೆ . ಈ ನಡುವೆಯೂ ಇಲ್ಲಿಯವರೆಗೂ ಪತ್ತೆಯೇ ಇಲ್ಲದ ವೈರಸ್ ಗಳು ದೇಶ ಎಲ್ಲಡೆ ಪಾದಾರ್ಪಣೆ ಮಾಡುತ್ತಿವೆ. ವಿಪರ್ಯಾಸವೆಂದರೆ ನಮ್ಮ ಜನತೆ ಅನುಭವವಾಗದೆ ಎಚ್ಚೆತ್ತುಕೊಳ್ಳೆವು ಎನ್ನುವ ಹಾಗೆ ವರ್ತಿಸುತ್ತಿರುವುದು ವಿಷಾಧನಿಯ. ದೇಶದ ಕಂಟಕಕ್ಕೆ ಕಾರಣಗಳ ನಿಡುತ್ತಾ, ಸರ್ಕಾರದ ನಿಯಮಗಳ ವಿರುದ್ಧವಾಗಿ ಹೊರಟ ಜನರಿಗೆ, ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ದಂಪತಿಗಳು ಮತ್ತು ಅನ್ ನವನ್ ಕ್ರಿಯೇಶನ್ ತಂಡದ ಸಂಯೋಗದಲ್ಲಿ ಧರ್ಮಸ್ಥಳದ

ಕೊರೋನಾ ಕಾವ್ಯ-10

ಇವತ್ತಿನ ಕೊರೋನಾ ಕಾವ್ಯ ಸರಣಿಗೆ ಕವನ ಕಳುಹಿಸಿದವರು ದಾವಣಗೆರೆಯ ನ್ಯಾಯಾಂಗ ಇಲಾಖೆಯ ಉದ್ಯೋಗಿ ಟಿ.ಆರ್.ಹೇಮಂತ್ ಕುಮಾರ್ ಅವರು.

ಒತ್ತಡ ನಿವಾರಣೆಗೆ ಸಂಗೀತ

ಮಾನವ ಸಂಘ ಜೀವಿ ಸಮಾಜದಲ್ಲಿದ್ದುಕೊಂಡು ಹೊಂದಿಕೊAಡು ಜೀವನ ಸಾಗಿಸುತ್ತಿದ್ದಾನೆ. ಈ ಜೀವನ ಸಾಗಿಸುವುದಕ್ಕಾಗಿ ದಿನಂಪ್ರತಿ ದೇಹ ಮತ್ತು ಬುದ್ಧಿಯನ್ನು ದಂಡಿಸಿ ದುಡಿಯುತ್ತಲೇ ಇದ್ದಾನೆ. ಈ ದಣಿದ ದೇಹ ಮತ್ತು ಬುದ್ಧಿಗೆ ವಿಶ್ರಾಂತಿ ನೀಡಲು ಅವನು ಮೊರೆ ಹೋಗುವುದು ಮನರಂಜನೆಯನ್ನು. ಈ ಮನರಂಜನೆಗಳಲ್ಲಿ ಸಂಗೀತವು ಒಂದು. ಸಂಗೀತವು ಪ್ರತಿ ವ್ಯಕ್ತಿಯ ಜೀವನದ ಅವಿಭಾಜ್ಯ ಅಂಗವೆAದರೆ ತಪ್ಪಾಗಲಾರದು. ಜನನದಿಂದ ಮರಣದವರೆಗು ಸಂಗೀತ ಮಾನವನೊಂದಿಗೆ ಅವಿನಾಭಾವ ಸಂಬAಧ ಹೊಂದಿದೆ. ಮಗು ಗರ್ಭದಲ್ಲಿರುವಾಗಲೇ ಅದು ಸಂಗೀತದೊAದಿಗೆ ಸಂಬAಧ ಹೊಂದುತ್ತದೆ. ಮುಂದೆ ಅದು ಮಣ್ಣಲ್ಲಿ ಮಣ್ಣಾಗುವವರೆಗು ಸಾಗುತ್ತದೆ.

ಕೋವಿಡ್ ನಿಯಮ ಉಲ್ಲಂಘನೆ: ಗದಗ ಜಿಲ್ಲೆ ಗ್ರಾಮೀಣ ಭಾಗದಲ್ಲಿ ದಂಡ ವಸೂಲಿ

ಗದಗ: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಜಿಲ್ಲಾ ಪಂಚಾಯತಿಯಿAದ ಕಾರ್ಯಪಡೆ ತಂಡಗಳನ್ನು ರಚಿಸಲಾಗಿದ್ದು, ಈ ಕಾರೈಪಡೆ ತಂಡಗಳು ಶುಕ್ರವಾರ ಗ್ರಾಮೀಣ ಪ್ರದೇಶಗಳಿಗೆ ತೆರಳಿ ಸೋಂಕು ನಿಯಂತ್ರಣಕ್ಕೆ ಜಾರಿಗೊಳಿಸಲಾದ ನಿಯಮಗಳ ಉಲ್ಲಂಘಿಸಿದ ಸಾರ್ವಜನಿಕರಿಗೆ ಸ್ಥಳದಲ್ಲೆ ದಂಡ ವಿಧಿಸುವ ಮೂಲಕ 30 ಸಾವಿರಕ್ಕೂ ಅಧಿಕ ದಂಡ ವಸೂಲಾಯಿ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ತಿಳಿಸಿದ್ದಾರೆ.