ಮುಳಗುಂದ: ಸ್ಥಳಿಯ ಪಟ್ಟಣ ಪಂಚಾಯ್ತಿ ವತಿಯಿಂದ ಮಳೆ ನೀರು ಹರಿಯುವ ಕಾಲುವೆಗಳ ಹೂಳು ತೆರವು ಕಾರ್ಯ ಶನಿವಾರ ನಡೆಯಿತು.
ವಡ್ಡರಕಣಿ ಹತ್ತಿರದ ಕಾಲುವೆ ಗಿಡಗಂಟಿಗಳು ಬೆಳೆದು ಹೂಳು ತುಂಬಿಕೊಂಡಿತ್ತು. ಇದರಿಂದ ಅಬ್ಬಿಕೆರೆಗೆ ನೀರು ಹರಿದು ಬರಲು ಸಮಸ್ಯೆಯಾಗಿತ್ತು. ಪಂಚಾಯ್ತಿ ಪೌರಕಾರ್ಮಿಕರು ಹಾಗೂ ಜೆಸಿಬಿ ಬಳಸಿ ಹೂಳು ತೆರವುಗೊಳಿಸಿ ಸ್ವಚ್ಛಗೊಳಿಸಿದೆ. ಸಾರ್ವಜನಿಕರು ಮನೆ ಮುಂದಿನ ಚರಂಡಿಗಳಿಗೆ ಕಸ ಹಾಕುವುದರಿಂದ ಹೂಳು ತುಂಬಿ ಮಳೆಗಾಲದಲ್ಲಿ ನೀರು ಸಾಗದೆ ಸಮಸ್ಯೆಯಾಗುತ್ತದೆ. ಮನೆಯಲ್ಲಿ ತ್ಯಾಜ್ಯವನ್ನ ಸಂಗ್ರಹಿಸಿಟ್ಟು ನಿತ್ಯ ಬರುವ ಪಂಚಾಯ್ತಿ ವಾಹನಕ್ಕೆ ಹಾಕಬೇಕು. ಹೀಗೆ ಮಾಡುವುದರಿಂದ ಕೊಳಚೆ ನೀರು ನಿಲ್ಲದಂತೆ ಮಾಡಬಹುದು, ಸಾಂಕ್ರಾಮಿಕ ರೋಗ ಸಂದರ್ಭದಲ್ಲಿ ಜನರು ಸ್ವಚ್ಛತೆಗೆ ಆಧ್ಯತೆ ನೀಡಬೇಕು. ಎಂದು ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಹೇಳಿದರು.

Leave a Reply

Your email address will not be published. Required fields are marked *

You May Also Like

ಒಂದೇ ದಿನಕ್ಕೆ ರಾಜ್ಯದಲ್ಲಿ 50 ಪಾಸಿಟಿವ್

ಒಂದೇ ದಿನಕ್ಕೆ ರಾಜ್ಯದಲ್ಲಿ 50 ಪಾಸಿಟಿವ್ ಬೆಂಗಳೂರು: ರಾಜ್ಯದಲ್ಲಿ ಒಂದೇ ದಿನದಲ್ಲಿ 50 ಪಾಸಿಟಿವ್ ಪ್ರಕರಣಗಳು…

ಸರ್ಕಾರಿ ನೌಕರರಿಗೆ ಹೊಸ ನಿಯಮ ಜಾರಿ

ಬೆಂಗಳೂರು : ಕೊರೊನಾ ಮಹಾಮಾರಿ ನಿಯಂತ್ರಣಕ್ಕೆ ಸಿಗದ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರಿಗೆ ಹೊಸ ನಿಯಮ ಜಾರಿಗೊಳಿಸಲು…

ತಮಿಳುನಾಡಿನಲ್ಲಿ ಕೊರೋನಾ ತಾಂಡವ: ಒಂದೇ ದಿನಕ್ಕೆ 161 ಪಾಸಿಟಿವ್

ತಮಿಳುನಾಡಿನಲ್ಲಿ ಮಹಾಮಾರಿ ಕೊರೊನಾ ವೈರಸ್ ತಾಂಡವಾಡುತ್ತಿದೆ. ಇಂದು ಒಂದೇ ದಿನ ಚೆನ್ನೈನಲ್ಲಿ 138 ಜನ ಸೇರಿದಂತೆ ತಮಿಳುನಾಡಿನಾದ್ಯಂತ ಒಟ್ಟು 161 ಪ್ರಕರಣಗಳು ಪತ್ತೆಯಾಗಿವೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2,323ಕ್ಕೆ ಏರಿಕೆ ಕಂಡಿದೆ.

ಗದಗ ಜಿಪಂ ಅಧ್ಯಕ್ಷರಾಗಿ ರಾಜೂಗೌಡ ಪಾಟೀಲ್ ಅವಿರೋಧ ಆಯ್ಕೆ

ಗದಗ: ಜಿಲ್ಲಾ ಪಂಚಾಯತಿಯ ಅಧ್ಯಕ್ಷರಾಗಿ ರಾಜೂಗೌಡ ಕೆಂಚನಗೌಡ್ರ (ಪಾಟೀಲ) ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಜಿ.ಪಂ.…